Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವೀಕರಿಸುತ್ತೇವೆ: ಸೇವಾ ಸಿಂಧು ಆ್ಯಪ್ ನಿರ್ದೇಶಕ ಸ್ಪಷ್ಟನೆ

ಗೃಹಜ್ಯೋತಿ ಯೋಜನೆಗೆ ಯಾವಾಗಿನಿಂದ ಅರ್ಜಿ ಸ್ವೀಕರಿಸಬೇಕು ಎನ್ನುವುದನ್ನು ತಿಳಿಸಿಲ್ಲ. ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವಿಕರಿಸಲಾಗುತ್ತದೆ ಎಂದು ಸೇವಾ ಸಿಂಧು ಆ್ಯಪ್​ ಡೈರೆಕ್ಟರ್ ದಿಲೀಶ್ ಶಶಿ ಸ್ಪಷ್ಟನೆ ನೀಡಿದ್ದಾರೆ.

ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವೀಕರಿಸುತ್ತೇವೆ: ಸೇವಾ ಸಿಂಧು ಆ್ಯಪ್ ನಿರ್ದೇಶಕ ಸ್ಪಷ್ಟನೆ
ಪ್ರಾತಿನಿಧಿಕ ಚಿತ್ರ
Follow us
ಗಂಗಾಧರ​ ಬ. ಸಾಬೋಜಿ
|

Updated on: Jun 06, 2023 | 7:21 PM

ಬೆಂಗಳೂರು: ಗೃಹಜ್ಯೋತಿ ಯೋಜನೆಯ (Gruha Jyothi Scheme) ಲಾಭ ಪಡೆಯಲು ಸೇವಾ ಸಿಂಧು ಮೂಲಕ ಅರ್ಜಿ ಸಲ್ಲಿಸುವಂತೆ  ಸರ್ಕಾರ ಸೂಚನೆ ನೀಡಿದೆ. ಆದರೆ ಇತ್ತ ಅರ್ಜಿ ಸಲ್ಲಿಸಲು ಅಪ್ಲಿಕೇಶನ್ ಓಪನ್ ಆಗುತ್ತಿಲ್ಲ ಎಂದು ಫಲಾನುಭವಿಗಳು ದೂರಿದ್ದರು. ಸದ್ಯ ಈ ಕುರಿತಾಗಿ ಸೇವಾ ಸಿಂಧು ಆ್ಯಪ್ (Seva Sindhu)​ ಡೈರೆಕ್ಟರ್ ದಿಲೀಶ್ ಶಶಿ ಸ್ಪಷ್ಟನೆ ನೀಡಿದ್ದಾರೆ. ಸದ್ಯ ಯಾವಾಗಿನಿಂದ ಅರ್ಜಿ ಸ್ವೀಕರಿಸಬೇಕು ಎನ್ನುವುದನ್ನು ತಿಳಿಸಿಲ್ಲ. ಸರ್ಕಾರದಿಂದ ಗೈಡ್ ಲೈನ್ಸ್ ಬಂದ ಕೂಡಲೇ ಅರ್ಜಿ ಸ್ವೀಕರಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

ಅರ್ಜಿಗೆ ಆಧಾರ್ ಕಾರ್ಡ್, ಪಾನ್ ಕಾರ್ಡ್ ಬೇಕು

ಸದ್ಯ ಅರ್ಜಿಗೆ ಆಧಾರ್ ಕಾರ್ಡ್, ಪಾನ್ ಕಾರ್ಡ್ ದಾಖಾಲೆಗಳನ್ನ ಕೊಡಬೇಕಾಗುತ್ತದೆ. ಒಂದೇ ದಾಖಾಲೆಯಲ್ಲಿ ಎಲ್ಲಾ ಸ್ಕೀಮ್​ಗಳನ್ನ ಮಾಡುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಎಲ್ಲಾ ಸ್ಕೀಮ್​ಗಳಿಗೆ ವಿವಿಧ ದಾಖಾಲೆಗಳನ್ನ ಪಡೆದುಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಲು ಬಂದಿಲ್ಲ ಅಧಿಕೃತ ಮಾಹಿತಿ: ಗೃಹಜ್ಯೋತಿ ಯೋಜನೆಗೆ ಬೇಕು ಕಾಲಾವಕಾಶ

ಅರ್ಜಿ ಸಲ್ಲಿಸುವುದು ಎಲ್ಲಿ?

ಬೆಂಗಳೂರಿನ ಜನರು ಬೆಂಗಳೂರು ಒನ್ ಕೇಂದ್ರಗಳಲ್ಲಿ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು. ಗ್ರಾಮ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು. ಸೇವಾ ಸಿಂಧು ಆ್ಯಪ್​​ ಅನ್ನು ಮೊಬೈಲ್​ನಲ್ಲಿಯೂ ಬಳಸಬಹುದು. ಸದ್ಯ ನಮ್ಮ‌ಹೆಲ್ಪ್ ಲೈನ್​ಗೆ ಸಾಕಷ್ಟು ಕರೆಗಳು ಬರುತ್ತಿವೆ ಎಂದರು.

ಇದನ್ನೂ ಓದಿ: Gruha Jyothi Scheme: ಗೃಹಜ್ಯೋತಿಗೆ ಹೊಸ ನಿಬಂಧನೆ, ಉಚಿತ ವಿದ್ಯುತ್​ಗಾಗಿ ಸೇವಾಸಿಂಧು ಮೂಲಕ ಅರ್ಜಿ ಸಲ್ಲಿಸಲು ಸೂಚನೆ

ಪ್ರತಿದಿನ 50 ಸಾವಿರಕ್ಕೂ ಹೆಚ್ಚು ಅರ್ಜಿಗಳನ್ನ ಹಾಕಬಹುದು. ಇದಕ್ಕೆ ತುಂಬ ಸಮಯ ಸಹ ಹಿಡಿಯೋದಿಲ್ಲ. ಸಾಧ್ಯವಾದಷ್ಟು ಸರ್ಕಾರದ ಅಧೀನದಲ್ಲಿರುವ ಸೆಂಟರ್​ಗಳಲ್ಲಿ ಅರ್ಜಿ ಹಾಕುವುದು ಒಳಿತು. ಇಲ್ಲದಿದ್ದರೆ ಸೈಬರ್ ಸೆಂಟರ್​ಗಳಲ್ಲಿ ಹೆಚ್ಚು ಹಣ ಪಡೆಯುತ್ತಾರೆ ಎಂದು ತಿಳಿಸಿದರು.

ಸರ್ಕಾರದಿಂದ ಸದ್ಯ ನಾಲ್ಕು ಸ್ಕೀಮ್​​ಗಳನ್ನ ನೋಂದಣಿ ಮಾಡುವುದಕ್ಕೆ ಹೇಳಿದ್ದಾರೆ. ರಿಜಿಸ್ಟ್ರೇಷನ್ ಮಾಡಲು ಸದ್ಯ ಆ್ಯಪ್ ಡೆವೆಲಪ್ ಮಾಡಲಾಗುತ್ತಿದೆ. ಎಲ್ಲಾರೂ ಸರ್ವೇ ಸಮಾನ್ಯವಾಗಿ ಬಳಸುವ ಐಡಿ ಡಿಟೇಲ್ಸ್​ಗಳನ್ನ ಪಡೆದುಕೊಳ್ಳಲಾಗುತ್ತದೆ. ಸದ್ಯ ಈ ಆ್ಯಪ್​ನಲ್ಲಿ‌ 70 ಇಲಾಖೆಗಳು ಉಪಯೋಗ ಪಡೆದುಕೊಳ್ಳುತ್ತಿವೆ. ಈ ಆಧಾರದ ಮೇಲೆ ಈ ಸ್ಕೀಮ್​ಗಳನ್ನ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ