AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​

ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಬಗ್ಗೆ ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ: ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲು- ತುಷಾರ್ ಗಿರಿನಾಥ್​
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್
TV9 Web
| Edited By: |

Updated on: Nov 18, 2022 | 3:36 PM

Share

ಬೆಂಗಳೂರು: ನಗರದಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಐಡಿ ಕಾರ್ಡ್​ನಲ್ಲಿ ಭೂತ್​ ಮಟ್ಟದ ಆಫೀಸರ್​​ (BLO) ಎಂದು ನಮೂದು ಮಾಡಿಕೊಂಡಿದ್ದಾರೆ. ಈ ವಿಚಾರ ನವೆಂಬರ್​ 2ರಂದು ಗೊತ್ತಾಗಿದೆ. ಚುನಾವಣಾ ಆಯುಕ್ತರಿಗೆ ಮಾಹಿತಿ ನೀಡಿ, ಸಂಸ್ಥೆ ಅನುಮತಿ ರದ್ದು ಮಾಡಿದ್ದೇವೆ. ಹಾಗೆ ಚಿಲುಮೆ ಸಂಸ್ಥೆ ವಿರುದ್ಧ ದೂರು ದಾಖಲಿಸಿದ್ದೇವೆ ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ತಿಳಿಸಿದರು.

ಬೆಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು 2018ರಿಂದ ಚಿಲುಮೆ ಸಂಸ್ಥೆಗೆ ಮತದಾನದ ಜಾಗೃತಿಗೆ ಅನುಮತಿ ನೀಡಿದ್ದೇವೆ. ಈ ವರ್ಷ ಉಚಿತವಾಗಿ ಅರಿವು ಮೂಡಿಸುತ್ತೇವೆ ಎಂದು ಸಂಸ್ಥೆ ಹೇಳಿತ್ತು. ಹಾಗಾಗಿ ಚಿಲುಮೆ ಸಂಸ್ಥೆಗೆ ಅನುಮತಿಯನ್ನು ನೀಡಲಾಗಿತ್ತು ಎಂದು ಬಿಬಿಎಂಪಿ (BBMP) ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​ ಹೇಳಿದ್ದಾರೆ.

ಚಿಲುಮೆ ಸಂಸ್ಥೆಯನ್ನು ಆಧಾರ್​ ಜೋಡಣೆ ಬಗ್ಗೆಯೂ ಜಾಗೃತಿ ಮೂಡಿಸಲು ಬಳಸಿದ್ದೇವೆ. ಸಮರ್ಥಂ ಸಂಸ್ಥೆಯಿಂದ ನಮಗೆ ಒಂದು ದೂರು ಬಂದಿತ್ತು. ಬಿಬಿಎಂಪಿಯಿಂದ PLO ಐಡಿ ಬಂದಿದೆ ಅನ್ನೋ ದೂರು ಬಂದಿತ್ತು. ಈ ಘಟನೆಯ ಬಗ್ಗೆ ನಾವು CEO ಆಫೀಸ್​ಗೆ ಮಾಹಿತಿ ನೀಡಿದ್ದೇವೆ ಎಂದರು.

ಚಿಲುಮೆ ಸಂಸ್ಥೆಗೆ ಸರ್ವೆ ಮಾಡುವ ಅಧಿಕಾರ ಇಲ್ಲ. ಖಾಸಗಿ ಮಾಹಿತಿ ಸಂಗ್ರಹ ಮಾಡುವಂತಿಲ್ಲ, ಒಂದೊಮ್ಮೆ ಮಾಡಿದರೇ ತನಿಖೆ ಮಾಡಲು ದೂರು ನೀಡಿದ್ದೇವೆ. ರಿಜಿನಲ್ ಕಮಿಷನರ್ ತನಿಖೆ ಮಾಡಲಿದ್ದಾರೆ. ಎಲ್ಲಾ ಆರ್​ಒ ಗಳಿಂದ ಮಾಹಿತಿ ಪಡೆಯಲಾಗುತ್ತಿದೆ. ಮಾಹಿತಿ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ. 48 ಗಂಟೆಯೊಳಗೆ ಮಾಹಿತಿ ನೀಡಲು ಸೂಚನೆ ನೀಡಿದ್ದೇನೆ. ಯಾರೆಲ್ಲ ಐಡಿ ಕಾರ್ಡ್ ಹಂಚಿಕೆ ಮಾಡಿದ್ದಾರೋ ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ ಎಂದು ಸೂಚಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ