AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕಾರು ವಾಷಿಂಗ್, ಗಾರ್ಡನ್​ಗೆ ನೀರು ಬಳಕೆ ಮಾಡಿದರೆ 5 ಸಾವಿರ ರೂ. ದಂಡ

ಬೆಂಗಳೂರು ನಗರದಲ್ಲಿ ಜಲಕ್ಷಾಮ ಎದುರಾಗಿದ್ದು, ಹನಿ ನೀರಿಗೂ ಹಾಹಾಕಾರ ಎದ್ದಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಬಿಡಬ್ಲ್ಯುಎಸ್​ಎಸ್​ಬಿ, ನೀರಿನ ದುರ್ಬಳಕೆ ತಡೆಗಟ್ಟಲು ಮುಂದಾಗಿದೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದ BWSSB, ಮನೋರಂಜಕವಾಗಿ ಅಥವಾ ಆಕರ್ಷಕ ವ್ಯವಸ್ಥೆಗೆ ಅಥವಾ ವಾಹನ ತೊಳೆಯಲು ಇತ್ಯಾದಿಗಳಿಗೆ ಬಳಕೆ ಮಾಡಿದರೆ ಐದು ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಬೆಂಗಳೂರು: ಕಾರು ವಾಷಿಂಗ್, ಗಾರ್ಡನ್​ಗೆ ನೀರು ಬಳಕೆ ಮಾಡಿದರೆ 5 ಸಾವಿರ ರೂ. ದಂಡ
ಬೆಂಗಳೂರಿನಲ್ಲಿ ಜಲಕ್ಷಾಮ: ನೀರು ದುರ್ಬಳಕೆ ಮಾಡಿದರೆ 5 ಸಾವಿರ ದಂಡ ವಿಧಿಸುವ ಎಚ್ಚರಿಕೆ ನೀಡಿದ BWSSB
ಕಿರಣ್​ ಸೂರ್ಯ
| Edited By: Rakesh Nayak Manchi|

Updated on:Mar 08, 2024 | 11:39 AM

Share

ಬೆಂಗಳೂರು, ಮಾ.8: ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಜಲಕ್ಷಾಮ ಎದುರಾಗಿದ್ದು, ಹನಿ ನೀರಿಗೂ ಹಾಹಾಕಾರ (Drinking Water Problem) ಎದ್ದಿದೆ. ಹೀಗಾಗಿ ಎಚ್ಚೆತ್ತುಕೊಂಡಿರುವ ಬಿಡಬ್ಲ್ಯುಎಸ್​ಎಸ್​ಬಿ, ನೀರಿನ ದುರ್ಬಳಕೆ (Water Misus) ತಡೆಗಟ್ಟಲು ಮುಂದಾಗಿದೆ. ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದ BWSSB, ಮನೋರಂಜಕವಾಗಿ ಅಥವಾ ಆಕರ್ಷಕ ವ್ಯವಸ್ಥೆಗೆ ಅಥವಾ ವಾಹನ ತೊಳೆಯಲು ಇತ್ಯಾದಿಗಳಿಗೆ ಬಳಕೆ ಮಾಡಿದರೆ ಐದು ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಬೆಂಗಳೂರಿನಲ್ಲಿ ನೀರು ವ್ಯರ್ಥವಾಗುವುದನ್ನು ತಡೆಗಟ್ಟಲು ಮುಂದಾದ BWSSB, ಸಾರ್ವಜನಿಕರು ಕುಡಿಯುವ ನೀರು ಮಿತವಾಗಿ ಬಳಸುವಂತೆ ಸೂಚನೆ ನೀಡಿದೆ. ಕುಡಿಯುವ ನೀರನ್ನು ವಾಹನಗಳ ಸ್ವಚ್ಛತೆಗೆ, ಕೈದೋಟ, ಕಟ್ಟಡ ನಿರ್ಮಾಣ, ಮನೋರಂಜಕವಾಗಿ ಕಾರಂಜಿಯಂತಹ ಆಕರ್ಷಕ ವ್ಯವಸ್ಥೆಗೆ ಹಾಗೂ ಸಿನಿಮಾ‌ ಥಿಯೇಟರ್, ಮಾಲುಗಳಲ್ಲಿ ಬಳಸಿದರೆ 5 ಸಾವಿರ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ: Bengaluru Water Crisis: ಬೆಂಗಳೂರಿನಲ್ಲಿ ಟ್ಯಾಂಕರ್ ಕಳ್ಳಾಟಕ್ಕೆ ಬ್ರೇಕ್, ಕೊನೆಗೂ ಟ್ಯಾಂಕರ್ ನೀರಿಗೆ ದರ ಫಿಕ್ಸ್: ಇಲ್ಲಿದೆ ದರ ವಿವರ

ಜಲಮಂಡಳಿ ಕಾಯ್ದೆ 194 ಕಲಂ 109 ರಂತೆ 5 ಸಾವಿರ ರೂಪಾಯಿ ದಂಡ ವಿಧಿಸಲು ನಿರ್ಧರಿಸಲಾಗಿದೆ. ಉಲ್ಲಂಘನೆ ಮರುಕಳಿಸಿದರೆ 5 ಸಾವಿರ ದಂಡದ ಜೊತೆಗೆ ದಿನಪ್ರತಿ 500 ರೂಪಾಯಿ ಹೆಚ್ಚುವರಿ ದಂಡ ವಸೂಲಿ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ತಿಪ್ಪೇನಹಳ್ಳಿಯಲ್ಲಿ ಜಲಕ್ಷಾಮ

ಸಿಲಿಕಾನ್ ಸಿಟಿ ಜನರಿಗೆ ಜಲಾಘಾತ ತಪ್ಪುತ್ತಿಲ್ಲ. ಯಶವಂತಪುರ ವಿಧಾನಸಭಾಕ್ಷೇತ್ರ ವ್ಯಾಪ್ತಿಯ ತಿಪ್ಪೇನಹಳ್ಳಿಯಲ್ಲಿ ಜಲಕ್ಷಾಮ ಎದುರಾಗಿದ್ದು, ನಿವಾಸಿಗಳು ನೀರಿಲ್ಲದೇ ಕಂಗಾಲಾಗಿದ್ದಾರೆ. ದೊಡ್ಡಬಿದರುಕಲ್ಲು ವಾರ್ಡ್ ವ್ಯಾಪ್ತಿಯಲ್ಲಿರುವ ತಿಪ್ಪೇನಹಳ್ಳಿಯಲ್ಲಿ ವಾರಕ್ಕೊ,15 ದಿನಕ್ಕೊಮ್ಮೆ ನೀರು ಬರುತ್ತಿದ್ದು, ನೀರಿಗಾಗಿ ಕಾಯುವುದೇ ದೊಡ್ಡ ಕೆಲಸವಾಗಿದೆ.

ಊರಿನ ಬೋರ್ ವೆಲ್​ಗಳು ಕೂಡ ಬತ್ತಿ ಹೋಗಿವೆ. ನೀರಿಗಾಗಿ ಕಾದು ಕಾದು ಜನರು ಸುಸ್ತಾಗಿದ್ದಾರೆ. ಹಬ್ಬದ ದಿನವೂ ನೀರಿಲ್ಲದೇ ಬಸವಳಿದ ಜನರು, ನೀರಿಗಾಗಿ ಬಿಂದಿಗೆ ಹಿಡಿದು ಆಕ್ರೋಶ ಹೊರಹಾಕಿದ್ದಾರೆ.

ವರದಿ: ಶಾಂತಮೂರ್ತಿ, ಟಿವಿ9 ಬೆಂಗಳೂರು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:32 am, Fri, 8 March 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸಿದ್ದರಾಮಯ್ಯ ಹಾಗೂ ವಿದೇಶಾಂಗ ಸಚಿವ ಎಸ್ ಜೈಶಂಕರ್ ಆಕಸ್ಮಿಕ ಭೇಟಿ!
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್