AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬೊಮ್ಮಾಯಿರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ, ಧರಣಿ ಕೈಬಿಡುವ ಬಗ್ಗೆ ಚರ್ಚಿಸಿ ನಿರ್ಧಾರ ತಿಳಿಸುತ್ತೇವೆ -CITU ರಾಜ್ಯಾಧ್ಯಕ್ಷೆ ವರಲಕ್ಷ್ಮೀ

ಸಿಎಂ ಬೊಮ್ಮಾಯಿ ಭೇಟಿ ಬಳಿಕ ಮಾತನಾಡಿದ CITU ಅಧ್ಯಕ್ಷೆ ವರಲಕ್ಷ್ಮೀ, ಸದ್ಯ 60 ಕೋಟಿ ಹಣ ಮಂಜೂರು ಮಾಡಿ ಎಂದು ಮನವಿ ಮಾಡಿದ್ದೇವೆ. ಸಿಎಂ ಸಕಾರತ್ಮಕವಾಗಿ ಸ್ಪಂದಿಸಿ, ಭರವಸೆ ನೀಡಿದ್ದಾರೆ. ಸಿಎಂ ನಮ್ಮ ಬೇಡಿಕೆಗಳನ್ನ ಆಲಿಸಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿದ್ದೇವೆ ಎಂದರು.

ಸಿಎಂ ಬೊಮ್ಮಾಯಿರಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ, ಧರಣಿ ಕೈಬಿಡುವ ಬಗ್ಗೆ ಚರ್ಚಿಸಿ ನಿರ್ಧಾರ ತಿಳಿಸುತ್ತೇವೆ -CITU ರಾಜ್ಯಾಧ್ಯಕ್ಷೆ ವರಲಕ್ಷ್ಮೀ
ಬಿಸಿಯೂಟ ನೌಕರರ ಪ್ರತಿಭಟನೆ
TV9 Web
| Edited By: |

Updated on:Aug 17, 2022 | 5:17 PM

Share

ಬೆಂಗಳೂರು: ಸಂಬಳ ಹೆಚ್ಚಳ, ಸೌಲಭ್ಯ ಹೆಚ್ಚಳ ಅಂತಾ ಪ್ರತಿಭಟನೆ ಮಾಡ್ತಿದ್ದ ರಾಜ್ಯ ಬಿಸಿಯೂಟ ನೌಕರರು ಆಗಸ್ಟ್ 16ರಿಂದ ತಮ್ಮ ನೌಕರಿ ಉಳಿವಿಗಾಗಿ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. 60 ವರ್ಷ ವಯಸ್ಸಾದ ಕಾರ್ಯಕರ್ತೆಯರನ್ನು ಸರ್ಕಾರ ಕೆಲಸದಿಂದ ವಜಾ ಮಾಡಿದೆ. ಇದರಿಂದಾಗಿ 6,500 ಕಾರ್ಯಕರ್ತೆಯರು ಕೆಲಸ ಕಳೆದುಕೊಂಡು ಬೀದಿಗೆ ಬಂದಿದ್ದಾರೆ. ಇವರಿಗೆ ನಿವೃತ್ತಿ ವೇತನ ಕೊಟ್ಟಿಲ್ಲ. ಯಾವ ಸೌಲಭ್ಯ ಕೊಡದೆ ಕೆಲಸದಿಂದ ವಜಾಗೊಳಿಸಿದ್ದಾರೆ. ಇದ್ರಿಂದ ಸಿಟ್ಟಿಗೆದ್ದಿರೋ ಬಿಸಿಯೂಟ ನೌಕರರು CITU ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ರು. ಹಾಗೂ ಮಧ್ಯಾಹ್ನ 1 ಗಂಟೆಯೊಳಗೆ ಸ್ಪಂದಿಸದೆ ಇದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕೋದಾಗಿ ಕಾರ್ಯಕರ್ತೆಯರು ಗಡುವು ನೀಡಿದ್ದರು. ಹೀಗಾಗಿ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆಗೆ ಕರೆದಿದ್ದು CITU ರಾಜ್ಯಾಧ್ಯಕ್ಷೆ ವರಲಕ್ಷ್ಮೀ ಸಿಎಂ ಭೇಟಿ ಮಾಡಿದ್ದಾರೆ.

ಧರಣಿ ಕೈಬಿಡಬೇಕಾ ಬೇಡ್ವಾ ಅನ್ನೋ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ

ಇನ್ನು ಸಿಎಂ ಬೊಮ್ಮಾಯಿ ಭೇಟಿ ಬಳಿಕ ಮಾತನಾಡಿದ CITU ಅಧ್ಯಕ್ಷೆ ವರಲಕ್ಷ್ಮೀ, ಸದ್ಯ 60 ಕೋಟಿ ಹಣ ಮಂಜೂರು ಮಾಡಿ ಎಂದು ಮನವಿ ಮಾಡಿದ್ದೇವೆ. ಸಿಎಂ ಸಕಾರತ್ಮಕವಾಗಿ ಸ್ಪಂದಿಸಿ, ಭರವಸೆ ನೀಡಿದ್ದಾರೆ. ಸಿಎಂ ನಮ್ಮ ಬೇಡಿಕೆಗಳನ್ನ ಆಲಿಸಿದ್ದಾರೆ. ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿದ್ದೇವೆ. ಆದ್ರೆ ಶಿಕ್ಷಣ ಸಚಿವರು, ಹಾಗೂ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವ ಕುಮಾರ್ ಪ್ರತಿಭಟನೆ ಸ್ಥಳಕ್ಕೆ ಬರಬೇಕೆಂದು ಒತ್ತಾಯ ಮಾಡಿದ್ದೇವೆ. ಇನ್ನೂ ಪ್ರತಿಭಟನೆ ಕೈಬಿಡಬೇಕಾ ಎಂಬ ವಿಚಾರವನ್ನ ಚರ್ಚೆ ಮಾಡ್ತೇವೆ. ಇನ್ನೂ ಎರಡು ಗಂಟೆಯಲ್ಲಿ ನಮ್ಮ ನಿರ್ಧಾರ ತಿಳಿಸುತ್ತೇವೆ ಎಂದರು.

60 ವರ್ಷ ಮೇಲ್ಪಟ್ಟ ನೌಕರರನ್ನು ಕೆಲಸದಿಂದ ವಜಾಗೊಳಿಸುವಾಗ 1 ಲಕ್ಷ ರೂಪಾಯಿ ಹಿಡಿಗಂಟು ನೀಡಬೇಕು. ಬಿಸಿಯೂಟ ನೌಕರರನ್ನು ಖಾಯಂಗೊಳಿಸಬೇಕು. ಇವರನ್ನು ಸರ್ಕಾರಿ ಕಾರ್ಮಿಕರೆಂದು ಗುರುತಿಸಬೇಕು. ಬಜೆಟ್‌ನಲ್ಲಿ ಘೋಷಣೆ ಮಾಡಿದ್ದ 1 ಸಾವಿರ ರೂಪಾಯಿಗಳನ್ನ ಜಾರಿ ಮಾಡಬೇಕು. ಜೊತೆಗೆ ಬೇಸಿಗೆ ಮತ್ತು ದಸರಾ ರಜೆಗಳ ವೇತನವನ್ನು ಕಟ್ಟಿಕೊಡಬೇಕು ಎಂದು ಬಿಸಿಯೂಟ ನೌಕರರು ಬೇಡಿಕೆ ಇಟ್ಟಿದ್ದಾರೆ. ಇದನ್ನೂ ಓದಿ: 6,500 ಮಂದಿ ಬಿಸಿಯೂಟ ಕಾರ್ಯಕರ್ತೆಯರ ವಜಾ: ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:15 pm, Wed, 17 August 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್