AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯ ಜಲದಾಹಕ್ಕೆ ಸಿಗದ ಮುಕ್ತಿ; ನೀರಿಲ್ಲದೇ ಗೋಪಾಲಪುರ, ಹೊಸಹಳ್ಳಿ ಜನರ ಪರದಾಟ

ನೀರಿಗಾಗಿ ಗಂಟೆಗಟ್ಟಲೇ ಕಾದಿದ್ದು ಆಯ್ತು, ನೀರಿಲ್ಲ ಅಂತಾ ಪ್ರತಿಭಟನೆ ಮಾಡಿದ್ದು ಆಯ್ತು. ಆದರೆ ರಾಜಧಾನಿಯ ಜನರ ಜಲಸಂಕಷ್ಟ ಮಾತ್ರ ಇನ್ನೂ ಮುಗಿದಿಲ್ಲ. ಬೆಂಗಳೂರಿನ ಕೆಲ ಏರಿಯಾಗಳಲ್ಲಿ ನೀರಿಗಾಗಿ ಜನರು ನಿತ್ಯ ಯಾತನೆ ಅನುಭವಿಸ್ತಿದ್ದಾರೆ. ನೀರಿಲ್ಲ ನೀರಿಲ್ಲ ಅಂತಾ ಪರದಾಡ್ತಿರೋ ಜನ, ಜಲಸಂಕಷ್ಟಕ್ಕೆ ಮುಕ್ತಿ ಯಾವಾಗ ಅಂತಾ ಕಾದುಕುಳಿತಿದ್ದಾರೆ.

ಸಿಲಿಕಾನ್ ಸಿಟಿಯ ಜಲದಾಹಕ್ಕೆ ಸಿಗದ ಮುಕ್ತಿ; ನೀರಿಲ್ಲದೇ ಗೋಪಾಲಪುರ, ಹೊಸಹಳ್ಳಿ ಜನರ ಪರದಾಟ
ಸಿಲಿಕಾನ್ ಸಿಟಿಯ ಜಲದಾಹಕ್ಕೆ ಸಿಗದ ಮುಕ್ತಿ
TV9 Web
| Edited By: ಆಯೇಷಾ ಬಾನು|

Updated on: May 07, 2024 | 8:43 AM

Share

ಬೆಂಗಳೂರು, ಮೇ.07: ಸಾಲು ಸಾಲು ಡ್ರಮ್ ಗಳು, ಬರಿದಾಗಿರೋ ಜಲಮಂಡಳಿಯ ಟ್ಯಾಂಕ್ ಗಳು, ಬಿಂದಿಗೆ ಹಿಡಿದು ಅಲೆದಾಡ್ತಿರೋ ಜನರು ಬೆಂಗಳೂರಿನ ಜಲದಾಹದ ಕತೆ ಬಿಚ್ಚಿಡ್ತಿವೆ (Water Crisis). ಗಾಂಧಿನಗರ ವಿಧಾನಸಭಾಕ್ಷೇತ್ರದ ಗೋಪಾಲಪುರದಲ್ಲಿ ನೀರು ಬಾರದೇ ಜನರು ಹೈರಾಣಾಗಿಬಿಟ್ಟಿದ್ದಾರೆ. ಅಲ್ಪಸ್ವಲ್ಪ ಬರೋ ನಲ್ಲಿ ನೀರನ್ನೇ ಡ್ರಮ್ ಗೆ ತುಂಬಿ ಬಳಸಬೇಕಾದ ಸ್ಥಿತಿ ನಿರ್ಮಾಣವಾಗಿದ್ದು, ಡ್ರಮ್ ನಲ್ಲಿ ನೀರು ಇಟ್ಟರೂ ಹುಳುಗಳು ಬರ್ತಿರೋದು ಜನರನ್ನ ಮತ್ತಷ್ಟು ಹೈರಾಣಾಗಿಸಿದೆ.

ಇನ್ನು ಈ ಏರಿಯಾದ ಅಂಗನವಾಡಿಗೂ ನೀರಿಲ್ಲದೇ ಮಕ್ಕಳಿಗೂ ಹೊರಗಡೆಯಿಂದ ನೀರು ತರೋ ಸ್ಥಿತಿ ನಿರ್ಮಾಣವಾಗಿದೆ. ಈ ಏರಿಯಾದ ಯಾವುದೇ ಗಲ್ಲಿಗೆ ಹೋದ್ರು ಡ್ರಮ್​ಗಳಲ್ಲಿ ನೀರು ತುಂಬಿಸಿಟ್ಟಿರೋ ದೃಶ್ಯ ಕಂಡುಬರ್ತಿದ್ದು, ನಲ್ಲಿಯಲ್ಲಿ ಕಲುಷಿತ ನೀರು ಬರ್ತಿರೋದು ಕೂಡ ಜನರಿಗೆ ಸಮಸ್ಯೆ ತಂದಿಟ್ಟಿದೆ. ಇತ್ತ ಸುಂಕದಕಟ್ಟೆಯ ಸಮೀಪದಲ್ಲಿರೋ ವಿಘ್ನೇಶ್ವರ ನಗರ, ಹೊಸಹಳ್ಳಿಯಲ್ಲೂ ನೀರಿಗಾಗಿ ಪ್ರತಿನಿತ್ಯ ಜನರು ಪರದಾಡುತ್ತಿದ್ದಾರೆ. ನೆಪಮಾತ್ರಕ್ಕೆ ಟ್ಯಾಂಕ್ ಇಟ್ಟಿರೋ ಜಲಮಂಡಳಿ ನೀರು ಮಾತ್ರ ತುಂಬಿಸ್ತಿಲ್ಲ ಅಂತಾ ಜನರು ಕಿಡಿಕಾರುತ್ತಿದ್ದಾರೆ. ನಲ್ಲಿ ನೀರು ಇಲ್ಲ, ಬೋರ್ ವೆಲ್ ನೀರು ಇಲ್ಲ ಅಂತಿರೋ ನಿವಾಸಿಗಳು, ನೀರು ಬೇಕಂದ್ರೆ 1 ಡ್ರಮ್ ಗೆ 50 ರೂಪಾಯಿ ಕೊಡಬೇಕಿರೋದರಿಂದ ಮತ್ತಷ್ಟು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಯುವ ಮತದಾರರಿಗಾಗಿ ನೂತನ ಮತಗಟ್ಟೆ: ಬಲೂನ್, ಚಿತ್ರಗಳಿಂದ ಮತಗಟ್ಟೆ ಅಲಂಕಾರ

ಒಟ್ಟಿನಲ್ಲಿ ರಾಜಧಾನಿಯ ಜಲದಾಹ ಇನ್ನೂ ಮುಂದುವರಿದಿದ್ದು, ಬೆಂಗಳೂರಿನ ಜನರಿಗೆ ನೀರಿನ ಬವಣೆಯಿಂದ ಮುಕ್ತಿ ಸಿಗದಂತಾಗಿದೆ. ಬಡ-ಮಧ್ಯಮ ವರ್ಗದ ಜನರಿರೋ ಏರಿಯಾಗಳಲ್ಲಿ ಜಲಸಂಕಷ್ಟ ಜನರ ಜೀವ ಹಿಂಡುತ್ತಿದ್ದು, ಸಮಸ್ಯೆಗೆ ಪರಿಹಾರ ಸಿಗುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು