AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜಲಕ್ಷಾಮ; ನೀರಿಲ್ಲದೆ ಕಂಗಾಲಾದ ಕೆಂಗೇರಿಯ ಲಗ್ಜುರಿ ಅಪಾರ್ಟ್ಮೆಂಟ್​ನ 2,800 ಕುಟುಂಬಗಳು

ನಗರದ ದೊಡ್ಡಬೆಲೆ ಗ್ರಾಮದಲ್ಲಿರುವ ಕೆಂಗೇರಿ ಹೋಬಳಿಯ ಲಗ್ಜುರಿ ಅಪಾರ್ಟ್ಮೆಂಟ್​ನಲ್ಲಿ ಕಳೆದ 10 ದಿನಗಳಿಂದ ನೀರು ಬರ್ತಿಲ್ಲ. ಇದರಿಂದ 2,800 ಕುಟುಂಬಗಳು ಕಂಗಾಲಾಗಿವೆ. ಒಂದು ಟ್ಯಾಂಕರ್​ ನೀರಿಗಾಗಿ 5 ಸಾವಿರ ರೂ ಕೊಟ್ಟರೂ ನೀರು ಸಿಗುತ್ತಿಲ್ಲ. ಹೀಗಾಗಿ ನಿವಾಸಿಗಳು ಅಪಾರ್ಟ್ಮೆಂಟ್ ಮುಂದೆ ಧರಣಿ ನಡೆಸುತ್ತಿದ್ದಾರೆ.

ಬೆಂಗಳೂರಿನಲ್ಲಿ ಜಲಕ್ಷಾಮ; ನೀರಿಲ್ಲದೆ ಕಂಗಾಲಾದ ಕೆಂಗೇರಿಯ ಲಗ್ಜುರಿ ಅಪಾರ್ಟ್ಮೆಂಟ್​ನ 2,800 ಕುಟುಂಬಗಳು
ಅಪಾರ್ಟ್ಮೆಂಟ್
Poornima Agali Nagaraj
| Updated By: ಆಯೇಷಾ ಬಾನು|

Updated on: Feb 27, 2024 | 11:25 AM

Share

ಬೆಂಗಳೂರು, ಫೆ.27: ಬೇಸಿಗೆ (Summer) ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ (Drinking Water Crisis). ಬೋರ್ ವೆಲ್​ಗಳು ಬತ್ತಿಹೋಗಿವೆ. ಬರ್ತಿದ್ದ ಅಲ್ಪಸ್ವಲ್ಪ ನೀರು ಕೂಡ ಮರೆಯಾಗಿದೆ. ನಗರದ ದೊಡ್ಡಬೆಲೆ ಗ್ರಾಮದಲ್ಲಿರುವ ಕೆಂಗೇರಿ ಹೋಬಳಿಯ ಲಗ್ಜುರಿ ಅಪಾರ್ಟ್ಮೆಂಟ್​ನಲ್ಲಿ ಜಲಕ್ಷಾಮ ಎದುರಾಗಿದ್ದು ಸ್ನಾನಕ್ಕೂ ನೀರಿಲ್ಲದ ಸ್ಥಿತಿ ನಿರ್ಮಾಣವಾಗಿದೆ. ಕಳೆದ 10 ದಿನದಿಂದ‌ ನೀರಿಲ್ಲದೇ ಜನ ಪರದಾಡುತ್ತಿದ್ದಾರೆ. 5 ಸಾವಿರ ರೂಪಾಯಿ ಕೊಟ್ಟು ಒಂದು ಟ್ಯಾಂಕರ್​ ನೀರನ್ನು ಖರೀದಿವಂತಾಗಿದೆ. ಹೀಗಾಗಿ ನಿವಾಸಿಗಳು ಅಪಾರ್ಟ್ಮೆಂಟ್ ಮುಂದೆ ಧರಣಿ ನಡೆಸುತ್ತಿದ್ದಾರೆ.

ಪ್ರಾವಿಡೆಂಟ್ ಸಂವತ್ ಅಪಾರ್ಟ್ಮೆಂಟ್​ನಲ್ಲಿ ಕಳೆದ ಕೆಲ ದಿನಗಳಿಂದ ನೀರಿನ ಸಮಸ್ಯೆ ಎದುರಾಗಿದೆ. ಈ ಅಪಾರ್ಟ್ಮೆಂಟ್​ನಲ್ಲಿ 2,800 ಕುಟುಂಬಗಳು ಪರದಾಡುತ್ತಿದ್ದು ಒಂದು ಟ್ಯಾಂಕರ್​ಗೆ 5000 ರೂಪಾಯಿ ಕೊಟ್ಟರೂ ಸರಿಯಾಗಿ ನೀರು ಸಿಗುತ್ತಿಲ್ಲ. ಹೀಗಾಗಿ ಇಲ್ಲಿನ ನಿವಾಸಿಗಳು ಪ್ರತಿದಿನ ನೀರಿಗಾಗಿ ಒದ್ದಾಡುತ್ತಿದ್ದಾರೆ. ಈ ಕುರಿತಾಗಿ ಬಿಲ್ಡರ್ ಹಾಗೂ ಅಸೋಸಿಯೇಷನ್​ಗಳಿಗೆ ಹೇಳಿದರೂ ಯಾರು ತಲೆಕೆಡಿಸಿಕೊಳ್ತಿಲ್ಲ. ಹೀಗಾಗಿ ಇಂದು ಅಪಾರ್ಟ್ಮೆಂಟ್ ಎದುರು ನಿವಾಸಿಗಳು ಪ್ರತಿಭಟನೆ ಮಾಡುತ್ತಿದ್ದಾರೆ. ಇನ್ನು ಅಪಾರ್ಟ್ಮೆಂಟ್ ನಿವಾಸಿಗಳು ನೀರಿಲ್ಲದೇ ಎಸ್​ಟಿಪಿ ಬಳಕೆ ಮಾಡ್ತಿದ್ದಾರೆ. ಸಧ್ಯ ಎಸ್​ಟಿಪಿ ನೀರನ್ನ ಬಳಕೆ ಮಾಡಿ ಆರೋಗ್ಯದ ಸಮಸ್ಯೆ ಎದುರಾಗಿದೆ. ಆದ ಕಾರಣ ನಮಗೆ ನೀರಿನ ವ್ಯವಸ್ಥೆ ಮಾಡ್ಕೊಡಿ ಎಂದು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ವಾತಾವರಣದಲ್ಲಿ ಏರುಪೇರು; ಮಕ್ಕಳು, ವಯಸ್ಕರು, ವಯೋ ವೃದ್ಧರ ಆರೋಗ್ಯದ ಮೇಲೆ ಎಫೆಕ್ಟ್, ವೈದ್ಯರ ಈ ಸಲಹೆ ಪಾಲಿಸಿ

ನೀರಿಲ್ಲದೇ ಕಂಗಾಲಾದ 808 ಪ್ಲಾಟ್ ಜನರು

ಮತ್ತೊಂದೆಡೆ ಕೆಂಗೇರಿಯಲ್ಲಿ ಕರ್ನಾಟಕ ಹೌಸಿಂಗ್ ಬೋರ್ಡ್‌ ನಿರ್ಮಿಸಿರೋ KHB ಪ್ಲಾಟಿನಂ ಅಪಾರ್ಟ್ ಮೆಂಟ್ ನಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು, 3 ಸಾವಿರ ನಿವಾಸಿಗಳು ನೀರಿಲ್ಲದೇ ಕಂಗಾಲಾಗಿದ್ದಾರೆ. ಒಣಗಿ ನಿಂತ ಗಿಡಗಳು, ನೀರಿಲ್ಲದೇ ಗಲೀಜಾಗಿರೋ ಸ್ವಿಮ್ಮಿಂಗ್ ಪೂಲ್, ಅರೆಬರೆ ನೀರಲ್ಲೇ ನಿತ್ಯ ಜೀವನ ನಡೆಸಿ ಸುಸ್ತಾದ ಜನರು, ಜಲಮಂಡಳಿ, ಗೃಹಮಂಡಳಿ ವಿರುದ್ಧ ಆಕ್ರೋಶ ಹೊರಹಾಕ್ತಿದ್ದಾರೆ.

ಕರ್ನಾಟಕ ಗೃಹಮಂಡಳಿ 808 ಪ್ಲಾಟ್ ಇರೋ ಈ ಅಪಾರ್ಟ್ ಮೆಂಟ್ ನಿರ್ಮಿಸಿದ್ದು, ಇದರಲ್ಲಿ 3 ಸಾವಿರ ಜನರು ವಾಸಿಸುತ್ತಿದ್ದಾರೆ, ನೀರಿನ ಮೂಲವಾಗಿದ್ದ 4 ಬೋರ್ ವೆಲ್ ಬತ್ತಿಹೋಗಿದ್ದು, ಪ್ರತಿನಿತ್ಯ 50 ರಿಂದ 100 ಟ್ಯಾಂಕರ್ ನೀರು ತರಿಸಿದ್ರೂ ದಿನಕ್ಕೆ ಬೆಳಗ್ಗೆ 2 ಗಂಟೆ, ಸಂಜೆ 2 ಗಂಟೆ ಮಾತ್ರ ನೀರು ಬಿಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇರೋ ನೀರನ್ನೇ ಮಿತವಾಗಿ ಬಳಸುವಂತೆ ನೋಟಿಸ್ ಅಂಟಿಸಿದ್ದು, ಅಲ್ಪಸ್ವಲ್ಪ ನೀರಲ್ಲೇ ಬದುಕು ದೂಡುತ್ತಿದ್ದಾರೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಜನಸ್ಪಂದನದಲ್ಲೂ ಮನವಿ ಸಲ್ಲಿಸಿದ್ದ ನಿವಾಸಿಗಳು ಯಾವುದೇ ಸ್ಪಂದನೆ ಸಿಗದಿರೋದಕ್ಕೆ ಮತ್ತಷ್ಟು ಹೈರಾಣಾಗಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ