AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಬಗ್ಗೆ ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
TV9 Web
| Edited By: ವಿವೇಕ ಬಿರಾದಾರ|

Updated on: Nov 18, 2022 | 3:36 PM

Share

ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಐಡಿ ಕಾರ್ಡ್​ನಲ್ಲಿ ಭೂತ್​ ಮಟ್ಟದ ಆಫೀಸರ್​​ (BLO) ಎಂದು ನಮೂದು ಮಾಡಿಕೊಂಡಿದ್ದಾರೆ. ಈ ವಿಚಾರ ನವೆಂಬರ್​ 2ರಂದು ಗೊತ್ತಾಗಿದೆ. ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಸಂಸ್ಥೆ ಅನುಮತಿ ರದ್ದು ಮಾಡಿದ್ದೇವೆ. ಹಾಗೆ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2018ರಿಂದ ಚಿಲುಮೆ ಸಂಸ್ಥೆಗೆ ಮತದಾನದ ಜಾಗೃತಿಗೆ ಅನುಮತಿ ನೀಡಿದ್ದೇವೆ. ಈ ವರ್ಷ ಉಚಿತವಾಗಿ ಅರಿವು ಮೂಡಿಸುತ್ತೇವೆ ಎಂದು ಸಂಸ್ಥೆ ಹೇಳಿತ್ತು. ಹಾಗಾಗಿ ಚಿಲುಮೆ ಸಂಸ್ಥೆಗೆ ಅನುಮತಿಯನ್ನು ನೀಡಲಾಗಿತ್ತು ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ.

ಚಿಲುಮೆ ಸಂಸ್ಥೆಯನ್ನು ಆಧಾರ್​ ಜೋಡಣೆ ಬಗ್ಗೆಯೂ ಜಾಗೃತಿ ಮೂಡಿಸಲು ಬಳಸಿದ್ದೇವೆ. ಸಮರ್ಥಂ ಸಂಸ್ಥೆಯಿಂದ ನಮಗೆ ಒಂದು ದೂರು ಬಂದಿತ್ತು. ಬಿಬಿಎಂಪಿಯಿಂದ PLO ಐಡಿ ಬಂದಿದೆ ಅನ್ನೋ ದೂರು ಬಂದಿತ್ತು. ಈ ಘಟನೆಯ ಬಗ್ಗೆ ನಾವು CEO ಆಫೀಸ್​ಗೆ ಮಾಹಿತಿ ನೀಡಿದ್ದೇವೆ ಎಂದರು.

ಚಿಲುಮೆ ಸಂಸ್ಥೆಗೆ ಸರ್ವೆ ಮಾಡುವ ಅಧಿಕಾರ ಇಲ್ಲ. ಖಾಸಗಿ ಮಾಹಿತಿ ಸಂಗ್ರಹ ಮಾಡುವಂತಿಲ್ಲ, ಒಂದೊಮ್ಮೆ ಮಾಡಿದರೇ ತನಿಖೆ ಮಾಡಲು ದೂರು ನೀಡಿದ್ದೇವೆ. ರಿಜಿನಲ್ ಕಮಿಷನರ್ ತನಿಖೆ ಮಾಡಲಿದ್ದಾರೆ. ಎಲ್ಲಾ ಆರ್​ಒ ಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ. 48 ಗಂಟೆಯೊಳಗೆ ಮಾಹಿತಿ ನೀಡಲು ಸೂಚನೆ ನೀಡಿದ್ದೇನೆ. ಯಾರೆಲ್ಲ ಐಡಿ ಕಾರ್ಡ್ ಹಂಚಿಕೆ ಮಾಡಿದ್ದಾರೋ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!