AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುತ್ತೇವೆ; ಪೊಲೀಸ್ ಆಯುಕ್ತ ಕಮಲ್ ಪಂತ್

ತೊಂದರೆ ಇದ್ದರೆ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಲಿ. ದಾಖಲೆಯಲ್ಲಿ ಸಮಸ್ಯೆ ಇದ್ದರೂ ಅದನ್ನು ಸರಿಪಡಿಸುತ್ತೇವೆ ಎಂದು ಕಮಲ್ ಪಂತ್ ತಿಳಿಸಿದರು.

ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುತ್ತೇವೆ; ಪೊಲೀಸ್ ಆಯುಕ್ತ ಕಮಲ್ ಪಂತ್
ಪೊಲೀಸ್ ಆಯುಕ್ತ ಕಮಲ್ ಪಂತ್
TV9 Web
| Updated By: sandhya thejappa|

Updated on:Aug 18, 2021 | 11:58 AM

Share

ಬೆಂಗಳೂರು: ಅಫ್ಘಾನಿಸ್ತಾನದ ವಿದ್ಯಾರ್ಥಿಗಳಿಗೆ ಅಗತ್ಯ ನೆರವು ನೀಡುತ್ತೇವೆ ಎಂದು ಬೆಲೆಬಾಳುವ ವಸ್ತುಗಳ ಪ್ರದರ್ಶನ ಕಾರ್ಯಕ್ರಮದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ. ತೊಂದರೆ ಇದ್ದರೆ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಲಿ. ದಾಖಲೆಯಲ್ಲಿ ಸಮಸ್ಯೆ ಇದ್ದರೂ ಅದನ್ನು ಸರಿಪಡಿಸುತ್ತೇವೆ ಎಂದು ಕಮಲ್ ಪಂತ್ (Kamal Pant) ತಿಳಿಸಿದರು. ಇನ್ನು ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, 30 ಕೋಟಿ ಬೆಲೆಬಾಳುವ ವಸ್ತುಗಳನ್ನು ಪ್ರದರ್ಶನ ಮಾಡಲಾಗಿತ್ತು. ಡ್ರಗ್ಸ್ ಸೀಜ್ ಮಾಡಿದ್ದನ್ನು ಪ್ರದರ್ಶನಕ್ಕೆ ಇಟ್ಟಿದ್ದೀವಿ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra), ಬೆಂಗಳೂರು ನಗರದಲ್ಲಿ 339 ಅಫ್ಘಾನಿಸ್ತಾನದ ಪ್ರಜೆಗಳಿದ್ದಾರೆ. ಅಫ್ಘಾನಿಸ್ತಾನ ಪ್ರಜೆಗಳು ಅಸಹಾಯಕರಾಗಿ ನೋಡುತ್ತಿದ್ದಾರೆ. ಮಾನವೀಯ ದೃಷ್ಟಿಯಿಂದ ಅವರ ಜತೆ ಸರ್ಕಾರ ಇದೆ. ವೀಸಾ ಅವಧಿ ವಿಸ್ತರಣೆ ಕೇಂದ್ರ ಸರ್ಕಾರದ ವ್ಯಾಪ್ತಿಯಲ್ಲಿದೆ. ಹೀಗಾಗಿ ಕೇಂದ್ರ ಸರ್ಕಾರದ ಜೊತೆಯೂ ಮಾತನಾಡುತ್ತೇವೆ. ನಮ್ಮ ಸರ್ಕಾರ ಬೆಂಗಳೂರಿನಲ್ಲಿರುವ ಆಫ್ಘನ್ನರ ಪರವಾಗಿದೆ ಎಂದು ಹೇಳಿದರು.

ಆತಂಕದಲ್ಲಿರುವ ಆಫ್ಘನ್ ವಿದ್ಯಾರ್ಥಿಗಳು ಕರ್ನಾಟಕದಲ್ಲಿರುವ ಆಫ್ಘನ್ ವಿದ್ಯಾರ್ಥಿಗಳು ತಮ್ಮ ದೇಶದ ಪರಿಸ್ಥಿತಿ ಕಂಡು ಆತಂಕದಲ್ಲಿದ್ದಾರೆ. ಈ ಬಗ್ಗೆ ಟಿವಿ9 ಮುಂದೆ ವಿದ್ಯಾರ್ಥಿಗಳು ಆತಂಕ ತೋಡಿಕೊಂಡಿದ್ದಾರೆ. ಕೃಷಿ ವಿವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಝಬಿವುಲ್ಲಾ ಎಂಬ ವಿದ್ಯಾರ್ಥಿ, ನಮಗೆ ಸಾಕಷ್ಟು ಆತಂಕವಾಗಿದೆ. ಅಲ್ಲಿನ ಪರಿಸ್ಥಿತಿ ತುಂಬಾನೇ ಕಷ್ಟಕರವಾಗಿದೆ. ಕುಟುಂಬದವರೊಂದಿಗೆ ಸಂಪರ್ಕದಲ್ಲಿದ್ದೇವೆ. ಮೂರು ದಿನಗಳ ಹಿಂದೆ ಇದ್ದ ಪರಿಸ್ಥಿತಿ ಇವತ್ತು ಇಲ್ಲ. ತಾಲಿಬಾನಿಗಳು ಯಾರನ್ನೂ ಕೊಲ್ಲುತ್ತಿಲ್ಲ. ನಾವು ಯಾರನ್ನೂ ಕೊಲ್ಲೋದಿಲ್ಲ ಅಂತಾ ಹೇಳಿದ್ದಾರೆ. ಇದರಿಂದ ಕೊಂಚ ನೆಮ್ಮದಿಯಾಗಿದೆ. ನಮ್ಮ ಆತಂಕವನ್ನು ವಿವಿ ಆಳಿತದವರಿಗೆ ತಿಳಿಸಿದ್ದೇವೆ. ಎಲ್ಲರೂ ನಮ್ಮ ಬೆಂಬಲಕ್ಕೆ ಇದ್ದಾರೆ. ನಾವು ಒಟ್ಟು 15 ಜನರಿದ್ದೇವೆ. ಅದರಲ್ಲಿ 5 ವಿದ್ಯಾರ್ಥಿಗಳು ದೇಶಕ್ಕೆ ಹೋಗಿದ್ದಾರೆ. ಅವರು ಮರಳಿ ಬರಲು ಸಾಧ್ಯವಾಗುತ್ತಿಲ್ಲ. ನಮಗೆ ಭವಿಷ್ಯದ ಬಗ್ಗೆ ಆತಂಕವಾಗುತ್ತಿದೆ. ಮುಂದಿನ ದಿನಗಳು ಹೇಗಿರಲಿವೆಯೋ ಗೊತ್ತಿಲ್ಲ. ಮಾನಸಿಕವಾಗಿ ನಾವು ನೆಮ್ಮದಿ ಕಳೆದುಕೊಂಡಿದ್ದೇವೆ ಅಂತ ಅಳಲು ತೋಡಿಕೊಂಡಿದ್ದಾನೆ.

ಇದನ್ನೂ ಓದಿ

ಬೆಂಗಳೂರಿನಲ್ಲಿ ಕಳುವಾಗಿದ್ದ 40 ಕೆ.ಜಿ. ಚಿನ್ನಾಭರಣವನ್ನು ಮಾಲೀಕರಿಗೆ ವಾಪಸ್ ನೀಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಸುನಂದಾ ಪುಷ್ಕರ್​ ಪ್ರಕರಣ: ಶಶಿ ತರೂರ್​​ರನ್ನು ಆರೋಪ ಮುಕ್ತಗೊಳಿಸಿದ ದೆಹಲಿ ನ್ಯಾಯಾಲಯ

(We are provide assistance to Afghan students said Kamal Pant)

Published On - 11:48 am, Wed, 18 August 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ