AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ತಲೆಯನ್ನೇ ಕೊಡಲು ಸಿದ್ಧರಿದ್ದೇವೆ: ಸಚಿವ ಅಶ್ವತ್ಥ್ ನಾರಾಯಣ

ಮಂಡ್ಯ ಜಿಲ್ಲೆಯೂ ಕಾಲಕಾಲಕ್ಕೆ ಹೇಗೆ ಕುಸಿಯುತ್ತಾ ಬಂತು ಗೊತ್ತಿದೆ. ಮಂಡ್ಯದ ಅಭಿವೃದ್ಧಿಗೆ ತ್ಯಾಗ, ತಲೆಯನ್ನೇ ಕೊಡಲು ಸಿದ್ಧರಿದ್ದೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದರು.

ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ತಲೆಯನ್ನೇ ಕೊಡಲು ಸಿದ್ಧರಿದ್ದೇವೆ: ಸಚಿವ ಅಶ್ವತ್ಥ್ ನಾರಾಯಣ
ಸಚಿವ ಅಶ್ವತ್ಥ್ ನಾರಾಯಣ
TV9 Web
| Edited By: |

Updated on:Nov 28, 2022 | 4:09 PM

Share

ಬೆಂಗಳೂರು: ಮಂಡ್ಯ (Mandya) ಜಿಲ್ಲೆಯೂ ಕಾಲಕಾಲಕ್ಕೆ ಹೇಗೆ ಕುಸಿಯುತ್ತಾ ಬಂತು ಗೊತ್ತಿದೆ. ಅತಿ ಹೆಚ್ಚು ಸಾಲ, ಅತಿ ಹೆಚ್ಚು ಆತ್ಮಹತ್ಯೆ ನಡೆಯುವ ಜಿಲ್ಲೆ ಮಂಡ್ಯ. ಅತಿ ಹೆಚ್ಚು ನಾಯಕತ್ವ ಕೊಡುವ ಜಿಲ್ಲೆಯೂ ಇದೆ. ಮಂಡ್ಯದ ಅಭಿವೃದ್ಧಿಗೆ (development) ತ್ಯಾಗ, ತಲೆಯನ್ನೇ ಕೊಡಲು ಸಿದ್ಧರಿದ್ದೇವೆ ಎಂದು ಸಚಿವ ಅಶ್ವತ್ಥ್ ನಾರಾಯಣ ಹೇಳಿದರು. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವರು ಮಾತನಾಡಿದರು. ಮೈಶುಗರ್ ಕಾರ್ಖಾನೆಯನ್ನು ಯಾವ ರೀತಿ ಮಾಡಿದರೆಂದು ಗೊತ್ತಿದೆ. ಬೇರೆ ಪಕ್ಷದವರು ತಾವೂ ಕೆಲಸ ಮಾಡಲ್ಲ, ಮಾಡುವವರನ್ನೂ ಬಿಡಲ್ಲ. ಪಾಂಡವಪುರದ ಸಕ್ಕರೆ ಕಾರ್ಖಾನೆ ಏನು ಮಾಡಿದರು ಎಂದು ಗೊತ್ತು. ಇನ್ನೊಬ್ಬರ ರಕ್ತ ಹೀರುವವರನ್ನು ನಾಯಕ ಎಂದು ಕರೆಯುತ್ತೀರಾ ಎಂದು ಅಶ್ವತ್ಥ್ ನಾರಾಯಣ ಪ್ರಶ್ನಿಸಿದರು.

ಇದನ್ನೂ ಓದಿ: ಮಂಡ್ಯದಲ್ಲಿ ಬಿಗ್ ಆಪರೇಷನ್: ಕೊನೆಗೂ ಸಂಸದೆ ಸುಮಲತಾ ಅಂಬರೀಷ್ ಆಪ್ತನಿಗೆ ಗಾಳ ಹಾಕುವಲ್ಲಿ ಬಿಜೆಪಿ ಯಶಸ್ವಿ!

ಬಿಜೆಪಿಯವರು ಯಾರ ಮನೆ ಬಾಗಿಲನ್ನೂ ಕೂಡ ಕಾಯಬೇಕಿಲ್ಲ

ಗುಲಾಮಗಿರಿ ಧಿಕ್ಕರಿಸಿ ಬಂದ ಬಹದ್ದೂರ್ ಗಂಡು ನಾರಾಯಣಗೌಡ. ಕಾಂಗ್ರೆಸ್​​, ಜೆಡಿಎಸ್​ ಕುಟುಂಬದ ಪಕ್ಷಗಳು. ಬಿಜೆಪಿಯವರು ಯಾರ ಮನೆ ಬಾಗಿಲನ್ನು ಕೂಡ ಕಾಯಬೇಕಿಲ್ಲ. ತುಷ್ಟೀಕರಣ ರಾಜಕಾರಣ ಮಾಡುವ ಪಕ್ಷಗಳಿಗೆ ಪಾಠ ಕಲಿಸಬೇಕು. ಮಂಡ್ಯ ಜಿಲ್ಲೆಯಲ್ಲಿ 7 ಜೆಡಿಎಸ್​ ಶಾಸಕರು, MLC, ಸಿಎಂ ಇದ್ದರೂ. ಲೋಕಸಭೆ ಚುನಾವಣೆಯಲ್ಲಿ ಜನರು ಏನು  ಮಾಡಿದರೆಂದು ಗೊತ್ತಿದೆ ಎಂದು ಸಚಿವ ಅಶ್ವತ್ಥ್ ನಾರಾಯಣ ಕಿಡಿಕಾರಿದರು.

ಇದನ್ನೂ ಓದಿ: ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು: ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಕರೆ

ಒಕ್ಕಲಿಗ ಮೀಸಲಾತಿ ಹೆಚ್ಚಳ ಸೇರಿದಂತೆ ಹಲವು ಸಮುದಾಯಗಳ ಬೇಡಿಕೆಯಿದೆ

ಒಕ್ಕಲಿಗ ಮೀಸಲಾತಿ ಬೇಡಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಒಕ್ಕಲಿಗ ಮೀಸಲಾತಿ ಹೆಚ್ಚಳ ಸೇರಿದಂತೆ ಹಲವು ಸಮುದಾಯಗಳ ಬೇಡಿಕೆ ಇದೆ. ಎಲ್ಲರ ಬೇಡಿಕೆಯನ್ನು ಗಮನಕ್ಕೆ ತೆಗೆದುಕೊಂಡು ಕ್ರಮ ವಹಿಸುವ ಕೆಲಸ ಸರ್ಕಾರದಿಂದ ಆಗುತ್ತದೆ. ಇಲ್ಲಿ ನನ್ನ ವೈಯಕ್ತಿಕ ಪ್ರಶ್ನೆ ಬರುವುದಿಲ್ಲ. ಸರ್ಕಾರದಲ್ಲಿ, ಕಾನೂನಿನಲ್ಲಿ ಯಾವ ರೀತಿಯ ಅವಕಾಶಗಳಿವೆ ಎಂಬುದನ್ನು ನೋಡಿ ಕ್ರಮ ವಹಿಸುವ ಕೆಲಸ ಆಗುತ್ತದೆ. ಸರ್ಕಾರದಿಂದ ಜನರ ಭಾವನೆ ಮತ್ತು ಬೇಡಿಕೆಗಳನ್ನು ಏನು ಈಡೇರಿಸಲು ಸಾಧ್ಯವಿದೆಯೋ ಮಾಡೋಣ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:58 pm, Mon, 28 November 22

ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಸುದೀಪ್ ಹೇಳಿಕೆಗೆ ಟಾಂಗ್ ಕೊಟ್ಟ ದರ್ಶನ್ ಪತ್ನಿ ವಿಜಯಲಕ್ಷ್ಮಿ: ಹೇಳಿದ್ದೇನು?
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಪಿಚ್ ಮಧ್ಯದಲ್ಲೇ ಪಾಕ್ ವೇಗಿಗೆ ವಾರ್ನಿಂಗ್ ಕೊಟ್ಟ ವೈಭವ್; ವಿಡಿಯೋ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ