AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Water Crisis: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತೀವ್ರ, ಆನ್​ಲೈನ್ ಕ್ಲಾಸ್ ಮೊರೆ ಹೋದ ಹಲವು ಶಾಲೆಗಳು

ನೀರಿನ ಬಿಕ್ಕಟ್ಟು ತೀವ್ರಗೊಂಡಿರುವುದರಿಂದ ಬೆಂಗಳೂರಿನ ಕೆಲವು ಶಾಲೆಗಳು ರಜೆ ಘೋಷಣೆ ಮಾಡಿದ್ದರೆ, ಇನ್ನು ಕೆಲವು ಶಾಲೆಗಳು ಮತ್ತು ಕೋಚಿಂಗ್ ಸೆಂಟರ್​ಗಳು ಆನ್​​ಲೈನ್ ತರಗತಿಗಳ ಮೊರೆ ಹೋಗಿವೆ. ಕೆಲವು ದಿನಗಳ ಮಟ್ಟಿಗೆ ಆನ್​ಲೈನ್ ತರಗತಿಗಳಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಸೂಚಿಸಿವೆ. ಆ ಕುರಿತ ವಿವರ ಇಲ್ಲಿದೆ.

Bengaluru Water Crisis: ಬೆಂಗಳೂರಿನಲ್ಲಿ ನೀರಿನ ಬಿಕ್ಕಟ್ಟು ತೀವ್ರ, ಆನ್​ಲೈನ್ ಕ್ಲಾಸ್ ಮೊರೆ ಹೋದ ಹಲವು ಶಾಲೆಗಳು
ಸಾಂದರ್ಭಿಕ ಚಿತ್ರ
ಗಣಪತಿ ಶರ್ಮಾ
|

Updated on:Mar 08, 2024 | 7:21 AM

Share

ಬೆಂಗಳೂರು, ಮಾರ್ಚ್ 8: ಬೆಂಗಳೂರು (Bengaluru) ನಗರದಲ್ಲಿ ನೀರಿನ ಬಿಕ್ಕಟ್ಟು (Water Crisis) ತೀವ್ರಗೊಂಡಿರುವುದರಿಂದ ಕೆಲವು ಶಾಲೆಗಳು ಮತ್ತು ಕೋಚಿಂಗ್ ಸೆಂಟರ್​​ಗಳು ವಿದ್ಯಾರ್ಥಿಗಳಿಗೆ ರಜೆ ಘೋಷಣೆ ಮಾಡಿವೆ. ಇನ್ನು ಕೆಲವು ಶಾಲೆಗಳು ಆನ್ಲೈನ್ ತರಗತಿಯ ಮೊರೆ ಹೋಗಿವೆ. ಬೆಂಗಳೂರು ನೀರಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದೆ ಮತ್ತು ಬೇಸಿಗೆ ಈಗಷ್ಟೇ ಆರಂಭವಾಗಿದ್ದು, ಮುಂದಿನ ದಿನಗಳ ಬಗ್ಗೆ ನಗರದ ನಿವಾಸಿಗಳು ತೀವ್ರ ಚಿಂತಿತರಾಗಿದ್ದಾರೆ.

ಬೆಂಗಳೂರಿನ ಕೆಲವು ಶಾಲೆಗಳು ಮತ್ತು ಕೋಚಿಂಗ್ ಸೆಂಟರ್‌ಗಳನ್ನು ಮುಚ್ಚಲಾಗಿದೆ. ‘ಇಂಡಿಯಾ ಟುಡೇ’ ವರದಿಯ ಪ್ರಕಾರ, ಬೆಂಗಳೂರು ನಗರದ ಬನ್ನೇರುಘಟ್ಟ ರಸ್ತೆಯಲ್ಲಿರುವ ಶಾಲೆಯನ್ನು ಮುಚ್ಚಲಾಗಿದೆ ಮತ್ತು ತರಗತಿಗಳನ್ನು ಆನ್‌ಲೈನ್ ಮೋಡ್‌ನಲ್ಲಿ ನಡೆಸಲಾಗುವುದು ಎಂದು ಶಾಲೆ ಘೋಷಿಸಿದೆ. ಅದೇ ರೀತಿ, ನಗರದ ವಿಜಯನಗರ ಪ್ರದೇಶದಲ್ಲಿರುವ ಕೋಚಿಂಗ್ ಸೆಂಟರ್ ಕೂಡ ‘ತುರ್ತು ಪರಿಸ್ಥಿತಿ’ಯ ಕಾರಣ ನೀಡಿ ಒಂದು ವಾರದವರೆಗೆ ಆನ್​ಲೈನ್ ಮೂಲಕ ತರಗತಿಗಳಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದೆ.

ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ಮಾತನಾಡಿದ ಸ್ಥಳೀಯರೊಬ್ಬರು, ಕಳೆದ 6 ತಿಂಗಳಿಂದ ನಮ್ಮ ಪ್ರದೇಶದಲ್ಲಿ ನೀರಿನ ಕೊರತೆ ಇದೆ. ಶ್ರೀಮಂತರು ಟ್ಯಾಂಕರ್‌ನಲ್ಲಿ ನೀರು ಖರೀದಿಸಿದರೂ ನಮ್ಮಂತಹ ಬಡವರು ನೀರಿಗಾಗಿ ಪರದಾಡಬೇಕಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಪ್ರದೇಶದಲ್ಲಿ ಕಾವೇರಿ ನೀರಿನ ಪೈಪ್‌ಲೈನ್ ಹಾಕಲಾಗಿದ್ದರೂ ಇನ್ನೂ ನೀರಿನ ಸಂಪರ್ಕ ಕಲ್ಪಿಸಿಲ್ಲ. ಇಲ್ಲಿಗೆ ಕಾವೇರಿ ನೀರು ಬಂದರೆ ಇಲ್ಲಿನ ಜನರ ನೀರಿನ ಸಮಸ್ಯೆ ಬಗೆಹರಿಯುತ್ತದೆ ಎನ್ನುತ್ತಿದ್ದಾರೆ ಸ್ಥಳೀಯರು.

Water crisis in Bengaluru is severe, many schools have resorted to online classes, some schools announced holiday

ಸಮರ್ಪಕ ನೀರು ಸರಬರಾಜಿಗೆ ಆಗ್ರಹಿಸಿ ಪ್ರತಿಭಟನೆ

ಈ ಮಧ್ಯೆ, ಬಿಜೆಪಿ ಸಂಸದ ನೀರಿನ ಬಿಕ್ಕಟ್ಟನ್ನು ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಅವೈಜ್ಞಾನಿಕವಾಗಿ ನಿರ್ವಹಿಸುತ್ತಿದೆ ಎಂದು ಟೀಕಿಸಿದ್ದಾರೆ. ಜತೆಗೆ, ತ್ವರಿತ ಪರಿಹಾರಕ್ಕಾಗಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಗೆ ಒಂದಷ್ಟು ಸಲಹೆ ನೀಡಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

ತೇಜಸ್ವಿ ಸೂರ್ಯ ಎಕ್ಸ್​​ ಸಂದೇಶ

ಕೈಗಾರಿಕೆಗಳು ಮತ್ತು ನಿರ್ಮಾಣ ವಲಯದಂತಹ ಬೃಹತ್ ಬಳಕೆದಾರರಿಗೆ ಕುಡಿಯಲು ಯೋಗ್ಯವಲ್ಲದ ಬಳಕೆಗಾಗಿ ಸಂಸ್ಕರಿಸಿದ ನೀರನ್ನು ಒದಗಿಸಬೇಕು. ಗೆಚ್ಚು ಅಗತ್ಯ ಇರುವ ಸ್ಥಳಗಳಿಗೆ ಕುಡಿಯುವ ನೀರನ್ನು ಮರುಹಂಚಿಕೆ ಮಾಡಬೇಕು. ಹೊಸ ಬೋರ್‌ವೆಲ್‌ಗಳನ್ನು ಕೊರೆಯುವ ಸ್ಥಳಗಳ ಬಗ್ಗೆ ಭೂವಿಜ್ಞಾನಿಗಳನ್ನು ಸಂಪರ್ಕಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ತೇಜಸ್ವಿ ಸೂರ್ಯ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಟ್ಯಾಂಕರ್ ಕಳ್ಳಾಟಕ್ಕೆ ಬ್ರೇಕ್, ಕೊನೆಗೂ ಟ್ಯಾಂಕರ್ ನೀರಿಗೆ ದರ ಫಿಕ್ಸ್: ಇಲ್ಲಿದೆ ದರ ವಿವರ

ಅಸ್ತಿತ್ವದಲ್ಲಿರುವ ಒಪ್ಪಂದದ ನೀರಿನ ಟ್ಯಾಂಕರ್ ಪೂರೈಕೆಗೆ ಅಡ್ಡಿಪಡಿಸುವ ಬದಲು, ಅವುಗಳನ್ನು ಸಮರ್ಥವಾಗಿ ನಿರ್ವಹಿಸುವ ಮೂಲಕ ನೀರಿನ ಸರಬರಾಜು ಮಾಡಬೇಕು. ಕಾವೇರಿ ಹಂತ-5 ಅನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ಅದರ ಮೂಲಕ ಉದ್ದೇಶಿತ ಪ್ರದೇಶಗಳಲ್ಲಿ ನೀರಿನ ಲಭ್ಯತೆಯನ್ನು ಹೆಚ್ಚಿಸಬಹುದು ಎಂದು ಸೂರ್ಯ ಸಲಹೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:19 am, Fri, 8 March 24

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್