Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿಗಾಗಿ ಹಾಹಾಕಾರ; ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಶಾಕ್

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆ ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಜಲಮಂಡಳಿ ಶಾಕ್ ನೀಡಿದ್ದು, ಬೋರ್​ವೆಲ್ ಕೊರೆಯುವುದಕ್ಕೆ ಅನುಮತಿ ಕಡ್ಡಾಯ ಮಾಡಿದೆ. ಈ ಕುರಿತು ಮಾಹಿತಿ ಇಲ್ಲಿದೆ.

ನೀರಿಗಾಗಿ ಹಾಹಾಕಾರ; ಬೇಕಾಬಿಟ್ಟಿ ಬೋರ್​ವೆಲ್ ಕೊರೆಯುವವರಿಗೆ ಶಾಕ್
ಬೋರ್​ವೆಲ್ ಕೊರೆಯುವವರಿಗೆ ಶಾಕ್
Follow us
TV9 Web
| Updated By: ಕಿರಣ್ ಹನುಮಂತ್​ ಮಾದಾರ್

Updated on:Mar 10, 2024 | 1:38 PM

ಬೆಂಗಳೂರು, ಮಾ.10: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಅಂತರ್ಜಲ ಮಟ್ಟ ಕುಸಿದಿರುವ ಹಿನ್ನೆಲೆ ಬೇಕಾಬಿಟ್ಟಿ ಬೋರ್ ​ವೆಲ್(Bore Well) ಕೊರೆಯುವವರಿಗೆ ಜಲಮಂಡಳಿ ಶಾಕ್ ನೀಡಿದ್ದು, ಬೋರ್​ವೆಲ್ ಕೊರೆಯುವುದಕ್ಕೆ ಅನುಮತಿ ಕಡ್ಡಾಯ ಮಾಡಿದೆ. ಒಂದು ವೇಳೆ ಅನುಮತಿ ಇಲ್ಲದೇ ಬೋರ್​ ವೆಲ್ ಕೊರೆದರೆ ಕ್ರಮ ಕೈಗೊಳ್ಳುವುದಾಗಿ ಹೇಳಿದೆ. ಜೊತೆಗೆ ಅನುಮತಿ ಪಡೆದ ಸ್ಥಳದಲ್ಲಿ ಮಾತ್ರ ಬೋರ್​ವೆಲ್ ಹಾಕಬೇಕು. ಅದಕ್ಕೋಸ್ಕರ ಜಲಮಂಡಳಿಯ ವೆಬ್​ಸೈಟ್​ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕೋರಿದೆ. ಅರ್ಜಿ ಸಲ್ಲಿಕೆ ಬಳಿಕ ಅನುಮತಿ ಸಿಕ್ಕರಷ್ಟೇ ಬೋರ್ ವೆಲ್ ಕೊರೆಸಬೇಕು. ಈ ನಿಯಮ ಮಾರ್ಚ್ 15 ರಿಂದ ಜಾರಿಯಾಗಲಿದೆ ಎಂದು ಆದೇಶಿಸಲಾಗಿದೆ.

ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕಬೇಡ-ಬಿಡಬ್ಲೂಎಸ್​ಎಸ್​ಬಿ ಅಧ್ಯಕ್ಷ

ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಭಾಗಗಳಲ್ಲಿ ನೀರಿನ ಸಮಸ್ಯೆಗೆ ಕುರಿತು ಮಾತನಾಡಿದ್ದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್, ‘ರಾಜ್ಯ ಸರ್ಕಾರ ಸಭೆಗಳನ್ನು ನಡೆಸುತ್ತಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದೆ. ಬೆಂಗಳೂರಿನ ಜನತೆಗೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಬೇಡ ಎಂದು ಹೇಳಿದ್ದರು.

ಇದನ್ನೂ ಓದಿ:ಪೈಪ್​ನಲ್ಲಿ ನೀರು ಬಾರದಿದ್ರೂ ಕಟ್ಟಬೇಕು ಬಿಲ್! ಕಾವೇರಿ ನೀರಿಗಾಗಿ ಜಲಮಂಡಳಿಯ ವಿರುದ್ಧ ಜನರ ಕಿಡಿಚ

ಜೊತೆಗೆ ಬೆಂಗಳೂರಿನಲ್ಲಿ ನೀರಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಗಳು ಹರಿದಾಡುತ್ತಿವೆ. ನೀರಿಲ್ಲವೆಂದು ಟ್ರೋಲ್​ಗಳನ್ನು ಮಾಡಲಾಗುತ್ತಿದೆ. ಆದರೆ, ಇದು ಸುಳ್ಳು. ಕೆಲವು ಅಪಾರ್ಟ್​​ಮೆಂಟ್​ಗಳಲ್ಲಿ ನೀರಿಗೆ ಕೊರತೆಯಾಗಿದೆ. ಇನ್ನುಳಿದಂತೆ ಯಾವುದೇ ಸಮಸ್ಯೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ಕೊಡಲು ಸುದ್ದಿಗೋಷ್ಠಿ ಕರೆದಿದ್ದೇವೆ. ಅಪಾರ್ಟ್​​ಮೆಂಟ್​ಗಳಲ್ಲಿ ಬೋರ್​ವೆಲ್​ಗಳಲ್ಲಿ ನೀರು ಬತ್ತಿದ ಹಿನ್ನೆಲೆ ಕಾವೇರಿ ನೀರಿಗೆ ಬೇಡಿಕೆ ಹೆಚ್ಚಾಗಿದೆ. ಸದ್ಯ, 1450 ಮಿಲಿಯನ್ ಲೀಟರ್ ನೀರು ಪಂಪ್ ಮಾಡುತ್ತಿದ್ದೇವೆ. ಜುಲೈವರೆಗೆ 8 ಟಿಎಂಸಿ ನೀರಿನ ಅವಶ್ಯಕತೆಯಿದ್ದು, ಪ್ರತಿ ತಿಂಗಳಿಗೆ 1.54 ಟಿಎಂಸಿ ನೀರು ಅವಶ್ಯಕತೆಯಿದೆ ಎಂದರು.

ವರದಿ: ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:35 pm, Sun, 10 March 24

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು