AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲು ಸಾಲು ಪರೀಕ್ಷೆಗಳ ನಡುವೆ ಶಾಲೆಗಳಲ್ಲಿ ಎದುರಾದ ನೀರಿನ ಸಮಸ್ಯೆ; ಕುಡಿಯುವ ನೀರಿನ ವ್ಯವಸ್ಥೆಗಾಗಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಪತ್ರ

ಸಿಲಿಕಾನ್ ಸಿಟಿಯಲ್ಲಿ ನೀರಿನ ಹಾಹಾಕಾರ ಶುರುವಾಗಿದೆ. ಬೇಸಿಗೆ ಆರಂಭದಲ್ಲಿಯೇ ಜನರಿಗೆ ನೀರಿನ ಭವಣೆಯ ಬಿಸಿ ತಟ್ಟಿದ್ದು ಕುಡಿಯುವ ನೀರಿಗಾಗಿ ಜನರು ಪರದಾಡುವಂತಾಗಿದೆ. ಆದರೆ ಇದರ ಬಿಸಿ ಈಗ ಶಾಲಾ ಮಕ್ಕಳಿಗೂ ತಟ್ಟಿದ್ದು ಆತಂಕ ಎದುರಾಗಿದೆ. ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಗಳು ನೀರಿನ ಸಮಸ್ಯೆ ಎದುರಿಸುತ್ತಿದ್ದಾರೆ. ಕೆಲ ಶಾಲೆಗಳಲ್ಲಿ ಶೌಚಾಲಯ ಬಳಕೆಗೂ ನೀರಿಲ್ಲದಂತಹ ಸ್ಥಿತಿ ಎದುರಾಗಿದೆ.

ಸಾಲು ಸಾಲು ಪರೀಕ್ಷೆಗಳ ನಡುವೆ ಶಾಲೆಗಳಲ್ಲಿ ಎದುರಾದ ನೀರಿನ ಸಮಸ್ಯೆ; ಕುಡಿಯುವ ನೀರಿನ ವ್ಯವಸ್ಥೆಗಾಗಿ ಖಾಸಗಿ ಶಾಲೆಗಳ ಒಕ್ಕೂಟದಿಂದ ಪತ್ರ
ನೀರಿನ ಬಿಕ್ಕಟ್ಟು Image Credit source: Allianz Global Investors
ವಿನಯ್​ ಕಾಶಪ್ಪನವರ್​
| Edited By: ಆಯೇಷಾ ಬಾನು|

Updated on: Mar 17, 2024 | 12:43 PM

Share

ಬೆಂಗಳೂರು, ಮಾರ್ಚ್​.17: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸದ್ಯ ನೀರಿಗೆ ಹಾಹಾಕಾರ (Water Crisis) ಎದ್ದಿದ್ದು ಕುಡಿಯುವ ನೀರಿಗೆ ಹಲವಡೆ ವಾಟರ್ ಟ್ಯಾಂಕ್ ಮೊರೆ ಹೋಗಿದ್ದಾರೆ. ಅನೇಕ ಮನೆಗಳಿಗೆ, ಏರಿಯಾಗಳಿಗೆ ವಾಟರ್ ಟ್ಯಾಂಕ್ ನೀರು ಪೂರೈಕೆ ಮಾಡಲಾಗುತ್ತಿದೆ. ಮಳೆಯ ಅಭಾವ, ಅಂತರ್ಜಲ ಕುಸಿತದ ಪರಿಣಾಮ ಕೆರೆ, ಕಟ್ಟೆ, ಬೋರ್‌ವೆಲ್‌ಗಳಲ್ಲಿ ನೀರು ಇಂಗಿಹೋಗಿದೆ. ಹೀಗಾಗಿ ಬೆಂಗಳೂರಿನಾದ್ಯಂತ ಕುಡಿಯುವ ನೀರಿಗೆ ಭಾರಿ ಅಭಾವ ತಲೆದೋರಿದ್ದು ವಾಟರ್ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ ಈ ನೀರಿನ ಸಮಸ್ಯೆ ಈಗ ಸಿಲಿಕಾನ್ ಸಿಟಿಯ ಶಾಲೆಗಳಿಗೂ (School) ತಟ್ಟಿದೆ. ಸದ್ಯ ಶಾಲೆಗಳಲ್ಲಿ ಸಾಲು ಸಾಲು ಪರೀಕ್ಷೆ ನಡೆಯುತ್ತಿದ್ದು ಮಕ್ಕಳಿಗೆ ನೀರಿನ ಸಮಸ್ಯೆ ಶುರುವಾಗಿದೆ.

SSLC ಹಾಗೂ ಪಿಯುಸಿ ಪರೀಕ್ಷೆಗಳಿಗೂ ನೀರಿನ ಬಿಸಿ ಎದುರಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನ ಶಾಲಾ ಕಾಲೇಜುಗಳಲ್ಲಿಯೂ ನೀರಿಗೆ ಹಾಹಾಕಾರ ಶುರುವಾಗಿದೆ. ಸದ್ಯ ಶಾಲೆಗಳಲ್ಲಿ SSLC ಹಾಗು PUC ಪರೀಕ್ಷೆಗಳು ನಡೆಯುತ್ತಿದೆ. ಲಕ್ಷಾಂತರ ಮಕ್ಕಳು ಪರೀಕ್ಷೆ ಬರೆಯತ್ತಿದ್ದಾರೆ. ಆದರೆ ಸದ್ಯ ಶಾಲೆಗಳಲ್ಲಿ ನೀರು ಸಾಕಾಗುತ್ತಿಲ್ಲ. ಹೀಗಾಗಿ ಪರದಾಡುವಂತಾಗಿದೆ. ಸರ್ಕಾರಿ ಹಾಗೂ ಖಾಸಗಿ ಶಾಲೆಯವರು ವಾಟರ್ ಕ್ಯಾನ್ ಗಳನ್ನ ಹೊರಗಡೆಯಿಂದ ತಂದು ನೀರು ಕೊಡಬೇಕಾದ ಸ್ಥಿತಿ ಎದುರಾಗಿದೆ. ಹೀಗಾಗಿ ಪರೀಕ್ಷೆಗಳನ್ನ ನಡೆಸಲು ಶಿಕ್ಷಣ ಸಂಸ್ಥೆಗಳು ಪರದಾಡುತ್ತಿದ್ದು ಈ ಎಲ್ಲ ಪರೀಕ್ಷೆಗಳು ಮುಗಿಯುವವರೆಗೆಯಾದ್ರೂ BWSSB ಯಿಂದ ಕುಡಿಯುವ ನೀರು ನೀಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಸಿಎಂಗೆ ಪತ್ರ ಬರೆದು ಮನವಿಗೆ ಖಾಸಗಿ ಶಾಲೆಗಳ ಒಕ್ಕೂಟ ಮುಂದಾಗಿದೆ.

ಇದನ್ನೂ ಓದಿ: ಸಕ್ಕರೆ ಆರೋಗ್ಯಕ್ಕೆ ಉತ್ತಮ ಅಲ್ಲ, ಆದ್ರೆ ಬೆಲ್ಲ ಉತ್ತಮವೇ?

ಇನ್ನು ಶಾಲೆಗಳಲ್ಲಿ ನೀರಿನ ಸಮಸ್ಯೆ ದೊಡ್ಡದಾಗಿದ್ದು ವಿದ್ಯಾರ್ಥಿಗಳು ಶಿಕ್ಷಕರು ಪರದಾಡುತ್ತಿದ್ದಾರೆ. ಹೀಗಾಗಿ ಪರೀಕ್ಷೆಗಳು ಕಂಪ್ಲೀಟ್ ಮುಗಿಯುವವರೆಗೂ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೀರು ಪೂರೈಸುವಂತೆ ಶಾಲೆಗಳ ಒಕ್ಕೂಟದಿಂದ ಸರ್ಕಾರಕ್ಕೆ ಒತ್ತಾಯ ಕೇಳಿ ಬಂದಿದ್ದು ಶಿಕ್ಷಣ ಸಚಿವರು ಕೂಡಾ ಶಾಲೆಗಳಲ್ಲಿನ ನೀರಿನ ಸಮಸ್ಯೆ ಇದೆ ಸಮಸ್ಯೆಗೆ ಪರಿಹಾರ ಮಾಡ್ತೀವಿ ಎಂದಿದ್ದಾರೆ.

ಒಟ್ನಲ್ಲಿ ಬೆಂಗಳೂರಿನಲ್ಲಿ ಬೇಸಿಗೆ ಮುನ್ನವೆ ಒಂದೆಡೆ ನೀರಿಗೆ ಹಾಹಾಕಾರ ಶುರುವಾಗಿದ್ರೆ, ಮತ್ತೊಂದೆಡೆ ಟ್ಯಾಂಕರ್ ನೀರು ಸೇರಿದಂತೆ ಕಲುಷಿತ ನೀರಿನಿಂದ ಸಾಂಕ್ರಮಿಕ ಖಾಯಿಲೆಗಳ ಏರಿಕೆಯ ಬಿಸಿ ತಟ್ಟಿದೆ. ಈ ನಡುವೆ ಶಾಲಾ ಪರೀಕ್ಷೆಗಳಿಗೂ ನೀರಿನ ಬಿಸಿ ಎದುರಾಗಿದ್ದು ಸರ್ಕಾರ ಶಾಲೆಗಳಿಗೆ ಕುಡಿಯುವ ನೀರಿನ ಸೂಕ್ತ ವ್ಯವಸ್ಥೆ ಕಲ್ಪಿಸಬೇಕಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ