AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ವಿರೋಧಿಗಳನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಿದೆ: ಸಿದ್ದರಾಮಯ್ಯ ಕರೆ

ಉಗ್ರಗಾಮಿಗಳು ಒಂದು ರಾಜ್ಯದಲ್ಲಿ ಕೃತ್ಯ ಎಸಗಿ ಬೇರೆ ರಾಜ್ಯದಲ್ಲಿ ತಲೆಮರಿಸಿಕೊಳ್ಳುತ್ತಾರೆ. ಇವರೆಲ್ಲರನ್ನು ಮಟ್ಟ ಹಾಕಬೇಕಿದೆ. ಹೀಗಾಗಿ ಈ ವಿಚಾರದಲ್ಲಿ ರಾಜ್ಯವಾರು ಅಧಿಕಾರಿಗಳ ಹಂತದಲ್ಲಿ ಸ್ವಲ್ಪ ತೊಂದರೆಗಳು ಆಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಿಕೊಂಡು ಗಡಿಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಕೊಟ್ಟರು.

ದೇಶ ವಿರೋಧಿಗಳನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಿದೆ: ಸಿದ್ದರಾಮಯ್ಯ ಕರೆ
ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: ವಿವೇಕ ಬಿರಾದಾರ|

Updated on:Sep 13, 2023 | 12:37 PM

Share

ಬೆಂಗಳೂರು ಸೆ.13: ಇತ್ತೀಚೆಗೆ ಸೈಬರ್ (Cyber) ಸೇರಿ ವಿವಿಧ ಮಾದರಿಯ ಕೇಸ್​ ಬೆಳಕಿಗೆ ಬರುತ್ತಿವೆ. ದೇಶ ವಿರೋಧಿಗಳು ಕರ್ನಾಟಕ, ಕೇರಳ ಸೇರಿದಂತೆ ಹಲವೆಡೆ ಇದ್ದಾರೆ. ಅವರನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು (States) ಒಟ್ಟಾಗಿ ಕೆಲಸ ಮಾಡಬೇಕಿದೆ. ಪ್ರಮುಖವಾಗಿ ಉಗ್ರವಾದ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ಸಂಬಂಧ ಅಂತರಾಜ್ಯಗಳಲ್ಲಿ ಉಂಟಾಗುವ ಕಾನೂನಾತ್ಮ ತೊಡಕುಗಳನ್ನು ನಿವಾರಿಸಿಕೊಂಡು ಒಟ್ಟಾಗಿ ಕೆಲಸ ಮಾಡಬೇಕು. ಈ ಬಗ್ಗೆ ಅರಿವು ಮೂಡಿಸುವ ಜೊತೆಗೆ ಉತ್ತಮ ಭದ್ರತೆಯನ್ನು ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ನಡೆದ ದಕ್ಷಿಣ ಭಾರತ ಡಿಜಿಪಿಗಳ ಕಾನ್ಫರೆನ್ಸ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಹಲವಾರು ಮಾದರಿಯ ಅಪರಾಧಗಳು ಖಾಸಗಿತನಕ್ಕೆ ದಕ್ಕೆ ಉಂಟು ಮಾಡುತ್ತಿವೆ. ಉಗ್ರಗಾಮಿಗಳು ಒಂದು ರಾಜ್ಯದಲ್ಲಿ ಕೃತ್ಯ ಎಸಗಿ ಬೇರೆ ರಾಜ್ಯದಲ್ಲಿ ತಲೆಮರಿಸಿಕೊಳ್ಳುತ್ತಾರೆ. ಇವರೆಲ್ಲರನ್ನು ಮಟ್ಟ ಹಾಕಬೇಕಿದೆ. ಹೀಗಾಗಿ ಈ ವಿಚಾರದಲ್ಲಿ ರಾಜ್ಯವಾರು ಅಧಿಕಾರಿಗಳ ಹಂತದಲ್ಲಿ ಸ್ವಲ್ಪ ತೊಂದರೆಗಳು ಆಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಿಕೊಂಡು ಗಡಿಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಕರೆ ಕೊಟ್ಟರು.

ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇತ್ತಿಚೀನ ದಿನದಲ್ಲಿ ಸೈಬರ್ ಸೇರಿ ವಿವಿಧ ಮಾದರಿಯ ಕೇಸ್​ಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಆರೋಪಿಗಳಿಗಿಂತ ಒಂದು ಹೆಜ್ಜೆ ಮುಂದೆ ಇದ್ದು ಕೆಲಸ ಮಾಡಬೇಕಿದೆ. ಸಮಾಜವನ್ನು ಕಾಪಾಡಲು ಪೊಲೀಸ್ ಇಲಾಖೆ ಮಾಡುತ್ತಿರುವ ಕೆಲಸ ನಮಗೆ ಆತ್ಮವಿಶ್ವಾಸ ಹೆಚ್ಚಿಸುತ್ತಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಇನ್ನು ರಾಷ್ಟ್ರದ ಪ್ರಮುಖ ಪೊಲೀಸ್ ಅಧಿಕಾರಿಗಳು ಇಂದು ಸೌತ್ ಇಂಡಿಯಾ ಡಿಜಿಪಿಗಳ ಕಾನ್ಫರೆನ್ಸ್​​ನಲ್ಲಿ ಭಾಗಿಯಾಗಿರುವುದಕ್ಕೆ ಹೆಮ್ಮೆ ಇದೆ. ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ, ಪುದುಚೇರಿ, ಅಂಡಮಾನ್-ನಿಕೋಬಾರ್ ಲಕ್ಷದ್ವೀಪ್​ಗಳ ಎನ್​ಸಿಸಿಬಿ, ಎನ್​ಐಎ, ಸಿಆರ್​ಪಿಎಫ್, ಸಿಐಎಸ್​ಎಫ್ ಮತ್ತು ಕೇಂದ್ರ ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದೀರಿ. ನಾವೆಲ್ಲರು ಒಟ್ಟಾಗಿ ಕೆಲಸ ಮಾಡೋಣ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:31 pm, Wed, 13 September 23

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು