AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಪಾಕಿಸ್ತಾನದ ಮುಸ್ಲಿಮರಲ್ಲ, ಸಹಬಾಳ್ವೆಗೆ ನಮ್ಮ ಮೊದಲ ಆದ್ಯತೆ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್

ನಾವು ಬಹಳ ಗೌರವದಿಂದ ಭಾರತದಲ್ಲಿ ಬಾಳುತ್ತಿದ್ದೇವೆ. ಮುಂದೆಯೂ ಕೂಡ ನಾವು ಗೌರವಯುತವಾಗಿ ಇರುತ್ತೇವೆ ಎಂದು ಚಾಮರಾಜಪೇಟೆ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ಹೇಳಿದರು.

ನಾವು ಪಾಕಿಸ್ತಾನದ ಮುಸ್ಲಿಮರಲ್ಲ, ಸಹಬಾಳ್ವೆಗೆ ನಮ್ಮ ಮೊದಲ ಆದ್ಯತೆ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್
ಶಾಸಕ ಜಮೀರ್ ಅಹ್ಮದ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Apr 11, 2022 | 1:13 PM

Share

ಬೆಂಗಳೂರು: ನಾವು ಪಾಕಿಸ್ತಾನದ ಮುಸ್ಲಿಮರಲ್ಲ, ಭಾರತೀಯ ಮುಸ್ಲಿಮರು. ಶಾಂತಿ ಸಹಬಾಳ್ವೆಗೆ ನಮ್ಮ ಮೊದಲ ಆದ್ಯತೆ. ನಾವು ಬಹಳ ಗೌರವದಿಂದ ಭಾರತದಲ್ಲಿ ಬಾಳುತ್ತಿದ್ದೇವೆ. ಮುಂದೆಯೂ ಕೂಡ ನಾವು ಗೌರವಯುತವಾಗಿ ಇರುತ್ತೇವೆ ಎಂದು ಚಾಮರಾಜಪೇಟೆ ಶಾಸಕ ಬಿ.ಝಡ್.ಜಮೀರ್ ಅಹಮದ್ ಖಾನ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಇತ್ತೀಚಿಗೆ ನಡೆದ ಕೆಲ ಬೆಳವಣಿಗೆಗಳ ಕುರಿತು ಪರೋಕ್ಷವಾಗಿ ಪ್ರಸ್ತಾಪಿಸಿರುವ ಅವರು, ಸಾವಿನ ಮನೆಯಲ್ಲಿಯೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ದೂರಿದ್ದಾರೆ. ಈ ಹಿಂದಿನಿಂದಲೂ ಒಂದಲ್ಲ ಒಂದು ರೀತಿಯಲ್ಲಿ ಗಲಭೆಗಳು ನಡೆಯುತ್ತಿದ್ದವು. ನಾನು ಚಾಮರಾಜಪೇಟೆ ಕ್ಷೇತ್ರದ ಶಾಸಕನಾಗುವ ಮುಂಚೆಯೂ ಗಲಭೆ ನಡೆಯುತ್ತಿತ್ತು. ನಾನು ಶಾಸಕನಾದ ನಂತರ ಕ್ಷೇತ್ರದಲ್ಲಿ ಶಾಂತಿ ನೆಲೆಸಿದೆ. ಇಲ್ಲಿ ಗಲಭೆ ಸೃಷ್ಟಿಸಲೇಬೇಕೆಂದು ಬಿಜೆಪಿ ಮುಖಂಡರು ಯತ್ನಿಸುತ್ತಿದ್ದಾರೆ. ಈಗ ಚಂದ್ರು ಕೊಲೆಯ ವಿಚಾರದಲ್ಲಿಯೂ ರಾಜಕಾರಣ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ನನ್ನ ಕ್ಷೇತ್ರದಲ್ಲಿ ಶಾಂತಿ ಕದಡಲು ನಾನು ಅವಕಾಶ ಮಾಡಿಕೊಡುವುದಿಲ್ಲ. ಮುಂದಿನ ದಿನಗಳಲ್ಲಿ ಚಾಮರಾಜಪೇಟೆಯು ಶಾಂತಿಯ ನೆಲೆವೀಡು ಆಗಲಿದೆ. ಚಂದ್ರು ಸಾವಿನ ನಂತರ ತನಿಖೆ ನಡೆಸಿದ ನಗರ ಪೊಲೀಸ್ ಆಯುಕ್ತರು ಇದೊಂದು ಕೊಲೆ ಎಂದು ಕಮಿಷನರ್ ತಿಳಿಸಿದ್ದಾರೆ. ಆದರೆ ಬಿಜೆಪಿಯವರು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯವರ ಈ ತಂತ್ರಕ್ಕೆ ಯಾರು ಮತದಾರರು ನಮ್ಮ ಕ್ಷೇತ್ರದವರು ಮಣಿಯಬಾರದು. ಶಾಂತಿ ಸಹಬಾಳ್ವೆಯಿಂದ ನಾವು ಇರಬೇಕು ಎಂದು ಕರೆನೀಡಿರುವ ಜಮೀರ್, ಎಲ್ಲರೂ ಒಂದೇ ಇಲ್ಲಿ ಎಂದು ಹೇಳಿದ್ದಾರೆ.

ಆರೋಪಿಗಳಿಗೆ ಕೊಲೆ ಉದ್ದೇಶ ಇರಲಿಲ್ಲ

ಬೆಂಗಳೂರಿನ ಜೆ.ಜೆ.ನಗರದಲ್ಲಿ ಯುವಕ ಚಂದ್ರು ಹತ್ಯೆ ಪ್ರಕರಣದ ಆರೋಪಿಗಳಿಗೆ ಕೊಲೆ ಮಾಡುವ ಉದ್ದೇಶ ಇರಲಿಲ್ಲ. ಆರೋಪಿ ಚಿಕ್ಕವಯಸ್ಸಿನಲ್ಲೇ ಚಾಕು ಇಟ್ಟುಕೊಂಡು ಓಡಾಡುವುದನ್ನು ರೂಢಿಸಿಕೊಂಡಿದ್ದ. ಯಾರನ್ನೇ ಆದರೂ ಕೊಲೆ ಮಾಡುವುದು ತಪ್ಪು. ಬಿಜೆಪಿಯವರು ಶವ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ತೊಡೆಗೆ ಚಾಕು ಹಾಕಿದ್ದರಿಂದ ನರ ತುಂಡಾಗಿದೆ. ರಕ್ತಸ್ರಾವ ನಿಲ್ಲದ ಕಾರಣ ಆ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕೊಲೆ ನಡೆದು ಎರಡು ದಿನ ಆದ ಮೇಲೆ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಶವ ಇರುವಾಗ ಯಾರು ಬಂದಿರಲಿಲ್ಲ. ಬೇರೆ ದಿನ ಬಂದು ರಾಜಕೀಯ ಮಾಡುತ್ತಿದ್ದಾರೆ. ಯಾವುದಾದ್ರು ಗಲಾಟೆಯಲ್ಲಿ ರಾಜಕಾರಣಿ ಸತ್ತಿದ್ದಾರಾ? ಜನರಿಂದ ಆಯ್ಕೆಯಾದ ಸರ್ಕಾರದಲ್ಲಿ, ಗಲಭೆ ಇಲ್ಲ. ತಮಿಳುನಾಡಿನಲ್ಲಿ ಹಿಜಾಬ್ ಗಲಾಟೆ ಇಲ್ಲ. ಆದರೆ ಇಲ್ಲಿ ರಾಜಕೀಯ ಲಾಭಗೊಸ್ಕರ ಗಲಭೆ ಸೃಷ್ಠಿ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಸರ್! ನೀವು ಇದ್ದೀರಿ ಅನ್ನುವ ಏಕ ಮಾತ್ರ ಕಾರಣಕ್ಕೆ ಕಾಂಗ್ರೆಸ್​ನಲ್ಲಿದ್ದೇನೆ- ಸಿದ್ದರಾಮಯ್ಯ ಮನೆಯಲ್ಲಿ ಜಮೀರ್ ಖಾನ್ ಹೇಳಿಕೆ

ಇದನ್ನೂ ಓದಿ: ಕೊಲೆಯಾದ ಚಂದ್ರು ಕುಟುಂಬಕ್ಕೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್​ರಿಂದ ರೂ. 2 ಲಕ್ಷ ನೆರವು

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು