AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಗಾಗಿ ಹಾಹಾಕಾರ; ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಶಾಕ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆ ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಜಲಮಂಡಳಿ ಶಾಕ್ ನೀಡಿದ್ದು, ಬೋರ್​ವೆಲ್ ಕೊರೆಯುವುದಕ್ಕೆ ಅನುಮತಿ ಕಡ್ಡಾಯ ಮಾಡಿದೆ. ಈ ಕುರಿತು ಮಾಹಿತಿ ಇಲ್ಲಿದೆ.

ನೀರಿಗಾಗಿ ಹಾಹಾಕಾರ; ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಶಾಕ್
ಬೋರ್​ವೆಲ್ ಕೊರೆಯುವವರಿಗೆ ಶಾಕ್
TV9 Web
| Edited By: |

Updated on:Mar 10, 2024 | 1:38 PM

Share

ಬೆಂಗಳೂರು, ಮಾ.10: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆ ಬೇಕಾಬಿಟ್ಟಿ ಬೋರ್ ​ವೆಲ್(Bore Well) ಕೊರೆಯುವವರಿಗೆ ಜಲಮಂಡಳಿ ಶಾಕ್ ನೀಡಿದ್ದು, ಬೋರ್​ವೆಲ್ ಕೊರೆಯುವುದಕ್ಕೆ ಅನುಮತಿ ಕಡ್ಡಾಯ ಮಾಡಿದೆ. ಒಂದು ವೇಳೆ ಅನುಮತಿ ಇಲ್ಲದೇ ಬೋರ್​ ವೆಲ್ ಕೊರೆದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಜೊತೆಗೆ ಅನುಮತಿ ಪಡೆದ ಸ್ಥಳದಲ್ಲಿ ಮಾತ್ರ ಬೋರ್​ವೆಲ್ ಹಾಕಬೇಕು. ಅದಕ್ಕೋಸ್ಕರ ಜಲಮಂಡಳಿಯ ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕೋರಿದೆ. ಅರ್ಜಿ ಸಲ್ಲಿಕೆ ಬಳಿಕ ಅನುಮತಿ ಸಿಕ್ಕರಷ್ಟೇ ಬೋರ್ ವೆಲ್ ಕೊರೆಸಬೇಕು. ಈ ನಿಯಮ ಮಾರ್ಚ್ 15 ರಿಂದ ಜಾರಿಯಾಗಲಿದೆ ಎಂದು ಆದೇಶಿಸಲಾಗಿದೆ.

ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ-ಬಿಡಬ್ಲೂಎಸ್​ಎಸ್​ಬಿ ಅಧ್ಯಕ್ಷ

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ನೀರಿನ ಸಮಸ್ಯೆಗೆ ಕುರಿತು ಮಾತನಾಡಿದ್ದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ‘ರಾಜ್ಯ ಸರ್ಕಾರ ಸಭೆಗಳನ್ನು ನಡೆಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಬೇಡ ಎಂದು ಹೇಳಿದ್ದರು.

ಇದನ್ನೂ ಓದಿ:ಪೈಪ್​ನಲ್ಲಿ ನೀರು ಬಾರದಿದ್ರೂ ಕಟ್ಟಬೇಕು ಬಿಲ್! ಕಾವೇರಿ ನೀರಿಗಾಗಿ ಜಲಮಂಡಳಿಯ ವಿರುದ್ಧ ಜನರ ಕಿಡಿಚ

ಜೊತೆಗೆ ಬೆಂಗಳೂರಿನಲ್ಲಿ ನೀರಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ನೀರಿಲ್ಲವೆಂದು ಟ್ರೋಲ್​ಗಳನ್ನು ಮಾಡಲಾಗುತ್ತಿದೆ. ಆದರೆ, ಇದು ಸುಳ್ಳು. ಕೆಲವು ಅಪಾರ್ಟ್​​ಮೆಂಟ್​ಗಳಲ್ಲಿ ನೀರಿಗೆ ಕೊರತೆಯಾಗಿದೆ. ಇನ್ನುಳಿದಂತೆ ಯಾವುದೇ ಸಮಸ್ಯೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ಕೊಡಲು ಸುದ್ದಿಗೋಷ್ಠಿ ಕರೆದಿದ್ದೇವೆ. ಅಪಾರ್ಟ್​​ಮೆಂಟ್​ಗಳಲ್ಲಿ ಬೋರ್​ವೆಲ್​ಗಳಲ್ಲಿ ನೀರು ಬತ್ತಿದ ಹಿನ್ನೆಲೆ ಕಾವೇರಿ ನೀರಿಗೆ ಬೇಡಿಕೆ ಹೆಚ್ಚಾಗಿದೆ. ಸದ್ಯ, 1450 ಮಿಲಿಯನ್ ಲೀಟರ್ ನೀರು ಪಂಪ್ ಮಾಡುತ್ತಿದ್ದೇವೆ. ಜುಲೈವರೆಗೆ 8 ಟಿಎಂಸಿ ನೀರಿನ ಅವಶ್ಯಕತೆಯಿದ್ದು, ಪ್ರತಿ ತಿಂಗಳಿಗೆ 1.54 ಟಿಎಂಸಿ ನೀರು ಅವಶ್ಯಕತೆಯಿದೆ ಎಂದರು.

ವರದಿ: ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sun, 10 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್