AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡವನ್ನು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಸಚಿವ ಡಾ.ಅಶ್ವತ್ಥ್ ನಾರಾಯಣ

ಕನ್ನಡ ಭಾಷೆ ಬೆಳೆಯಬೇಕು ಎಂದು ನಮ್ಮ ಸರ್ಕಾರ ಒತ್ತು ನೀಡಿದೆ. ನಮ್ಮ ಸರ್ಕಾರದಿಂದ ಪಿಟಿಷನ್ ಕೂಡ ಹಾಕಿದ್ದೇವೆ. ಇಂಗ್ಲೀಷನ್ನೇ ತಲೆ ಮೇಲೆ ಹೊತ್ತು ಮೆರೆಸುತ್ತಿರುವಾಗ ಸಂಸ್ಕೃತಕ್ಕೆ ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಪ್ರಶ್ನೆ ಮಾಡಿದ್ದಾರೆ.

ಕನ್ನಡವನ್ನು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಸಚಿವ ಡಾ.ಅಶ್ವತ್ಥ್ ನಾರಾಯಣ
ಸಚಿವ ಅಶ್ವತ್ಥ್ ನಾರಾಯಣ (ಸಂಗ್ರಹ ಚಿತ್ರ)
TV9 Web
| Updated By: preethi shettigar|

Updated on:Jan 24, 2022 | 3:42 PM

Share

ಬೆಂಗಳೂರು: ಕನ್ನಡ ಭಾಷೆಯ ಮೇಲೆ ನಮ್ಮ ರಾಜ್ಯ ನಿರ್ಮಾಣ ಆಗಿರುವುದು. ಕನ್ನಡವನ್ನು ಯಾವುದೇ ಕಾರಣಕ್ಕೂ ಕೈಬಿಡುವ ಮಾತಿಲ್ಲ. ಅದರ ಜತೆಗೆ ಸಂಸ್ಕೃತ ಭಾಷೆ ಬೆಳೆಸಲು ಒತ್ತು ನೀಡಲಾಗಿದೆ ಅಷ್ಟೇ. ಅಂಬೇಡ್ಕರ್ ಕೂಡ ಸಂಸ್ಕೃತ ಭಾಷೆ ಬೆಳೆಸುವಂತೆ ಮನವಿ ಮಾಡಿದ್ದರು. ಎಲ್ಲಾ ರೀತಿಯ ಬೇಡಿಕೆ ಇದೆ. ಕೊವಿಡ್(COVID 19) ಹಿನ್ನೆಲೆ ಪ್ರಕಾಶನ ಮುಚ್ಚಿಹೋಗಿದೆ. ಅದಕ್ಕಾಗಿ ಪ್ರತೀ ವರ್ಷ 2-3ಕೋಟಿ ರೂ. ನೀಡಬೇಕು. 700 ಎಕರೆಯಲ್ಲಿ ಕನ್ನಡ ವಿಶ್ವವಿದ್ಯಾಲಯ (Kannada University) ನಿರ್ಮಾಣ ಆಗಿದೆ. ಕನ್ನಡಕ್ಕೆ ಹೆಚ್ಚು ಒತ್ತನ್ನು ನೀಡಿರುವ ಏಕೈಕ ಸರ್ಕಾರ ನಮ್ಮದು ಎಂದು ಸಂಸ್ಕೃತ ವಿವಿ ವಿರೋಧಿಗಳಿಗೆ ಸಚಿವ ಡಾ.ಅಶ್ವತ್ಥ್ ನಾರಾಯಣ(Ashwath Narayana) ಟಾಂಗ್​ ನೀಡಿದ್ದಾರೆ.

ಕನ್ನಡ ಕಡ್ಡಾಯ ಮಾಡುವಂತಿಲ್ಲ ಎಂದು ಕೋರ್ಟ್ ಇಂಟ್ರಿಮ್ ಮಾಡಿದೆ. ನಾವೇ ಕಡ್ಡಾಯ ಮಾಡಬೇಕು ಎಂದು ಒತ್ತು ನೀಡಿದ್ದೇವೆ. ಕನ್ನಡ ಭಾಷೆ ಬೆಳೆಯಬೇಕು ಎಂದು ನಮ್ಮ ಸರ್ಕಾರ ಒತ್ತು ನೀಡಿದೆ. ನಮ್ಮ ಸರ್ಕಾರದಿಂದ ಪಿಟಿಷನ್ ಕೂಡ ಹಾಕಿದ್ದೇವೆ. ಇಂಗ್ಲೀಷನ್ನೇ ತಲೆ ಮೇಲೆ ಹೊತ್ತು ಮೆರೆಸುತ್ತಿರುವಾಗ ಸಂಸ್ಕೃತಕ್ಕೆ ಯಾಕೆ ವಿರೋಧ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ಪ್ರಶ್ನೆ ಮಾಡಿದ್ದಾರೆ.

ಯಾವುದೇ ಕಾರಣಕ್ಕೂ ಮಹಿಳಾ ವಿವಿಯನ್ನು ಮುಚ್ಚಲ್ಲ: ಡಾ.ಅಶ್ವತ್ಥ್ ನಾರಾಯಣ

ವಿಜಯಪುರ ಮಹಿಳಾ ವಿವಿ ಮುಚ್ಚುವ ಪ್ರಶ್ನೆಯೇ ಇಲ್ಲ. ರಾಜಕೀಯಕ್ಕಾಗಿ ಕೆಲವರು ಇಂತಹ ಹೇಳಿಕೆ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮಹಿಳಾ ವಿವಿಯನ್ನು ಮುಚ್ಚಲ್ಲ. ವಿಕೇಂದ್ರಿಕರಣ ಮಾಡಬೇಕು ಎನ್ನುವುದು ಉದ್ದೇಶ. ಜನ ಪ್ರತಿನಿಧಿಗಳು, ವಿಶ್ವವಿದ್ಯಾಲಯ ಮುಖ್ಯಸ್ಥರ ಜೊತೆಗೆ ಕೇವಲ ಕನ್ಸಲ್ಟೇಷನ್ ಮಾಡುತ್ತಿದ್ದೇವೆ ಅಷ್ಟೇ ಎಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆ ವಿಚಾರ

ಇದು ಸಿಎಂ ಬೊಮ್ಮಾಯಿಯವರ ನಿರ್ಧಾರಕ್ಕೆ ಬಿಟ್ಟಿದ್ದು. ಯಾರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳಬೇಕು. ಯಾರನ್ನು ಬಿಡಬೇಕು ಎಂದು ಸಿಎಂ ನಿರ್ಧರಿಸುತ್ತಾರೆ. ಇದರ ಬಗ್ಗೆ ನಾನೇನೂ ಮಾತನಾಡಲ್ಲ ಎಂದು  ಬೆಂಗಳೂರಿನಲ್ಲಿ ಸಚಿವ ಡಾ.ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ಸರ್ಕಾರಿ ಶಾಲೆಯಲ್ಲಿ ನ್ಯಾನೊ ಉಪಗ್ರಹ ನಿರ್ಮಾಣಕ್ಕೆ 1.90 ಕೋಟಿ ರೂ. ಬಿಡುಗಡೆ: ಸಚಿವ ಸಿಎನ್​ ಅಶ್ವತ್ಥ್​ ನಾರಾಯಣ್​

ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಚಿಕಿತ್ಸೆ ಪಡೆಯದಿದ್ದರೆ ಪರಿಹಾರವಿಲ್ಲ: ಸಚಿವ ಜೆಸಿ ಮಾಧುಸ್ವಾಮಿ

Published On - 3:33 pm, Mon, 24 January 22

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!