AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಬಗ್ಗೆ ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
TV9 Web
| Edited By: ವಿವೇಕ ಬಿರಾದಾರ|

Updated on: Nov 18, 2022 | 3:36 PM

Share

ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಐಡಿ ಕಾರ್ಡ್​ನಲ್ಲಿ ಭೂತ್​ ಮಟ್ಟದ ಆಫೀಸರ್​​ (BLO) ಎಂದು ನಮೂದು ಮಾಡಿಕೊಂಡಿದ್ದಾರೆ. ಈ ವಿಚಾರ ನವೆಂಬರ್​ 2ರಂದು ಗೊತ್ತಾಗಿದೆ. ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಸಂಸ್ಥೆ ಅನುಮತಿ ರದ್ದು ಮಾಡಿದ್ದೇವೆ. ಹಾಗೆ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2018ರಿಂದ ಚಿಲುಮೆ ಸಂಸ್ಥೆಗೆ ಮತದಾನದ ಜಾಗೃತಿಗೆ ಅನುಮತಿ ನೀಡಿದ್ದೇವೆ. ಈ ವರ್ಷ ಉಚಿತವಾಗಿ ಅರಿವು ಮೂಡಿಸುತ್ತೇವೆ ಎಂದು ಸಂಸ್ಥೆ ಹೇಳಿತ್ತು. ಹಾಗಾಗಿ ಚಿಲುಮೆ ಸಂಸ್ಥೆಗೆ ಅನುಮತಿಯನ್ನು ನೀಡಲಾಗಿತ್ತು ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ.

ಚಿಲುಮೆ ಸಂಸ್ಥೆಯನ್ನು ಆಧಾರ್​ ಜೋಡಣೆ ಬಗ್ಗೆಯೂ ಜಾಗೃತಿ ಮೂಡಿಸಲು ಬಳಸಿದ್ದೇವೆ. ಸಮರ್ಥಂ ಸಂಸ್ಥೆಯಿಂದ ನಮಗೆ ಒಂದು ದೂರು ಬಂದಿತ್ತು. ಬಿಬಿಎಂಪಿಯಿಂದ PLO ಐಡಿ ಬಂದಿದೆ ಅನ್ನೋ ದೂರು ಬಂದಿತ್ತು. ಈ ಘಟನೆಯ ಬಗ್ಗೆ ನಾವು CEO ಆಫೀಸ್​ಗೆ ಮಾಹಿತಿ ನೀಡಿದ್ದೇವೆ ಎಂದರು.

ಚಿಲುಮೆ ಸಂಸ್ಥೆಗೆ ಸರ್ವೆ ಮಾಡುವ ಅಧಿಕಾರ ಇಲ್ಲ. ಖಾಸಗಿ ಮಾಹಿತಿ ಸಂಗ್ರಹ ಮಾಡುವಂತಿಲ್ಲ, ಒಂದೊಮ್ಮೆ ಮಾಡಿದರೇ ತನಿಖೆ ಮಾಡಲು ದೂರು ನೀಡಿದ್ದೇವೆ. ರಿಜಿನಲ್ ಕಮಿಷನರ್ ತನಿಖೆ ಮಾಡಲಿದ್ದಾರೆ. ಎಲ್ಲಾ ಆರ್​ಒ ಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ. 48 ಗಂಟೆಯೊಳಗೆ ಮಾಹಿತಿ ನೀಡಲು ಸೂಚನೆ ನೀಡಿದ್ದೇನೆ. ಯಾರೆಲ್ಲ ಐಡಿ ಕಾರ್ಡ್ ಹಂಚಿಕೆ ಮಾಡಿದ್ದಾರೋ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ