AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಹೊರಮಾವು ಪ್ರದೇಶದಲ್ಲಿ 300-400 ಮನೆಗಳು ಜಲಾವೃತ! 24 ಗಂಟೆಗೆ 114 ಮಿಮೀ ಮಳೆ ದಾಖಲು

ಪ್ರತಿ ವರ್ಷ ಹಬ್ಬದಂತೆ ಇದನ್ನು ಕೂಡ ನಾವು ಆಚರಣೆ ಮಾಡಬೇಕು. ಮಾಡಿದ್ದ ಅಡುಗೆ ತಿನ್ನಲು ಆಗಲಿಲ್ಲ. ಎಲ್ಲ ಅನ್ನ ನೀರು ಪಾಲಾಯ್ತು. ಸರ್ಕಾರದ ಜನಪ್ರತಿನಿಧಿ ಸರಿಯಾಗಿ ಸ್ಪಂದಿಸುತ್ತಿಲ್ಲ.

ಬೆಂಗಳೂರು ಹೊರಮಾವು ಪ್ರದೇಶದಲ್ಲಿ 300-400 ಮನೆಗಳು ಜಲಾವೃತ! 24 ಗಂಟೆಗೆ 114 ಮಿಮೀ ಮಳೆ ದಾಖಲು
ಹೊರಮಾವು ಪ್ರದೇಶದಲ್ಲಿ ನಿಂತಿರುವ ನೀರು
TV9 Web
| Edited By: |

Updated on:May 18, 2022 | 1:02 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿನ್ನೆ (ಮೇ 17) ಸುರಿದ ಬಾರೀ ಮಳೆಗೆ (Heavy Rain) ಅವಾಂತರ ಸೃಷ್ಟಿಯಾಗಿದೆ. ಧಾರಕಾರ ಮಳೆಗೆ ನಗರದ ಹೊರಮಾವು (Horamavu) ಪ್ರದೇಶದಲ್ಲಿ 300ರಿಂದ 400 ಮನೆಗಳು ಜಲಾವೃತವಾಗಿವೆ. ಮನೆಯಲ್ಲಿ ನಿಂತ ನೀರು ಹೊರಹಾಕಲಾಗದೇ ಜನರು ಪರದಾಡುತ್ತಿದ್ದಾರೆ. ಸ್ಥಳೀಯರು ಟ್ರಾಕ್ಟರ್ ಮೂಲಕ ತೆರಳಿ ಆಹಾರ ಹಂಚುತ್ತಿದ್ದಾರೆ. ಸದ್ಯ ಮೊದಲ ಮಹಡಿ ಹಾಗೂ ಎರಡನೇ ಮಹಡಿಗೆ ತೆರಳಿ ಆಶ್ರಯ ಪಡಿತಿದ್ದಾರೆ. ಘಟನಾ ಸ್ಥಳಕ್ಕೆ ಶಾಸಕ ಬೈರತಿ ಬಸವರಾಜ್ ಭೇಟಿ ನೀಡಿದ್ದಾರೆ.

ಇನ್ನು ವಡ್ಡತಹಳ್ಳಿ, ಶ್ರೀ ಸಾಯಿ ಬಡಾವಣೆಯಲ್ಲಿ ನೀರು ನುಗ್ಗಿದ್ದು, ಸರ್ಕಾರ ಹಾಗೂ ಜನಪ್ರತಿಧಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿ ವರ್ಷ ಹಬ್ಬದಂತೆ ಇದನ್ನು ಕೂಡ ನಾವು ಆಚರಣೆ ಮಾಡಬೇಕು. ಮಾಡಿದ್ದ ಅಡುಗೆ ತಿನ್ನಲು ಆಗಲಿಲ್ಲ. ಎಲ್ಲ ಅನ್ನ ನೀರು ಪಾಲಾಯ್ತು. ಸರ್ಕಾರದ ಜನಪ್ರತಿನಿಧಿ ಸರಿಯಾಗಿ ಸ್ಪಂದಿಸುತ್ತಿಲ್ಲ. ನಾವು ಟ್ಯಾಕ್ಸ್ ಕಟ್ಟೋದು ಈ ರೀತಿ ಕಷ್ಟ ಪಡೋದಕ್ಕಾ? ಪೆಟ್ರೋಲ್, ಡೀಸೆಲ್, ದಿನಸಿ ಬೆಲೆ ಮೊದಲೇ ಜಾಸ್ತಿ ಆಗಿದೆ. ಈಗ ಹಾಳಾಗಿರೊ ಗೃಹಪಯೋಗಿ ವಸ್ತು ತೆಗೆದುಕೊಳ್ಳಲು ಮತ್ತೆ ಖರ್ಚು ಮಾಡಬೇಕು ಅಂತ ಜನರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: Indrani Mukerjea: ಶೀನಾ ಬೋರಾ ಕೊಲೆ ಕೇಸ್; ಕೊನೆಗೂ ಇಂದ್ರಾಣಿ ಮುಖರ್ಜಿಗೆ ಜಾಮೀನು ಮಂಜೂರು

24 ಗಂಟೆ ಅವಧಿಯಲ್ಲಿ 114 ಮಿಮೀ ಮಳೆ ದಾಖಲು: ಬೆಂಗಳೂರಿನಲ್ಲಿ ಕಳೆದ 24 ಗಂಟೆಗೆ 114 ಮಿಮೀ ಮಳೆ ದಾಖಲಾಗಿದೆ. 2017 ರ ಆಗಸ್ಟ್ 15 ರಂದು 128 ಮಿಮೀ ಮಳೆ ಸುರಿದಿತ್ತು. ಈ ವರ್ಷದ ಮೇ ತಿಂಗಳಲ್ಲಿ ನಗರದಲ್ಲಿ ಇದುವರೆಗೆ ಐಎಂಡಿ ಕೇಂದ್ರದಲ್ಲಿ 253 ಮಿಮೀ ಮಳೆ ದಾಖಲಾಗಿದೆ.

ಟಿವಿ9 ಮುಂದೆ ಮಹಿಳೆ ಕಣ್ಣೀರು: ಎಚ್​ಬಿಆರ್ ಲೇಔಟ್​ನಲ್ಲಿ ಮನೆ ಜಲಾವೃತವಾಗಿದೆ. ಟಿವಿ9 ಬಳಿ ಮಹಿಳೆ ಕಣ್ಣೀರು ಹಾಕಿ ಸಮಸ್ಯೆ ಹೇಳಿಕೊಂಡಿದ್ದಾರೆ. ಮನೆಗೆ ರಾತ್ರಿ ಏಕಾಏಕಿ ನೀರು ನುಗ್ಗಿತು. ಮನೆಯಲ್ಲಿ ಚಿಕ್ಕ ಮಗು ಇತ್ತು. ಊಟ ಇಲ್ಲದೆ ಮನೆಯವರು ಇಡಿ ರಾತ್ರಿ ಕಳೆದಿದ್ದಾರೆ. ನಮ್ಮ ಗೋಳು ಕೇಳೋರು ಯಾರು ಇಲ್ಲ. ಸಮಸ್ಯೆ ಬಂದಾಗ ಬರುತ್ತಾರೆ, ಮತ್ತೆ ಏನೂ ಮಾಡಲ್ಲ. ನಮ್ಮ ಸಮಸ್ಯೆ ನಾವೇ ಬಗೆ ಹರಿಸಿಕೊಳ್ಳಬೇಕು ಅಂತ ಮಹಿಳೆ ಹೇಳಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:51 pm, Wed, 18 May 22

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!