ದೇಶ ವಿರೋಧಿಗಳನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಿದೆ: ಸಿದ್ದರಾಮಯ್ಯ ಕರೆ

| Updated By: ವಿವೇಕ ಬಿರಾದಾರ

Updated on: Sep 13, 2023 | 12:37 PM

ಉಗ್ರಗಾಮಿಗಳು ಒಂದು ರಾಜ್ಯದಲ್ಲಿ ಕೃತ್ಯ ಎಸಗಿ ಬೇರೆ ರಾಜ್ಯದಲ್ಲಿ ತಲೆಮರಿಸಿಕೊಳ್ಳುತ್ತಾರೆ. ಇವರೆಲ್ಲರನ್ನು ಮಟ್ಟ ಹಾಕಬೇಕಿದೆ. ಹೀಗಾಗಿ ಈ ವಿಚಾರದಲ್ಲಿ ರಾಜ್ಯವಾರು ಅಧಿಕಾರಿಗಳ ಹಂತದಲ್ಲಿ ಸ್ವಲ್ಪ ತೊಂದರೆಗಳು ಆಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಿಕೊಂಡು ಗಡಿಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಕೊಟ್ಟರು.

ದೇಶ ವಿರೋಧಿಗಳನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು ಒಟ್ಟಾಗಿ ಕೆಲಸ ಮಾಡಬೇಕಿದೆ: ಸಿದ್ದರಾಮಯ್ಯ ಕರೆ
ಮುಖ್ಯಮಂತ್ರಿ ಸಿದ್ದರಾಮಯ್ಯ
Follow us on

ಬೆಂಗಳೂರು ಸೆ.13: ಇತ್ತೀಚೆಗೆ ಸೈಬರ್ (Cyber) ಸೇರಿ ವಿವಿಧ ಮಾದರಿಯ ಕೇಸ್​ ಬೆಳಕಿಗೆ ಬರುತ್ತಿವೆ. ದೇಶ ವಿರೋಧಿಗಳು ಕರ್ನಾಟಕ, ಕೇರಳ ಸೇರಿದಂತೆ ಹಲವೆಡೆ ಇದ್ದಾರೆ. ಅವರನ್ನು ಮಟ್ಟಹಾಕಲು ಎಲ್ಲಾ ರಾಜ್ಯಗಳು (States) ಒಟ್ಟಾಗಿ ಕೆಲಸ ಮಾಡಬೇಕಿದೆ. ಪ್ರಮುಖವಾಗಿ ಉಗ್ರವಾದ ವಿಚಾರದಲ್ಲಿ ಒಟ್ಟಾಗಿ ಕೆಲಸ ಮಾಡಬೇಕಿದೆ. ಈ ಸಂಬಂಧ ಅಂತರಾಜ್ಯಗಳಲ್ಲಿ ಉಂಟಾಗುವ ಕಾನೂನಾತ್ಮ ತೊಡಕುಗಳನ್ನು ನಿವಾರಿಸಿಕೊಂಡು ಒಟ್ಟಾಗಿ ಕೆಲಸ ಮಾಡಬೇಕು. ಈ ಬಗ್ಗೆ ಅರಿವು ಮೂಡಿಸುವ ಜೊತೆಗೆ ಉತ್ತಮ ಭದ್ರತೆಯನ್ನು ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದರು.

ಬೆಂಗಳೂರಿನ ಐಟಿಸಿ ಗಾರ್ಡೇನಿಯಾ ಹೋಟೆಲ್​ನಲ್ಲಿ ನಡೆದ ದಕ್ಷಿಣ ಭಾರತ ಡಿಜಿಪಿಗಳ ಕಾನ್ಫರೆನ್ಸ್​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ ಹಲವಾರು ಮಾದರಿಯ ಅಪರಾಧಗಳು ಖಾಸಗಿತನಕ್ಕೆ ದಕ್ಕೆ ಉಂಟು ಮಾಡುತ್ತಿವೆ. ಉಗ್ರಗಾಮಿಗಳು ಒಂದು ರಾಜ್ಯದಲ್ಲಿ ಕೃತ್ಯ ಎಸಗಿ ಬೇರೆ ರಾಜ್ಯದಲ್ಲಿ ತಲೆಮರಿಸಿಕೊಳ್ಳುತ್ತಾರೆ. ಇವರೆಲ್ಲರನ್ನು ಮಟ್ಟ ಹಾಕಬೇಕಿದೆ. ಹೀಗಾಗಿ ಈ ವಿಚಾರದಲ್ಲಿ ರಾಜ್ಯವಾರು ಅಧಿಕಾರಿಗಳ ಹಂತದಲ್ಲಿ ಸ್ವಲ್ಪ ತೊಂದರೆಗಳು ಆಗುತ್ತಿದೆ. ಈ ಸಮಸ್ಯೆಯನ್ನು ಬಗೆಹರಿಸಿಕೊಂಡು ಗಡಿಗಳಲ್ಲಿ ಒಟ್ಟಾಗಿ ಕೆಲಸ ಮಾಡುವ ಅವಶ್ಯಕತೆ ಇದೆ ಎಂದು ಕರೆ ಕೊಟ್ಟರು.

ಇದನ್ನೂ ಓದಿ: ರಾಜ್ಯಾದ್ಯಂತ ಡೆಂಗ್ಯೂ ಉಲ್ಬಣ: ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಇತ್ತಿಚೀನ ದಿನದಲ್ಲಿ ಸೈಬರ್ ಸೇರಿ ವಿವಿಧ ಮಾದರಿಯ ಕೇಸ್​ಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಆರೋಪಿಗಳಿಗಿಂತ ಒಂದು ಹೆಜ್ಜೆ ಮುಂದೆ ಇದ್ದು ಕೆಲಸ ಮಾಡಬೇಕಿದೆ. ಸಮಾಜವನ್ನು ಕಾಪಾಡಲು ಪೊಲೀಸ್ ಇಲಾಖೆ ಮಾಡುತ್ತಿರುವ ಕೆಲಸ ನಮಗೆ ಆತ್ಮವಿಶ್ವಾಸ ಹೆಚ್ಚಿಸುತ್ತಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಇನ್ನು ರಾಷ್ಟ್ರದ ಪ್ರಮುಖ ಪೊಲೀಸ್ ಅಧಿಕಾರಿಗಳು ಇಂದು ಸೌತ್ ಇಂಡಿಯಾ ಡಿಜಿಪಿಗಳ ಕಾನ್ಫರೆನ್ಸ್​​ನಲ್ಲಿ ಭಾಗಿಯಾಗಿರುವುದಕ್ಕೆ ಹೆಮ್ಮೆ ಇದೆ. ತಮಿಳುನಾಡು, ತೆಲಂಗಾಣ, ಆಂದ್ರಪ್ರದೇಶ, ಪುದುಚೇರಿ, ಅಂಡಮಾನ್-ನಿಕೋಬಾರ್ ಲಕ್ಷದ್ವೀಪ್​ಗಳ ಎನ್​ಸಿಸಿಬಿ, ಎನ್​ಐಎ, ಸಿಆರ್​ಪಿಎಫ್, ಸಿಐಎಸ್​ಎಫ್ ಮತ್ತು ಕೇಂದ್ರ ಪೊಲೀಸ್ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದೀರಿ. ನಾವೆಲ್ಲರು ಒಟ್ಟಾಗಿ ಕೆಲಸ ಮಾಡೋಣ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:31 pm, Wed, 13 September 23