AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ ವಿರೋಧಿಗಳನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಿದೆ: ಸಿದ್ದರಾಮಯ್ಯ ಕರೆ

ಉಗ್ರಗಾಮಿಗಳು ಒಂದು ರಾಜ್ಯದಲ್ಲಿ ಕೃತ್ಯ ಎಸಗಿ ಬೇರೆ ರಾಜ್ಯದಲ್ಲಿ ತಲೆಮರಿಸಿಕೊಳ್ಳುತ್ತಾರೆ. ಇವರೆಲ್ಲರನ್ನು ಮಟ್ಟ ಹಾಕಬೇಕಿದೆ. ಹೀಗಾಗಿ ಈ ವಿಚಾರದಲ್ಲಿ ರಾಜ್ಯವಾರು ಅಧಿಕಾರಿಗಳ ಹಂತದಲ್ಲಿ ಸ್ವಲ್ಪ ತೊಂದರೆಗಳು ಆಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಿಕೊಂಡು ಗಡಿಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಕೊಟ್ಟರು.

ದೇಶ ವಿರೋಧಿಗಳನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಿದೆ: ಸಿದ್ದರಾಮಯ್ಯ ಕರೆ
ಮುಖ್ಯಮಂತ್ರಿ ಸಿದ್ದರಾಮಯ್ಯ
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on:Sep 13, 2023 | 12:37 PM

Share

ಬೆಂಗಳೂರು ಸೆ.13: ಇತ್ತೀಚೆಗೆ ಸೈಬರ್ (Cyber) ಸೇರಿ ವಿವಿಧ ಮಾದರಿಯ ಕೇಸ್​ ಬೆಳಕಿಗೆ ಬರುತ್ತಿವೆ. ದೇಶ ವಿರೋಧಿಗಳು ಕರ್ನಾಟಕ, ಕೇರಳ ಸೇರಿದಂತೆ ಹಲವೆಡೆ ಇದ್ದಾರೆ. ಅವರನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು (States) ಒಟ್ಟಾಗಿ ಕೆಲಸ ಮಾಡಬೇಕಿದೆ. ಪ್ರಮುಖವಾಗಿ ಉಗ್ರವಾದ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ಸಂಬಂಧ ಅಂತರಾಜ್ಯಗಳಲ್ಲಿ ಉಂಟಾಗುವ ಕಾನೂನಾತ್ಮ ತೊಡಕುಗಳನ್ನು ನಿವಾರಿಸಿಕೊಂಡು ಒಟ್ಟಾಗಿ ಕೆಲಸ ಮಾಡಬೇಕು. ಈ ಬಗ್ಗೆ ಅರಿವು ಮೂಡಿಸುವ ಜೊತೆಗೆ ಉತ್ತಮ ಭದ್ರತೆಯನ್ನು ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ನಡೆದ ದಕ್ಷಿಣ ಭಾರತ ಡಿಜಿಪಿಗಳ ಕಾನ್ಫರೆನ್ಸ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಹಲವಾರು ಮಾದರಿಯ ಅಪರಾಧಗಳು ಖಾಸಗಿತನಕ್ಕೆ ದಕ್ಕೆ ಉಂಟು ಮಾಡುತ್ತಿವೆ. ಉಗ್ರಗಾಮಿಗಳು ಒಂದು ರಾಜ್ಯದಲ್ಲಿ ಕೃತ್ಯ ಎಸಗಿ ಬೇರೆ ರಾಜ್ಯದಲ್ಲಿ ತಲೆಮರಿಸಿಕೊಳ್ಳುತ್ತಾರೆ. ಇವರೆಲ್ಲರನ್ನು ಮಟ್ಟ ಹಾಕಬೇಕಿದೆ. ಹೀಗಾಗಿ ಈ ವಿಚಾರದಲ್ಲಿ ರಾಜ್ಯವಾರು ಅಧಿಕಾರಿಗಳ ಹಂತದಲ್ಲಿ ಸ್ವಲ್ಪ ತೊಂದರೆಗಳು ಆಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಿಕೊಂಡು ಗಡಿಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಕರೆ ಕೊಟ್ಟರು.

ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇತ್ತಿಚೀನ ದಿನದಲ್ಲಿ ಸೈಬರ್ ಸೇರಿ ವಿವಿಧ ಮಾದರಿಯ ಕೇಸ್​ಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಆರೋಪಿಗಳಿಗಿಂತ ಒಂದು ಹೆಜ್ಜೆ ಮುಂದೆ ಇದ್ದು ಕೆಲಸ ಮಾಡಬೇಕಿದೆ. ಸಮಾಜವನ್ನು ಕಾಪಾಡಲು ಪೊಲೀಸ್ ಇಲಾಖೆ ಮಾಡುತ್ತಿರುವ ಕೆಲಸ ನಮಗೆ ಆತ್ಮವಿಶ್ವಾಸ ಹೆಚ್ಚಿಸುತ್ತಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಇನ್ನು ರಾಷ್ಟ್ರದ ಪ್ರಮುಖ ಪೊಲೀಸ್ ಅಧಿಕಾರಿಗಳು ಇಂದು ಸೌತ್ ಇಂಡಿಯಾ ಡಿಜಿಪಿಗಳ ಕಾನ್ಫರೆನ್ಸ್​​ನಲ್ಲಿ ಭಾಗಿಯಾಗಿರುವುದಕ್ಕೆ ಹೆಮ್ಮೆ ಇದೆ. ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ, ಪುದುಚೇರಿ, ಅಂಡಮಾನ್-ನಿಕೋಬಾರ್ ಲಕ್ಷದ್ವೀಪ್​ಗಳ ಎನ್​ಸಿಸಿಬಿ, ಎನ್​ಐಎ, ಸಿಆರ್​ಪಿಎಫ್, ಸಿಐಎಸ್​ಎಫ್ ಮತ್ತು ಕೇಂದ್ರ ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದೀರಿ. ನಾವೆಲ್ಲರು ಒಟ್ಟಾಗಿ ಕೆಲಸ ಮಾಡೋಣ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:31 pm, Wed, 13 September 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ