ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

Water Price Hike: ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ಜನತೆಗೆ ಮತ್ತೊಂದು ದರ ಏರಿಕೆಯ ಶಾಕ್ ಕೊಡಲು ಮುಂದಾಗಿದ್ದಾರೆ. ಯಾರು ಏನೇ ಹೇಳಿದರೂ ನೀರಿನ ದರ ಹೆಚ್ಚಳ ಮಾಡಿಯೇ ಸಿದ್ಧ ಎಂದು ಅವರು ಬೆಂಗಳೂರಿನಲ್ಲಿ ಘೋಷಣೆ ಮಾಡಿದ್ದಾರೆ.

ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಡಿಕೆ ಶಿವಕುಮಾರ್
Follow us
| Updated By: ಗಣಪತಿ ಶರ್ಮ

Updated on:Aug 22, 2024 | 12:57 PM

ಬೆಂಗಳೂರು, ಆಗಸ್ಟ್​ 22: ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗದಲ್ಲಿ ಗುರುವಾರ ನಡೆದ ಕಾವೇರಿ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಾಧ್ಯಮದವರು ಬೈಯಲಿ, ಜನ ವಿರೋಧ ವ್ಯಕ್ತಪಡಿಸಲಿ, ವಿಪಕ್ಷಗಳು ಟೀಕಿಸಲಿ, ತಲೆಕೆಡಿಸಿಕೊಳ್ಳುವುದಿಲ್ಲ. ನೀರಿನ ದರ ಹೆಚ್ಚಳ ಮಾಡುತ್ತೇವೆ ಎಂದರು.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಅಧಿಕಾರಿಗಳು ನೀರಿನ ದರದ ಬಗ್ಗೆ ಮಾಹಿತಿ ಕೊಡಿ. ಎಷ್ಟು ವರ್ಷಗಳಿಂದ ನೀರಿನ ದರ ಹೆಚ್ಚಿಸಿಲ್ಲ ಎಂದು ಮಾಹಿತಿ ಕೊಡಿ ಎಂಬುದಾಗಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ವೇದಿಕೆ ಮೇಲೆಯೇ ಅಧಿಕಾರಿಗಳಿಗೆ ಸೂಚಿಸಿದರು.

ನಾಗರಿಕರಿಗೆ ಉಪಕಾರ ಸ್ಮರಣೆ ಇಲ್ಲ: ಡಿಕೆಶಿ

ನಾಗರಿಕರಿಗೆ ಎಷ್ಟೇ ಮಾಡಿದರೂ ಉಪಕಾರ ಸ್ಮರಣೆ ಇಲ್ಲ. ಎಷ್ಟೇ ಒಳ್ಳೆಯದು ಮಾಡಿದರೂ ಬೈತಾರೆ, ಕಮೆಂಟ್​ ಮಾಡುತ್ತಾರೆ. ಬಿಲ್ ಪಾವತಿಸುವರು ಪಾವತಿ ಮಾಡುತ್ತಾರೆ. ಕೆಲವರು ಪಾವತಿ ಮಾಡಲ್ಲ ಎಂದು ಅವರು ಹೇಳಿದರು.

ಜಲ ಮಂಡಳಿ ನಷ್ಟದಲ್ಲಿದೆ: ಡಿಕೆ ಶಿವಕುಮಾರ್

ಕಳೆದ 8-9 ವರ್ಷದಿಂದ ನೀರಿನ ದರ ಏರಿಕೆ ಮಾಡಿಲ್ಲ. ನೀರಿನ‌ ದರ ಹೆಚ್ಚಿಸಬೇಕು, ಅಂತರ್ಜಲ ಹೆಚ್ಚಳ ಆಗಬೇಕು. ಮಂಡಳಿ ನಷ್ಟದಲ್ಲಿದೆ, ಸಂಬಳ ಕೊಡುವುದಕ್ಕೆ ಆಗುತ್ತಿಲ್ಲ. ಮಂಡಳಿಯ ವಿದ್ಯುತ್ ದರ ಪಾವತಿ ಮಾಡಲು ಆಗುತ್ತಿಲ್ಲ. ಕೆಲವು ಸೆಕ್ಷನ್ ನೋಡಿ ದರ ನಿಗದಿ ಮಾಡಬೇಕು. ಎಷ್ಟು ದರ ಏರಿಕೆ ಮಾಡಬೇಕು ಎಂದು ಇನ್ನೂ ನಿರ್ಧಾರ ಮಾಡಿಲ್ಲ. ಕಮಿಟಿ‌ ಸಭೆ, ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಇಂದಿನ ಸಂಪುಟ ಸಭೆಯಲ್ಲಿ ನೀರಿನ ದರ ಹೆಚ್ಚಳ ವಿಷಯ ಪ್ರಸ್ತಾಪವಿಲ್ಲ ಎಂದು ಅವರು ತಿಳಿಸಿದರು.

‘ನೀರು ಸರಬರಾಜು ಖಾಸಗೀಕರಣ ಇಲ್ಲ’

ಜಲ ಮತ್ತು ಇಂಧನ ಎರಡು ಪ್ರಮುಖವಾದ ಇಲಾಖೆಗಳು. ಈ ಎರಡು ಇಲಾಖೆಗಳ ಉಸ್ತುವಾರಿಯನ್ನು ನಾನೇ ವಹಿಸಿದ್ದೇನೆ. ಹಿಂದೆ ಎಸ್ಎಂ ಕೃಷ್ಣ ಸಿಎಂ ಆಗಿದ್ದ ಅವಧಿಯಲ್ಲಿ ನಾನು ನಗರಾಭಿವೃದ್ಧಿ ಸಚಿವನಾಗಿದ್ದಾಗ ನೀರು ಸರಬರಾಜು ಖಾಸಗೀಕರಣ ಚರ್ಚೆ ನಡೆದಿತ್ತು. ಅದರ ಬಗ್ಗೆ ಫ್ರಾನ್ಸ್​​​ಗೆ ಎಲ್ಲ ಹೋಗಿ ನೋಡಿಕೊಂಡು ಬಂದಿದ್ದೆ. ನಂತರ ಆ ರೀತಿ ಅಳವಡಿಕೆ ನಮ್ಮ ರಾಜ್ಯದಲ್ಲಿ ಕಷ್ಟವಾಗುತ್ತದೆ ಎಂದು ಮಾಹಿತಿ ‌ನೀಡಿದ್ದೆ. ಅದಕ್ಕೂ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಆನಂತರ ಕೈ ಬಿಟ್ಟೆವು.

ಇದನ್ನೂ ಓದಿ: 5 ವರ್ಷದಲ್ಲಿ ಬಾಡಿಗೆ ಜಾಸ್ತಿ ಮಾಡಿಲ್ಲ, ಊಟ ಕೂಡ ಅವರದೇ, ಬಹಳ ಒಳ್ಳೆಯ ಓನರ್​​​

ಈಗಲೂ ನಾನು ಸಚಿವನಾದ ಖಾಸಗೀಕರಣದ ಬಗ್ಗೆ ಚರ್ಚಿಸಲು ಮತ್ತೆ ಕೆಲವರು ಬಂದರು. ಆಗಲ್ಲ, ನಾನಿರುವವರೆಗೆ ಆಗಲ್ಲ ಅಂತ ಹೇಳಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:29 pm, Thu, 22 August 24

ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಸದ್ಯಕ್ಕೆ ಜಾಮೀನಿಗೆ ಅರ್ಜಿ ಹಾಕಲ್ಲ ನಟ ದರ್ಶನ್: ವಕೀಲರಿಂದ ಮಾಹಿತಿ
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?