AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಮಂಟಪಗಳಲ್ಲಿ ಎಚ್ಚರ ಎಚ್ಚರ..! ಬೆಂಗಳೂರಿನಲ್ಲಿ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್​ ಸಕ್ರಿಯ: ಇಬ್ಬರ ಬಂಧನ

ಮದುವೆ ಹಾಲ್​ಗಳು ಕಂಡ ಕೂಡಲೇ ಸೈಲೆಂಟ್ ಆಗಿ ಎಂಟ್ರಿ ಕೊಟ್ಟು, ಫುಲ್ ಗ್ರ್ಯಾಂಡ್​​​ ಆಗಿ ಮದುವೆ ಛತ್ರಗಳಿಗೆ ಬರುವ ಸಾನ್ಸಿ ಗ್ಯಾಂಗ್​ ವರ-ವಧುವಿನ ರೂಂನ ಬಳಿ ಸುತ್ತಾಡಿ ಜನ ಬೇರೆಡೆ ಗಮನ ಕೊಡ್ತಿದ್ದಂತೆ ಕ್ಷಣಾರ್ಧದಲ್ಲಿ ಚಿನ್ನಾಭರಣ ಕಳವು ಮಾಡುತ್ತಾರೆ.

ಮದುವೆ ಮಂಟಪಗಳಲ್ಲಿ ಎಚ್ಚರ ಎಚ್ಚರ..! ಬೆಂಗಳೂರಿನಲ್ಲಿ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್​ ಸಕ್ರಿಯ: ಇಬ್ಬರ ಬಂಧನ
ಬಂಧಿತ ಆರೋಪಿಗಳು
TV9 Web
| Edited By: |

Updated on: Jun 05, 2022 | 10:07 AM

Share

ಬೆಂಗಳೂರು: ಬೆಂಗಳೂರಿಗರೆ ಮದುವೆ ಮಂಟಪಗಳಲ್ಲಿ ಎಚ್ಚರ ಎಚ್ಚರ! ನಗರದಲ್ಲಿ ಕಾಡಿಯಾ ಸಾನ್ಸಿ ಕಳ್ಳರ ಗ್ಯಾಂಗ್​ ಸಕ್ರಿಯವಾಗಿದ್ದು, ಮದುವೆ ಮಂಟಪಗಳಲ್ಲಿ ಚಿನ್ನಾಭರಣ ದೋಚುತ್ತಿದ್ದ ಮಧ್ಯಪ್ರದೇಶದ ಕಾಡಿಯಾ ಸಾನ್ಸಿ ಗ್ಯಾಂಗ್​ನ ಇಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮದುವೆ ಮನೆ, ಕಲ್ಯಾಣ ಮಂಟಪಗಳೇ ಇವರ ಟಾರ್ಗೆಟ್. ಮದುವೆ ಮಂಟಪಗಳಲ್ಲಿ ಕೊಂಚ ಯಾಮಾರಿದರೆ ಸಾಕು, ಕ್ಷಣಾರ್ಧದಲ್ಲಿ ಚಿನ್ನಾಭರಣ ದೋಚಿ ಪರಾರಿಯಾಗುತ್ತಾರೆ.​​ ಕಾಡಿಯಾ ಸಾನ್ಸಿ ಊರಲ್ಲಿ ಬಡಮಕ್ಕಳನ್ನ ಖರೀದಿ‌ ಮಾಡಿ ಕಳ್ಳತನ ಮಾಡುವ ತರಬೇತಿ ನೀಡಲಾಗುತ್ತದೆ. ತರಬೇತಿ ಬಳಿಕ ಪ್ರಮುಖ ನಗರಗಳಿಗೆ ಯುವಕರು ಎಂಟ್ರಿ ಕೊಡುತ್ತಾರೆ.

ಇದನ್ನೂ ಓದಿ: ‘ಸಾಮ್ರಾಟ್​ ಪೃಥ್ವಿರಾಜ್​’ ಚಿತ್ರ ನೋಡಿ RSS ಮುಖ್ಯಸ್ಥ ಮೋಹನ್​ ಭಾಗವತ್​ ಹೇಳಿದ್ದೇನು? ಇಲ್ಲಿದೆ ವಿಡಿಯೋ

ಮದುವೆ ಹಾಲ್​ಗಳು ಕಂಡ ಕೂಡಲೇ ಸೈಲೆಂಟ್ ಆಗಿ ಎಂಟ್ರಿ ಕೊಟ್ಟು, ಫುಲ್ ಗ್ರ್ಯಾಂಡ್​​​ ಆಗಿ ಮದುವೆ ಛತ್ರಗಳಿಗೆ ಬರುವ ಸಾನ್ಸಿ ಗ್ಯಾಂಗ್​ ವರ-ವಧುವಿನ ರೂಂನ ಬಳಿ ಸುತ್ತಾಡಿ ಜನ ಬೇರೆಡೆ ಗಮನ ಕೊಡ್ತಿದ್ದಂತೆ ಕ್ಷಣಾರ್ಧದಲ್ಲಿ ಚಿನ್ನಾಭರಣ ಕಳವು ಮಾಡುತ್ತಾರೆ. ಗಂಡು, ಹೆಣ್ಣಿನ ಕಡೆಯವರ ಅಂತ ಗುರುತಿಸುವ ಮೊದಲೇ ಚಿನ್ನಾಭರಣ ದೋಚಿ ಕ್ಷಣಾರ್ಧದಲ್ಲಿ ಗ್ಯಾಂಗ್ ಪರಾರಿಯಾಗುತ್ತದೆ.​​​ ಕಾಡಿಯಾ ಸಾನ್ಸಿ ಗ್ಯಾಂಗ್​ ಮೇಲೆ​ ಈಗಾಗಲೇ ಬೆಂಗಳೂರಿನ ಹಲವು ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಚಾಕುವಿನಿಂದ ಹಲ್ಲೆ ಮಾಡಿ, ಬೆದರಿಸಿ ಹಣ ವಸೂಲಿ

ಬೆಂಗಳೂರು: ಚಾಕುವಿನಿಂದ ಹಲ್ಲೆ ಮಾಡಿ, ಬೆದರಿಸಿ ಹಣ ವಸೂಲಿ ಮಾಡಿದ್ದ ಮೂವರು ಆರೋಪಿಗಳ‌ನ್ನು ಯಲಹಂಕ ಪೊಲೀಸರು ಬಂಧನ ಮಾಡಿದ್ದಾರೆ. ಮುನಿರಾಜು, ಮುನಿರಾಜು, ಅಜಿತ್ ಬಂಧಿತ ಆರೋಪಿಗಳು. ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವ್ಯಕ್ತಿ ಓರ್ವ ವೊಡಾಫೋನ್ ಕೇಬಲ್ ರಿಪೇರಿ ಮಾಡುತ್ತಿದ್ದು, ಈ ವೇಳೆ ಮೂವರು ಆರೋಪಿಗಳಿಂದ ಚಾಕುವಿನಿಂದ ಹಲ್ಲೆ ನಡೆಸಿ ಹಣ ನೀಡುವಂತೆ ಬೆದರಿಕೆ ಹಾಕಲಾಗಿದೆ. ಇದು‌ ನಮ್ಮ ಏರಿಯಾ ಯಾರ ಪರ್ಮಿಷನ್ ತೆಗೆದುಕೊಂಡು ಕೆಲಸ ಮಾಡ್ತಾ ಇದೀಯಾ ಅಂತಾ ಅವಾಜ್ ಹಾಕಿದ್ದಾರೆ. ಐದು ಸಾವಿರ ನೀಡುವಂತೆ ಆರೋಪಿಗಳು ಬೆದರಿಕೆ ಹಾಕಿದ್ದು, ನನ್ನ ಬಳಿ ಹಣವಿಲ್ಲವೆಂದು ವೊಡಾಫೋನ್ ಸಿಬ್ಬಂದಿ ಹೇಳಿದ್ದಾರೆ. ನಂತರ ವೊಡಾಪೋನ್ ಸಿಬ್ಬಂದಿಗೆ ಕೈಗೆ ಚಾಕುವಿನಿಂದ ಹಲ್ಲೆ ಮಾಡಿ 800 ರೂ ಹಾಗೂ ಕೇಬಲ್ ಕನೆಕ್ಟ್ ಮಿಷನ್ ಕಿತ್ತುಕೊಂಡು ಹೋಗಿದ್ದಾರೆ. ಇದೀಗ ಮೂವರು ಆರೋಪಿಗಳನ್ನು ಯಲಹಂಕ ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ