AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಜಲಕ್ಷಾಮ: ಹೋಳಿ ರೈನ್‌ ಡ್ಯಾನ್ಸ್‌ಗೆ ಮುಂದಾಗಿದ್ದ ಹೋಟೆಲ್‌ಗಳಿಗೆ ನೋಟಿಸ್‌

ಬೆಂಗಳೂರು ಮಹಾನಗರದಲ್ಲಿ ಮಳೆ ನೀರಿನ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದೆ. ಇದರಿಂದ ನಗರದಲ್ಲಿನ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಈ ಹಿನ್ನಲೆ ಮಾರ್ಚ್ 25 ರಂದು ನಡೆಯುವ ಹೋಳಿ ಹಬ್ಬ(Holi Habba)ಕ್ಕೆ ಸಜ್ಜಾಗಿದ್ದ ಹೋಟೆಲ್ ಹಾಗೂ ರೆಸಾರ್ಟ್​ಗಳಿಗೆ ಜಲಮಂಡಳಿ ಶಾಕ್‌ ನೀಡಿದ್ದು, ರೈನ್‌ ಡ್ಯಾನ್ಸ್‌ಗೆ ಮುಂದಾಗಿದ್ದ ಹೋಟೆಲ್‌ಗಳಿಗೆ ನೋಟಿಸ್​ ಜಾರಿ ಮಾಡಿದೆ.

ಬೆಂಗಳೂರಿನಲ್ಲಿ ಜಲಕ್ಷಾಮ: ಹೋಳಿ ರೈನ್‌ ಡ್ಯಾನ್ಸ್‌ಗೆ ಮುಂದಾಗಿದ್ದ ಹೋಟೆಲ್‌ಗಳಿಗೆ ನೋಟಿಸ್‌
ಹೋಳಿ ರೈನ್‌ ಡ್ಯಾನ್ಸ್‌ಗೆ ಮುಂದಾಗಿದ್ದ ಹೋಟೆಲ್‌ಗಳಿಗೆ ನೋಟಿಸ್‌
TV9 Web
| Edited By: |

Updated on:Mar 22, 2024 | 8:44 PM

Share

ಬೆಂಗಳೂರು, ಮಾ.22: ಮಾರ್ಚ್ 25 ರಂದು ನಡೆಯುವ ಹೋಳಿ ಹಬ್ಬ(Holi Habba)ಕ್ಕೆ ಸಜ್ಜಾಗಿದ್ದ ಹೋಟೆಲ್ ಹಾಗೂ ರೆಸಾರ್ಟ್​ಗಳಿಗೆ ಜಲಮಂಡಳಿ ಶಾಕ್‌ ನೀಡಿದ್ದು, ರೈನ್‌ ಡ್ಯಾನ್ಸ್‌ಗೆ ಮುಂದಾಗಿದ್ದ ಹೋಟೆಲ್‌ಗಳಿಗೆ ನೋಟಿಸ್​ ಜಾರಿ ಮಾಡಿದೆ. ಬೆಂಗಳೂರು ಮಹಾನಗರದಲ್ಲಿ ಮಳೆ ನೀರಿನ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದೆ. ಇದರಿಂದ ನಗರದಲ್ಲಿನ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಈ ಹಿನ್ನಲೆ ಬೆಂಗಳೂರು ನಗರದಲ್ಲಿ ಜಲಕ್ಷಾಮ ಪರಿಣಾಮ ಡ್ರೈ ಹೋಳಿ ಆಚರಿಸುವಂತೆ ಜಲಮಂಡಳಿ ಅಧಿಕಾರಿಗಳು ಮನವೊಲಿಸಿದ್ದಾರೆ.

ಹೋಳಿ ರೈನ್‌ ಡ್ಯಾನ್ಸ್‌ ಪ್ರಕಟಿಸಿದ್ದ ಹೊಟೇಲ್‌ಗಳಾದ ಮೈಸೂರು ರಸ್ತೆಯ ಜೆ.ಕೆ ಗ್ರಾಂಡ್‌ ಅರೆನಾ, ಜಯಮಹಲ್‌ ಪ್ಯಾಲೇಸ್‌ ಹೋಟೆಲ್‌ಗಳಿಗೆ BWSSB ಅಧಿಕಾರಿಗಳು ಭೇಟಿ ನೀಡಿದ್ದು, ರೈನ್‌ ಡ್ಯಾನ್ಸ್​ಗೆ ಕಾವೇರಿ ಹಾಗೂ ಕೊಳವೆ ಬಾವಿ ನೀರು ಬಳಸದಂತೆ ನೊಟೀಸ್‌ ನೀಡಿದ್ದಾರೆ. ಸಾಂಸ್ಕೃತಿ ಹಬ್ಬವಾಗಿ ಆಚರಣೆಗೆ ಯಾವುದೇ ನಿಷೇಧ ಇಲ್ಲ, ವಾಣಿಜ್ಯ ಉದ್ದೇಶಗಳಿಗಾಗಿ ರೈನ್‌ ಡ್ಯಾನ್ಸ್‌, ಪೂಲ್‌ ಡ್ಯಾನ್ಸ್‌ ಆಯೋಜನೆಯಿಂದ ನೀರು ಪೋಲಾಗುತ್ತದೆ. ಇದನ್ನ ತಡೆಯುವ ನಿಟ್ಟಿನಲ್ಲಿ ಹೋಟಲ್‌ಗಳಿಗೆ ನೊಟೀಸ್​ ನೀಡಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ನೀರಿನ ಸಮಸ್ಯೆ: ಈಜು ಕೊಳಕ್ಕೆ ಕುಡಿಯುವ ನೀರಿನ ಬಳಕೆಗೆ ನಿಷೇಧ

ಬೆಂಗಳೂರು ಮಹಾನಗರದ ನೀರು ಸರಬರಾಜು ವ್ಯವಸ್ಥೆಯ ನಿರ್ವಹಣೆಯನ್ನು ಹೊತ್ತಿರುವ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಎಲ್ಲಾ ನಾಗರಿಕರಿಗೂ ಸಮರ್ಪಕವಾಗಿ ನೀರು ಪೂರೈಸಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರಸ್ತುತ 20,000 ಚದರ ಅಡಿ ಮೇಲ್ಪಟ್ಟ ಕಟ್ಟಡ ನಿರ್ಮಾಣ ಮಾಡುವ ಮಾಲೀಕರುಗಳೊಂದಿಗೆ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ಕಡ್ಡಾಯವಾಗಿ ಸಂಸ್ಕರಿಸಿದ ನೀರನ್ನು ಬಳಸುವಂತೆ ಹಾಗೂ ತಮ್ಮಲ್ಲಿರುವ ಕೊಳವೆಬಾವಿಯ ಮೂಲದ ನೀರನ್ನು ಬೇಸಿಗೆ ಕಾಲದವರೆಗೆ ಮಂಡಳಿಯ ಉಪಯೋಗಕ್ಕೆ ಹಸ್ತಾಂತರಿಸಿ ಬೆಂಗಳೂರು ನಾಗರೀಕರ ನೀರು ಸರಬರಾಜಿಗೆ ಅನುವು ಮಾಡಿಕೊಡುವಂತೆ ಕೋರಿಕೊಳ್ಳಲಾಗಿತ್ತು. ಈ ಬಗ್ಗೆ ಎಲ್ಲರೂ ಸಕಾರತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:41 pm, Fri, 22 March 24

ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!