AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಬಗ್ಗೆ ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
TV9 Web
| Edited By: |

Updated on: Nov 18, 2022 | 3:36 PM

Share

ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಐಡಿ ಕಾರ್ಡ್​ನಲ್ಲಿ ಭೂತ್​ ಮಟ್ಟದ ಆಫೀಸರ್​​ (BLO) ಎಂದು ನಮೂದು ಮಾಡಿಕೊಂಡಿದ್ದಾರೆ. ಈ ವಿಚಾರ ನವೆಂಬರ್​ 2ರಂದು ಗೊತ್ತಾಗಿದೆ. ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಸಂಸ್ಥೆ ಅನುಮತಿ ರದ್ದು ಮಾಡಿದ್ದೇವೆ. ಹಾಗೆ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2018ರಿಂದ ಚಿಲುಮೆ ಸಂಸ್ಥೆಗೆ ಮತದಾನದ ಜಾಗೃತಿಗೆ ಅನುಮತಿ ನೀಡಿದ್ದೇವೆ. ಈ ವರ್ಷ ಉಚಿತವಾಗಿ ಅರಿವು ಮೂಡಿಸುತ್ತೇವೆ ಎಂದು ಸಂಸ್ಥೆ ಹೇಳಿತ್ತು. ಹಾಗಾಗಿ ಚಿಲುಮೆ ಸಂಸ್ಥೆಗೆ ಅನುಮತಿಯನ್ನು ನೀಡಲಾಗಿತ್ತು ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ.

ಚಿಲುಮೆ ಸಂಸ್ಥೆಯನ್ನು ಆಧಾರ್​ ಜೋಡಣೆ ಬಗ್ಗೆಯೂ ಜಾಗೃತಿ ಮೂಡಿಸಲು ಬಳಸಿದ್ದೇವೆ. ಸಮರ್ಥಂ ಸಂಸ್ಥೆಯಿಂದ ನಮಗೆ ಒಂದು ದೂರು ಬಂದಿತ್ತು. ಬಿಬಿಎಂಪಿಯಿಂದ PLO ಐಡಿ ಬಂದಿದೆ ಅನ್ನೋ ದೂರು ಬಂದಿತ್ತು. ಈ ಘಟನೆಯ ಬಗ್ಗೆ ನಾವು CEO ಆಫೀಸ್​ಗೆ ಮಾಹಿತಿ ನೀಡಿದ್ದೇವೆ ಎಂದರು.

ಚಿಲುಮೆ ಸಂಸ್ಥೆಗೆ ಸರ್ವೆ ಮಾಡುವ ಅಧಿಕಾರ ಇಲ್ಲ. ಖಾಸಗಿ ಮಾಹಿತಿ ಸಂಗ್ರಹ ಮಾಡುವಂತಿಲ್ಲ, ಒಂದೊಮ್ಮೆ ಮಾಡಿದರೇ ತನಿಖೆ ಮಾಡಲು ದೂರು ನೀಡಿದ್ದೇವೆ. ರಿಜಿನಲ್ ಕಮಿಷನರ್ ತನಿಖೆ ಮಾಡಲಿದ್ದಾರೆ. ಎಲ್ಲಾ ಆರ್​ಒ ಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ. 48 ಗಂಟೆಯೊಳಗೆ ಮಾಹಿತಿ ನೀಡಲು ಸೂಚನೆ ನೀಡಿದ್ದೇನೆ. ಯಾರೆಲ್ಲ ಐಡಿ ಕಾರ್ಡ್ ಹಂಚಿಕೆ ಮಾಡಿದ್ದಾರೋ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ