AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bangalore Traffic: ಬಿಎಂಟಿಸಿ ಬಸ್ ಟ್ರಾಫಿಕ್​ನಲ್ಲಿ ಸಿಲುಕಿದಾಗಲೇ ಊಟ ಮುಗಿಸಿದ ಚಾಲಕ; ವಿಡಿಯೋ ವೈರಲ್

ಟ್ರಾಫಿಕ್ ಜಾಮ್​​ನಲ್ಲಿ ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ವೈರಲ್ ಆಗಿದೆ.

Bangalore Traffic: ಬಿಎಂಟಿಸಿ ಬಸ್ ಟ್ರಾಫಿಕ್​ನಲ್ಲಿ ಸಿಲುಕಿದಾಗಲೇ ಊಟ ಮುಗಿಸಿದ ಚಾಲಕ; ವಿಡಿಯೋ ವೈರಲ್
ಬಿಎಂಟಿಸಿ ಬಸ್ ಟ್ರಾಫಿಕ್​ನಲ್ಲಿ ಸಿಲುಕಿದಾಗಲೇ ಊಟ ಮುಗಿಸಿದ ಚಾಲಕ; ವಿಡಿಯೋ ವೈರಲ್
ಗಣಪತಿ ಶರ್ಮಾ
|

Updated on: May 30, 2023 | 7:35 PM

Share

ಬೆಂಗಳೂರು: ಟ್ರಾಫಿಕ್ ಜಾಮ್​​ನಲ್ಲಿ (Traffic Jam) ಸಿಲುಕಿ ಪ್ರಯಾಣ ಮುಂದುವರಿಸಲು ಕಾಯುತ್ತಿದ್ದ ಸಂದರ್ಭದಲ್ಲಿ ಬಿಎಂಟಿಸಿ ಬಸ್ (BMTC Bus) ಚಾಲಕರೊಬ್ಬರು ಚಾಲಕರ ಆಸನದಲ್ಲಿಯೇ ಊಟ ಮುಗಿಸಿದ ವಿಡಿಯೋ ವೈರಲ್ ಆಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಲ್ಲಿ ಸೆರೆಹಿಡಿದ ವಿಡಿಯೋವನ್ನು ಸಾಯಿಚಂದ್ ಶಬರೀಶ್ ಎಂಬ ವ್ಯಕ್ತಿ ಇನ್‌ಸ್ಟಾಗ್ರಾಮ್​​ನಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಮೇ 2 ರಂದು ‘ಬೆಂಗಳೂರಿನ ಪೀಕ್ ಟ್ರಾಫಿಕ್ ಮೊಮೆಂಟ್’ ಎಂಬ ಶೀರ್ಷಿಕೆಯೊಂದಿಗೆ ಅಪ್‌ಲೋಡ್ ಮಾಡಲಾದ ವೀಡಿಯೊವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಮಂದಿ ಲೈಕ್ ಮಾಡಿದ್ದಾರೆ.

ಇದಕ್ಕೆ ಹಲವಾರು ನೆಟಿಜನ್‌ಗಳು ಪ್ರತಿಕ್ರಿಯಿಸಿದ್ದು, ಬೆಂಗಳೂರು ಟ್ರಾಫಿಕ್‌ನಲ್ಲಿ ತಾವು ಪಟ್ಟ ಪಾಡನ್ನು ವಿವರಿಸಿದ್ದಾರೆ ಮತ್ತು ಅನೇಕರು ಚಾಲಕನ ಸ್ಥಿತಿಯ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ.

ಇದು ದುಃಖಕರವಾಗಿದೆ. ಟ್ರಾಫಿಕ್‌ನಿಂದಾಗಿ ಚಾಲಕನಿಗೆ ಶಾಂತಿಯುತವಾಗಿ ಕುಳಿತು ಊಟ ಮಾಡಲು ಸಹ ಸಮಯವಿಲ್ಲ ಎಂದು ವ್ಯಕ್ತಿಯೊಬ್ಬರು ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ.

‘ಅವರು ಸಮಯ ನಿರ್ವಹಣೆಯನ್ನು ಬೇರೆಯವರಿಗಿಂತ ಚೆನ್ನಾಗಿ ಅರ್ಥಮಾಡಿಕೊಳ್ಳುತ್ತಾರೆ’ ಎಂದು ಇನ್ನೊಬ್ಬ ವ್ಯಕ್ತಿ ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: Bengaluru Traffic: ಟ್ರಾಫಿಕ್​ನಲ್ಲೇ ಅತಿಹೆಚ್ಚು ಸಮಯ; ನಿಧಾನಗತಿ ನಗರಗಳ ಸಾಲಿನಲ್ಲಿ ಬೆಂಗಳೂರು

‘ಟ್ರಾಫಿಕ್‌ನಲ್ಲಿ ಜನರು ಚಲನಚಿತ್ರಗಳನ್ನು ಮುಗಿಸುವುದನ್ನು ನಾನು ನೋಡಿದ್ದೇನೆ’ ಎಂದು ಇನ್ನೊಬ್ಬರು ಬೆಂಗಳೂರು ಟ್ರಾಫಿಕ್ ಕುರಿತು ಪ್ರತಿಕ್ರಿಯಿಸಿದ್ದಾರೆ.

ಡಚ್ ಲೊಕೇಶನ್ ಟೆಕ್ನಾಲಜಿ ಸಂಸ್ಥೆಯಾದ TomTom 2023 ರ ಫೆಬ್ರವರಿಯಲ್ಲಿ ನಡೆಸಿದ್ದ ಅಧ್ಯಯನದ ಪ್ರಕಾರ, ಬೆಂಗಳೂರನಲ್ಲಿ ವಾಹನ ಚಾಲಕರು ವರ್ಷಕ್ಕೆ ಸರಾಸರಿ 260 ಗಂಟೆಗಳ ಕಾಲ ನಗರದಲ್ಲಿ ಚಾಲನೆ ಅಥವಾ ಪ್ರಯಾಣ ಮಾಡಿದರೆ ಈ ಪೈಕಿ 134 ಗಂಟೆಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!