AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮಗೊಂಡನಹಳ್ಳಿಯಲ್ಲಿ ನೀರಿಗೆ ಶುರುವಾಯ್ತು ಜಲಕ್ಷಾಮ; ಎಗ್ಗಿಲ್ಲದೇ ನಡೀತಿದೆ ಟ್ಯಾಂಕರ್ ಮಾಫಿಯ

ಬೇಸಿಗೆ ಆರಂಭಕ್ಕೂ ಮುನ್ನವೇ ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ರಾಮಗೊಂಡನಹಳ್ಳಿಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿದ್ದು ವಾರಕ್ಕೊಮ್ಮೆ ಬರೋ ಅಲ್ಪಸ್ವಲ್ಪ ನೀರನ್ನೇ ಕಾಯುವ ಇಲ್ಲಿನ ಜನರು, ದುಪ್ಪಟ್ಟು ಹಣ ಕೊಟ್ಟು ಟ್ಯಾಂಕರ್ ನೀರು ಖರೀದಿಸಿದ್ರೂ ನೀರಿನ ಬವಣೆ ಮುಗಿಯುತ್ತಿಲ್ಲ. ಜೊತೆಗೆ ನೀರಿನ ಮಾಫಿಯಾದಿಂದ ಬೇಸತ್ತಿದ್ದಾರೆ.

ರಾಮಗೊಂಡನಹಳ್ಳಿಯಲ್ಲಿ ನೀರಿಗೆ ಶುರುವಾಯ್ತು ಜಲಕ್ಷಾಮ; ಎಗ್ಗಿಲ್ಲದೇ ನಡೀತಿದೆ ಟ್ಯಾಂಕರ್ ಮಾಫಿಯ
ರಾಮಗೊಂಡನಹಳ್ಳಿಯಲ್ಲಿ ನೀರಿಗೆ ಶುರುವಾಯ್ತು ಜಲಕ್ಷಾಮ; ಎಗ್ಗಿಲ್ಲದೇ ನಡೀತಿದೆ ಟ್ಯಾಂಕರ್ ಮಾಫಿಯ
TV9 Web
| Edited By: |

Updated on: Mar 04, 2024 | 3:19 PM

Share

ಬೆಂಗಳೂರು, ಮಾರ್ಚ್​.04: ರಾಜಧಾನಿಯ ಜನರು ನೀರಿಲ್ಲ ನೀರಿಲ್ಲ ಅಂತಾ ಪರದಾಡುತ್ತಿದ್ರೆ, ಅತ್ತ ಭೂಮಿಯ ಒಡಲಲ್ಲಿರೋ ಅಲ್ಪಸ್ವಲ್ಪ ನೀರು ಕೂಡ ಟ್ಯಾಂಕರ್ ಮಾಫಿಯಾದಿಂದ (Tanker Mafia) ಜನರಿಗೆ ಸಿಗದಂತಾಗಿದೆ. ಸಿಲಿಕಾನ್ ಸಿಟಿ (Bengaluru) ಜನರ ನೀರಿನ ಸಮಸ್ಯೆಯನ್ನ (Water Crisis) ಅನಾವರಣ ಮಾಡ್ತಿರೋ ಟಿವಿ9 , ಮಹದೇವಪುರ ವಲಯದ ರಾಮಗೊಂಡನಹಳ್ಳಿಯಲ್ಲಿ ನಡೆಯುತ್ತಿರುವ ಟ್ಯಾಂಕರ್ ಮಾಫಿಯಾ ಬಿಚ್ಚಿಟ್ಟಿದೆ. ಊರಿನ ಜನರು ನೀರಿಲ್ಲದೇ ಪರದಾಡುತ್ತಿದ್ರೆ ಇರೋ ಬೋರ್ ವೆಲ್ ನೀರೆಲ್ಲ ಕಂಡವರ ಪಾಲಾಗ್ತಿದ್ದು, ರಾಮಗೊಂಡನಹಳ್ಳಿಯ ಜನರು ಕಂಗಾಲಾಗಿಬಿಟ್ಟಿದ್ದಾರೆ.

ಸದ್ಯ ರಾಜ್ಯ ರಾಜಧಾನಿಯ ಬಹುತೇಕ ಏರಿಯಾಗಳಲ್ಲಿ ನೀರಿಲ್ಲದೇ ಜನ ನರಳುತ್ತಿದ್ದಾರೆ. ಕಳೆದ ಎರಡು ತಿಂಗಳಿಂದ ಟಿವಿ9 ಕೂಡ ಬೆಂಗಳೂರಿನ ಜಲದಾಹವನ್ನ ನಿರಂತರವಾಗಿ ತೆರೆದಿಡುತ್ತಿದೆ. ಅತ್ತ ಅತಿ ಹೆಚ್ಚು ಕೆರೆಗಳನ್ನ ಹೊಂದಿರೋ ಮಹದೇವಪುರ ವಲಯದ ರಾಮಗೊಂಡನಹಳ್ಳಿಯಲ್ಲಿ ನೀರಿಗೆ ಹಾಹಾಕಾರ ಶುರುವಾಗಿಬಿಟ್ಟಿದೆ. ವಾರಕ್ಕೊಮ್ಮೆ ಬರೋ ಅಲ್ಪಸ್ವಲ್ಪ ನೀರನ್ನೇ ಕಾಯುವ ಇಲ್ಲಿನ ಜನರು, ದುಪ್ಪಟ್ಟು ಹಣ ಕೊಟ್ಟು ಟ್ಯಾಂಕರ್ ನೀರು ಖರೀದಿಸಿದ್ರೂ ನೀರಿನ ಬವಣೆ ಮುಗಿಯುತ್ತಿಲ್ಲ.

ಈ ಊರಿನ ಜನ ನೀರಿಲ್ಲ ಅಂತಾ ಪರದಾಡುತ್ತಿದ್ರೆ, ಇದೇ ಊರಿನ ಮುಖ್ಯ ರಸ್ತೆಯಲ್ಲೇ ಸ್ಥಳೀಯರಿಂದಲೇ ಟ್ಯಾಂಕರ್ ಮಾಫಿಯಾ ಎಗ್ಗಿಲ್ಲದೇ ನಡೀತಿದೆ. ಎಲ್ಲೆಲ್ಲಿ ಚೆನ್ನಾಗಿ ನೀರು ಸಿಗುತ್ತೋ ಅಲ್ಲಿ ಬೋರ್ ವೆಲ್ ಕೊರೆಸಿ ರಸ್ತೆಬದಿ ಟ್ಯಾಂಕರ್ ಗಳಿಗೆ ಫಿಲ್ಲಿಂಗ್ ಪಾಯಿಂಟ್ ಮಾಡಿ ಪ್ರತಿನಿತ್ಯ ನೂರಾರು ಟ್ಯಾಂಕರ್ ನೀರನ್ನ ಮಾರಾಟ ಮಾಡಲಾಗ್ತಿದೆ. ಈಗಾಗಲೇ ನೀರಿಲ್ಲದೇ ಬಸವಳಿದ ಜನರಿಗೆ ಇದೀಗ ಟ್ಯಾಂಕರ್ ಮಾಫಿಯಾದಿಂದ ಇತರೆ ಬೋರ್ ವೆಲ್ ನೀರು ಕೂಡ ಬಂದ್ ಆಗಿರೋದು ಮತ್ತಷ್ಟು ಸಂಕಷ್ಟ ತಂದಿಟ್ಟಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ನೀವು ಮುಸ್ಲಿಮರ ಕೈ ಕಡೆದರೂ ಅವರು ನಿಮಗೇ ಮತ ಹಾಕುತ್ತಾರೆ: ಪ್ರತಾಪ್​ ಸಿಂಹ

ಇನ್ನು ಊರಿನಲ್ಲಿ ನಡೀತಿರೋ ಅಕ್ರಮ ಟ್ಯಾಂಕರ್ ದಂಧೆಗೆ ಕಡಿವಾಣ ಹಾಕಿ ಅಂತಾ ಕಳೆದ 5 ವರ್ಷಗಳಿಂದ ಬಿಬಿಎಂಪಿಗೆ ಪತ್ರ ಬರೆದ್ರೂ ಯಾರೊಬ್ಬರೂ ಕ್ರಮ ತೆಗೆದುಕೊಂಡಿಲ್ಲ. ಅತ್ತ ಯಾರಾದ್ರೂ ಟ್ಯಾಂಕರ್ ಮಾಫಿಯಾ ಬಗ್ಗೆ ಮಾತಾಡಿದ್ರೆ ಧಮ್ಕಿ ಹಾಕೋದು ಕೂಡ ನಡೀತಿರೋ ಆರೋಪ ಕೇಳಿ ಬರ್ತಿದ್ದು, ಟ್ಯಾಂಕರ್ ದಂಧೆ ಬಗ್ಗೆ ತುಟಿಬಿಚ್ಚೋಕು ಕೂಡ ಜನ ಹೆದರುವಂತಾಗಿದೆ. ಸಮಸ್ಯೆ ಅರಿವಿದ್ರೂ ಸೈಲೆಂಟ್ ಆಗಿರೋ ಅಧಿಕಾರಿಗಳ ವಿರುದ್ಧ ಜನರು ಕಿಡಿಕಾರುತ್ತಿದ್ದಾರೆ.

ಒಟ್ಟಿನಲ್ಲಿ ಒಂದೆಡೆ ನೀರಿನ ಅಭಾವದಿಂದ ರಾಮಗೊಂಡನಹಳ್ಳಿಯ ಜನರು ತತ್ತರಿಸಿದ್ರೆ, ಮತ್ತೊಂದೆಡೆ ಟ್ಯಾಂಕರ್ ಮಾಫಿಯ ಜನರ ನಿದ್ದೆಗೆಡಿಸಿದೆ. ಇಷ್ಟೆಲ್ಲ ಸಮಸ್ಯೆಯಿದ್ರೂ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಮೌನ ಮುರಿಯದೇ ಇರೋದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ. ಸದ್ಯ ಸಂಬಂಧಪಟ್ಟವರು ಇನ್ನಾದ್ರೂ ಎಚ್ಚೆತ್ತುಕೊಂಡು ಜನರ ಸಮಸ್ಯೆಗೆ ಪರಿಹಾರ ನೀಡಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ