Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾರು ವಾಷಿಂಗ್, ಗಾರ್ಡನ್​ಗೆ ನೀರು ಬಳಕೆ ಮಾಡಿದರೆ 5 ಸಾವಿರ ರೂ. ದಂಡ

ಬೆಂಗಳೂರು ನಗರದಲ್ಲಿ ಜಲಕ್ಷಾಮ ಎದುರಾಗಿದ್ದು, ಹನಿ ನೀರಿಗೂ ಹಾಹಾಕಾರ ಎದ್ದಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಬಿಡಬ್ಲ್ಯುಎಸ್​ಎಸ್​ಬಿ, ನೀರಿನ ದುರ್ಬಳಕೆ ತಡೆಗಟ್ಟಲು ಮುಂದಾಗಿದೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದ BWSSB, ಮನೋರಂಜಕವಾಗಿ ಅಥವಾ ಆಕರ್ಷಕ ವ್ಯವಸ್ಥೆಗೆ ಅಥವಾ ವಾಹನ ತೊಳೆಯಲು ಇತ್ಯಾದಿಗಳಿಗೆ ಬಳಕೆ ಮಾಡಿದರೆ ಐದು ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಬೆಂಗಳೂರು: ಕಾರು ವಾಷಿಂಗ್, ಗಾರ್ಡನ್​ಗೆ ನೀರು ಬಳಕೆ ಮಾಡಿದರೆ 5 ಸಾವಿರ ರೂ. ದಂಡ
ಬೆಂಗಳೂರಿನಲ್ಲಿ ಜಲಕ್ಷಾಮ: ನೀರು ದುರ್ಬಳಕೆ ಮಾಡಿದರೆ 5 ಸಾವಿರ ದಂಡ ವಿಧಿಸುವ ಎಚ್ಚರಿಕೆ ನೀಡಿದ BWSSB
Follow us
Kiran Surya
| Updated By: Rakesh Nayak Manchi

Updated on:Mar 08, 2024 | 11:39 AM

ಬೆಂಗಳೂರು, ಮಾ.8: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಜಲಕ್ಷಾಮ ಎದುರಾಗಿದ್ದು, ಹನಿ ನೀರಿಗೂ ಹಾಹಾಕಾರ (Drinking Water Problem) ಎದ್ದಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಬಿಡಬ್ಲ್ಯುಎಸ್​ಎಸ್​ಬಿ, ನೀರಿನ ದುರ್ಬಳಕೆ (Water Misus) ತಡೆಗಟ್ಟಲು ಮುಂದಾಗಿದೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದ BWSSB, ಮನೋರಂಜಕವಾಗಿ ಅಥವಾ ಆಕರ್ಷಕ ವ್ಯವಸ್ಥೆಗೆ ಅಥವಾ ವಾಹನ ತೊಳೆಯಲು ಇತ್ಯಾದಿಗಳಿಗೆ ಬಳಕೆ ಮಾಡಿದರೆ ಐದು ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ನೀರು ವ್ಯರ್ಥವಾಗುವುದನ್ನು ತಡೆಗಟ್ಟಲು ಮುಂದಾದ BWSSB, ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದೆ. ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆಗೆ, ಕೈದೋಟ, ಕಟ್ಟಡ ನಿರ್ಮಾಣ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ‌ ಥಿಯೇಟರ್, ಮಾಲುಗಳಲ್ಲಿ ಬಳಸಿದರೆ 5 ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Bengaluru Water Crisis: ಬೆಂಗಳೂರಿನಲ್ಲಿ ಟ್ಯಾಂಕರ್ ಕಳ್ಳಾಟಕ್ಕೆ ಬ್ರೇಕ್, ಕೊನೆಗೂ ಟ್ಯಾಂಕರ್ ನೀರಿಗೆ ದರ ಫಿಕ್ಸ್: ಇಲ್ಲಿದೆ ದರ ವಿವರ

ಜಲಮಂಡಳಿ ಕಾಯ್ದೆ 194 ಕಲಂ 109 ರಂತೆ 5 ಸಾವಿರ ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಉಲ್ಲಂಘನೆ ಮರುಕಳಿಸಿದರೆ 5 ಸಾವಿರ ದಂಡದ ಜೊತೆಗೆ ದಿನಪ್ರತಿ 500 ರೂಪಾಯಿ ಹೆಚ್ಚುವರಿ ದಂಡ ವಸೂಲಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ತಿಪ್ಪೇನಹಳ್ಳಿಯಲ್ಲಿ ಜಲಕ್ಷಾಮ

ಸಿಲಿಕಾನ್ ಸಿಟಿ ಜನರಿಗೆ ಜಲಾಘಾತ ತಪ್ಪುತ್ತಿಲ್ಲ. ಯಶವಂತಪುರ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ತಿಪ್ಪೇನಹಳ್ಳಿಯಲ್ಲಿ ಜಲಕ್ಷಾಮ ಎದುರಾಗಿದ್ದು, ನಿವಾಸಿಗಳು ನೀರಿಲ್ಲದೇ ಕಂಗಾಲಾಗಿದ್ದಾರೆ. ದೊಡ್ಡಬಿದರುಕಲ್ಲು ವಾರ್ಡ್ ವ್ಯಾಪ್ತಿಯಲ್ಲಿರುವ ತಿಪ್ಪೇನಹಳ್ಳಿಯಲ್ಲಿ ವಾರಕ್ಕೊ,15 ದಿನಕ್ಕೊಮ್ಮೆ ನೀರು ಬರುತ್ತಿದ್ದು, ನೀರಿಗಾಗಿ ಕಾಯುವುದೇ ದೊಡ್ಡ ಕೆಲಸವಾಗಿದೆ.

ಊರಿನ ಬೋರ್ ವೆಲ್​ಗಳು ಕೂಡ ಬತ್ತಿ ಹೋಗಿವೆ. ನೀರಿಗಾಗಿ ಕಾದು ಕಾದು ಜನರು ಸುಸ್ತಾಗಿದ್ದಾರೆ. ಹಬ್ಬದ ದಿನವೂ ನೀರಿಲ್ಲದೇ ಬಸವಳಿದ ಜನರು, ನೀರಿಗಾಗಿ ಬಿಂದಿಗೆ ಹಿಡಿದು ಆಕ್ರೋಶ ಹೊರಹಾಕಿದ್ದಾರೆ.

ವರದಿ: ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:32 am, Fri, 8 March 24

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ಮದುವೆ ಮೆರವಣಿಗೆ ವೇಳೆ ವರನನ್ನು ಕುದುರೆಯಿಂದ ಬೀಳಿಸಿ, ಹೊಡೆದ ಜನರು
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ರೋಹಿತ್ ಶರ್ಮಾಗೆ ಬಿಸಿಸಿಐನಿಂದ ವಿಶೇಷ ಗೌರವ; ವಿಡಿಯೋ ನೋಡಿ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
ಬುಸ್ ಬುಸ್ ನಾಗಪ್ಪನಿಂದ ಬೈಕ್ ಸವಾರ ಬಚಾವ್: ಎದೆ ಝಲ್​ ಎನ್ನಿಸುವ ವಿಡಿಯೋ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
‘ಹಾಯ್ ಜನರೇ’: ರೀಲ್ಸ್ ಮಾತ್ರವಲ್ಲ ಈಗ ಸಿನಿಮಾಕ್ಕೂ ಬಂದ ಕಿಪಿ ಕೀರ್ತಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ವರದಿಯ ಬಗ್ಗೆ ಸಿಎಂ ಎಲ್ಲರ ಅಭಿಪ್ರಾಯ ಕೇಳಿದ್ದಾರೆ: ರಾಮಲಿಂಗಾರೆಡ್ಡಿ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಬಿಜೆಪಿಯನ್ನು ಬಹುಮತದೊಂದಿಗೆ ಅಧಿಕಾರಕ್ಕೆ ತರೋದು ಎಲ್ಲರ ಸಂಕಲ್ಪ: ವಿಜಯೇಂದ್ರ
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮೋದಿಯನ್ನು ಭೇಟಿಯಾಗಿ ವಕ್ಫ್ ಕಾಯ್ದೆಗೆ ಧನ್ಯವಾದ ಸಲ್ಲಿಸಿದ ಮುಸ್ಲಿಂ ನಿಯೋಗ!
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಮುಷ್ಕರದಿಂದ ಸಾರ್ವಜನಿಕರಿಗಾದ ತೊಂದರೆಗಾಗಿ ವಿಷಾದಿಸುತ್ತೇವೆ: ಷಣ್ಮುಗಪ್ಪ
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್
ಎಲ್ಲ ಧರ್ಮಗಳಲ್ಲೂ ಶೋಷಿತರು ಮತ್ತು ಬಡವರಿದ್ದಾರೆ: ಡಿಕೆ ಸುರೇಶ್