AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇತ್ತೀಚೆಗೆ ಉದ್ಘಾಟನೆಗೊಂಡ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸೋರಿಕೆ; ಟ್ವಿಟರ್​ನಲ್ಲಿ ವಿಡಿಯೋ ವೈರಲ್

5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಟರ್ಮಿನಲ್ 2ರ ಆಗಮನ ದ್ವಾರ ಪ್ರದೇಶದ ಹೊರಗೆ ನೀರಿನ ಸೋರಿಕೆ ಕಂಡುಬಂದಿದೆ. ಇದರಿಂದ ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣ ನೈರ್ಮಲ್ಯ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ.

ಇತ್ತೀಚೆಗೆ ಉದ್ಘಾಟನೆಗೊಂಡ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸೋರಿಕೆ; ಟ್ವಿಟರ್​ನಲ್ಲಿ ವಿಡಿಯೋ ವೈರಲ್
ಬೆಂಗಳೂರು ವಿಮಾನ ನಿಲ್ದಾಣ
ಆಯೇಷಾ ಬಾನು
ಆಯೇಷಾ ಬಾನು|

Updated on: May 04, 2023 | 1:32 PM

Share

ಮುಖ್ಯಾಂಶಗಳು

  • ಇತ್ತೀಚೆಗೆ ಉದ್ಘಾಟನೆಗೊಂಡ ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್ 2 ಸೋರಿಕೆ
  • ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಮೇಲ್ಚಾವಣಿ ಸೋರುತ್ತಿದ್ದು ಪ್ರಯಾಣಿಕರಿಗೆ ಸಮಸ್ಯೆ
  • 2 ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಉದ್ಘಾಟನೆ ಮಾಡಿದ್ದರು.

ಬೆಂಗಳೂರು: ನಗರದಲ್ಲಿ ಕಳೆದ ಕೆಲ ದಿನಗಳಿಂದ ವರುಣರಾಯನ ಅಬ್ಬರ ಜೋರಾಗಿದೆ. ಪ್ರತಿ ದಿನ ಸಂಜೆ, ರಾತ್ರಿ ಮಳೆ ಸುರಿಯುತ್ತಿದೆ. ಉರಿ ಬಿಸಿಲಿನಿಂದ ಹೈರಾಣಾಗಿದ್ದ ಸಿಟಿ ಮಂದಿ ಮಳೆಗೆ ಕೂಲ್ ಆಗಿದ್ದಾರೆ. ಆದ್ರೆ ಮೇ 9ರ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Kempegowda International Airport Bengaluru) ಸೋರಿಕೆ ಕಂಡು ಬಂದಿದೆ. ವಿಮಾನ ನಿಲ್ದಾಣದ ಹೊಸ ಟರ್ಮಿನಲ್‌ನಲ್ಲಿ ಮೇಲ್ಚಾವಣಿ ಸೋರುತ್ತಿದ್ದು ಸಿಬ್ಬಂದಿ ಮತ್ತು ಪ್ರಯಾಣಿಕರು ಸಮಸ್ಯೆ ಎದುರಿಸುವಂತಾಗಿದೆ. ಹಾಗೂ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ಮಳೆ ನೀರನ್ನು ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾದ ಟರ್ಮಿನಲ್ 2ರ ಆಗಮನ ದ್ವಾರ ಪ್ರದೇಶದ ಹೊರಗೆ ನೀರಿನ ಸೋರಿಕೆ ಕಂಡುಬಂದಿದೆ. ಇದರಿಂದ ಪ್ರಯಾಣಿಕರು ಮತ್ತು ವಿಮಾನ ನಿಲ್ದಾಣ ನೈರ್ಮಲ್ಯ ಸಿಬ್ಬಂದಿ ಸಂಕಷ್ಟಕ್ಕೆ ಸಿಲುಕಿದ ಘಟನೆ ನಡೆದಿದೆ. 2022ರ ನವೆಂಬರ್ 11ರಂದು ಅನಾವರಣಗೊಂಡ ನಂತರ ಟರ್ಮಿನಲ್ ಈ ವರ್ಷ ಜನವರಿ 15 ರಂದು ಹಾರಾಟದ ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಮೂಲಸೌಕರ್ಯ ಸಮಸ್ಯೆಯನ್ನು ಒಪ್ಪಿಕೊಂಡ ಅಧಿಕಾರಿಗಳು ಅದನ್ನು ಸರಿಪಡಿಸುವ ಕಾರ್ಯಗಳು ನಡೆಯುತ್ತಿವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Bengaluru Airport: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸೇವೆಗೆ ಸಿದ್ದವಾದ ಟರ್ಮಿನಲ್ 2

ಇನ್ನು ಕಳೆದ 2 ತಿಂಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ ಟರ್ಮಿನಲ್-2 ಉದ್ಘಾಟನೆ ಮಾಡಿದ್ರು. ಉದ್ಘಾಟನೆಗೊಂಡ ಕೆಲವೇ ತಿಂಗಳಲ್ಲಿ ಮಳೆ ನೀರು ಸೋರಿಕೆಯಾಗುತ್ತಿದೆ. ಕೇವಲ 30 ನಿಮಿಷಗಳ ಕಾಲ ಸುರಿದ ಮಳೆಗೆ ಟರ್ಮಿನಲ್‌-2 ರಲ್ಲಿ ನೀರು ತುಂಬಿಕೊಂಡಿದೆ. ಹವಾಮಾನ ವರದಿಗಳು ವಿಮಾನ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ 25 ಮಿಮೀ ಮಳೆಯನ್ನು ದಾಖಲಿಸಿದರೆ, ವಿಮಾನ ನಿಲ್ದಾಣವು ರಾತ್ರಿ 7 ರಿಂದ 10 ರವರೆಗೆ ಕನಿಷ್ಠ 9.8 ಮಿಮೀ ಮಳೆಯನ್ನು ದಾಖಲಿಸಿದೆ. ಇನ್ನು ಹೊಸ ಟರ್ಮಿನಲ್‌ನ ಕರ್ಬ್‌ಸೈಡ್‌ನಲ್ಲಿ ಸೋರಿಕೆಯಾಗಿರುವುದನ್ನು ವಿಮಾನ ನಿಲ್ದಾಣದ ನಿರ್ವಾಹಕರಾದ ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಬಿಐಎಎಲ್) ಖಚಿತಪಡಿಸಿದೆ.

ರಾಜ್ಯ ವಿಧಾನಸಭಾ ಚುನಾವಣೆ ಸಂಬಂಧದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್