AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ತಲೆಯನ್ನೇ ಕೊಡಲು ಸಿದ್ಧರಿದ್ದೇವೆ: ಸಚಿವ ಅಶ್ವತ್ಥ್ ನಾರಾಯಣ

ಮಂಡ್ಯ ಜಿಲ್ಲೆಯೂ ಕಾಲಕಾಲಕ್ಕೆ ಹೇಗೆ ಕುಸಿಯುತ್ತಾ ಬಂತು ಗೊತ್ತಿದೆ. ಮಂಡ್ಯದ ಅಭಿವೃದ್ಧಿಗೆ ತ್ಯಾಗ, ತಲೆಯನ್ನೇ ಕೊಡಲು ಸಿದ್ಧರಿದ್ದೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದರು.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ತಲೆಯನ್ನೇ ಕೊಡಲು ಸಿದ್ಧರಿದ್ದೇವೆ: ಸಚಿವ ಅಶ್ವತ್ಥ್ ನಾರಾಯಣ
ಸಚಿವ ಅಶ್ವತ್ಥ್ ನಾರಾಯಣ
TV9 Web
| Edited By: |

Updated on:Nov 28, 2022 | 4:09 PM

Share

ಬೆಂಗಳೂರು: ಮಂಡ್ಯ (Mandya) ಜಿಲ್ಲೆಯೂ ಕಾಲಕಾಲಕ್ಕೆ ಹೇಗೆ ಕುಸಿಯುತ್ತಾ ಬಂತು ಗೊತ್ತಿದೆ. ಅತಿ ಹೆಚ್ಚು ಸಾಲ, ಅತಿ ಹೆಚ್ಚು ಆತ್ಮಹತ್ಯೆ ನಡೆಯುವ ಜಿಲ್ಲೆ ಮಂಡ್ಯ. ಅತಿ ಹೆಚ್ಚು ನಾಯಕತ್ವ ಕೊಡುವ ಜಿಲ್ಲೆಯೂ ಇದೆ. ಮಂಡ್ಯದ ಅಭಿವೃದ್ಧಿಗೆ (development) ತ್ಯಾಗ, ತಲೆಯನ್ನೇ ಕೊಡಲು ಸಿದ್ಧರಿದ್ದೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವರು ಮಾತನಾಡಿದರು. ಮೈಶುಗರ್ ಕಾರ್ಖಾನೆಯನ್ನು ಯಾವ ರೀತಿ ಮಾಡಿದರೆಂದು ಗೊತ್ತಿದೆ. ಬೇರೆ ಪಕ್ಷದವರು ತಾವೂ ಕೆಲಸ ಮಾಡಲ್ಲ, ಮಾಡುವವರನ್ನೂ ಬಿಡಲ್ಲ. ಪಾಂಡವಪುರದ ಸಕ್ಕರೆ ಕಾರ್ಖಾನೆ ಏನು ಮಾಡಿದರು ಎಂದು ಗೊತ್ತು. ಇನ್ನೊಬ್ಬರ ರಕ್ತ ಹೀರುವವರನ್ನು ನಾಯಕ ಎಂದು ಕರೆಯುತ್ತೀರಾ ಎಂದು ಅಶ್ವತ್ಥ್ ನಾರಾಯಣ ಪ್ರಶ್ನಿಸಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಬಿಗ್ ಆಪರೇಷನ್: ಕೊನೆಗೂ ಸಂಸದೆ ಸುಮಲತಾ ಅಂಬರೀಷ್ ಆಪ್ತನಿಗೆ ಗಾಳ ಹಾಕುವಲ್ಲಿ ಬಿಜೆಪಿ ಯಶಸ್ವಿ!

ಬಿಜೆಪಿಯವರು ಯಾರ ಮನೆ ಬಾಗಿಲನ್ನೂ ಕೂಡ ಕಾಯಬೇಕಿಲ್ಲ

ಗುಲಾಮಗಿರಿ ಧಿಕ್ಕರಿಸಿ ಬಂದ ಬಹದ್ದೂರ್ ಗಂಡು ನಾರಾಯಣಗೌಡ. ಕಾಂಗ್ರೆಸ್​​, ಜೆಡಿಎಸ್​ ಕುಟುಂಬದ ಪಕ್ಷಗಳು. ಬಿಜೆಪಿಯವರು ಯಾರ ಮನೆ ಬಾಗಿಲನ್ನು ಕೂಡ ಕಾಯಬೇಕಿಲ್ಲ. ತುಷ್ಟೀಕರಣ ರಾಜಕಾರಣ ಮಾಡುವ ಪಕ್ಷಗಳಿಗೆ ಪಾಠ ಕಲಿಸಬೇಕು. ಮಂಡ್ಯ ಜಿಲ್ಲೆಯಲ್ಲಿ 7 ಜೆಡಿಎಸ್​ ಶಾಸಕರು, MLC, ಸಿಎಂ ಇದ್ದರೂ. ಲೋಕಸಭೆ ಚುನಾವಣೆಯಲ್ಲಿ ಜನರು ಏನು  ಮಾಡಿದರೆಂದು ಗೊತ್ತಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ ಕಿಡಿಕಾರಿದರು.

ಇದನ್ನೂ ಓದಿ: ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು: ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಕರೆ

ಒಕ್ಕಲಿಗ ಮೀಸಲಾತಿ ಹೆಚ್ಚಳ ಸೇರಿದಂತೆ ಹಲವು ಸಮುದಾಯಗಳ ಬೇಡಿಕೆಯಿದೆ

ಒಕ್ಕಲಿಗ ಮೀಸಲಾತಿ ಬೇಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಒಕ್ಕಲಿಗ ಮೀಸಲಾತಿ ಹೆಚ್ಚಳ ಸೇರಿದಂತೆ ಹಲವು ಸಮುದಾಯಗಳ ಬೇಡಿಕೆ ಇದೆ. ಎಲ್ಲರ ಬೇಡಿಕೆಯನ್ನು ಗಮನಕ್ಕೆ ತೆಗೆದುಕೊಂಡು ಕ್ರಮ ವಹಿಸುವ ಕೆಲಸ ಸರ್ಕಾರದಿಂದ ಆಗುತ್ತದೆ. ಇಲ್ಲಿ ನನ್ನ ವೈಯಕ್ತಿಕ ಪ್ರಶ್ನೆ ಬರುವುದಿಲ್ಲ. ಸರ್ಕಾರದಲ್ಲಿ, ಕಾನೂನಿನಲ್ಲಿ ಯಾವ ರೀತಿಯ ಅವಕಾಶಗಳಿವೆ ಎಂಬುದನ್ನು ನೋಡಿ ಕ್ರಮ ವಹಿಸುವ ಕೆಲಸ ಆಗುತ್ತದೆ. ಸರ್ಕಾರದಿಂದ ಜನರ ಭಾವನೆ ಮತ್ತು ಬೇಡಿಕೆಗಳನ್ನು ಏನು ಈಡೇರಿಸಲು ಸಾಧ್ಯವಿದೆಯೋ ಮಾಡೋಣ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Mon, 28 November 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ