AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾವು ಸಿದ್ದರಾಮೋತ್ಸವಕ್ಕೆ ಬೇಕಿದ್ದರೆ ಸಹಕಾರ ನೀಡುತ್ತೇವೆ, ಆದರೆ ನಮಗೆ ಭಯವಿಲ್ಲ: ಅಧ್ಯಕ್ಷ ನಳೀನ್ ಕುಮಾರ್ ಕಟೀಲು

ಕಾಂಗ್ರೆಸ್​ನಲ್ಲಿ ತಮ್ಮ ಅಸ್ತಿತ್ವ ಉಳಿಸ್ಕೋಬೇಕು. ಹೈಕಮಾಂಡ್​ಗೆ ತಮ್ಮ ಶಕ್ತಿ ತೋರಿಸಬೇಕು. ಮುಂದಿನ‌ ಮುಖ್ಯಮಂತ್ರಿ ನಾನೇ ಅಂತ ಘೋಷಣೆ ಮಾಡಬೇಕೆಂಬ ಒತ್ತಡವನ್ನು ಸಿದ್ದರಾಮಯ್ಯ ಸೃಷ್ಟಿಸುತ್ತಿದ್ದಾರೆ.

ನಾವು ಸಿದ್ದರಾಮೋತ್ಸವಕ್ಕೆ ಬೇಕಿದ್ದರೆ ಸಹಕಾರ ನೀಡುತ್ತೇವೆ, ಆದರೆ ನಮಗೆ ಭಯವಿಲ್ಲ: ಅಧ್ಯಕ್ಷ ನಳೀನ್ ಕುಮಾರ್ ಕಟೀಲು
ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Jul 07, 2022 | 3:35 PM

ಬೆಂಗಳೂರು: ನಾವು ಸಿದ್ದರಾಮೋತ್ಸವಕ್ಕೆ (Siddharamotsava) ಬೇಕಿದ್ದರೆ ಸಹಕಾರ ಕೊಡುತ್ತೇವೆ. ಆದರೆ ಸಿದ್ದರಾಮೋತ್ಸವದಿಂದ ನಮಗೆ ಯಾವುದೇ ಭಯ ಇಲ್ಲ ಎಂದು ನಗರದಲ್ಲಿ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿಕೆ ನೀಡಿದರು. ಇನ್ನೂ 4-5 ಲಕ್ಷ ಜನರನ್ನು ಬೇಕಿದ್ರೆ ಕಳುಹಿಸಿಕೊಡುತ್ತೇವೆ. ಆದರೆ ಸಿದ್ದರಾಮೋತ್ಸವದಿಂದ ಭಯ ಆಗುತ್ತಿರುವುದು ಡಿ.ಕೆ. ಶಿವಕುಮಾರಗೆ. ಇದನ್ನು ಶುರು ಮಾಡಿದ ನಂತರ ಡಿ.ಕೆ. ಶಿವಕುಮಾರ ನಿದ್ದೆ ಮಾಡುತ್ತಿಲ್ಲ. ಸಿದ್ದರಾಮಯ್ಯನವರು ಡಿ.ಕೆ.ಶಿವಕುಮಾರ್​​​ ನಿದ್ದೆ ಕೆಡಿಸಿದ್ದಾರೆ. ಮುಂದಿನ ಸಿಎಂ ಎಂದು ತೋರಿಸಿಕೊಳ್ಳಲು ಸಿದ್ದರಾಮಯ್ಯ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ತನ್ನ ಜೊತೆಗಿದ್ದವರನ್ನೆಲ್ಲ ಮುಗಿಸಿದ್ದಾರೆ. ಇದೀಗ ಡಿ.ಕೆ. ಶಿವಕುಮಾರ ಮುಗಿಸಲು ಈ ತಂತ್ರವನ್ನು ಹೆಣೆದಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಹೇಳಿದರು.

PSI ನೇಮಕಾತಿ ಹಗರಣದ ಕುರಿತು ಮಾತನಾಡಿದ್ದು, ತನಿಖೆ ಹಗ್ಗ ಕಾಂಗ್ರೆಸ್ ಕುತ್ತಿಗೆಯನ್ನೇ ಸುತ್ತಿಕೊಳ್ಳುತ್ತೆ. ಇದನ್ನು ಸಿದ್ದರಾಮಯ್ಯ ಅರಿತುಕೊಳ್ಳಬೇಕು. ಸಿಐಡಿ ತನಿಖೆ ಪೂರ್ಣಗೊಂಡ ಬಳಿಕ ಎಲ್ಲವೂ ಹೊರಬರುತ್ತದೆ. ಕಾಂಗ್ರೆಸ್​ನ ಯಾರೆಲ್ಲ ಭಾಗಿಯಾಗಿದ್ದಾರೆ ಅನ್ನೋದು ಗೊತ್ತಾಗುತ್ತೆ ಎಂದು ಹೇಳಿದರು. ಸಿಎಂ, ಗೃಹ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ ಅವಧಿಯಲ್ಲಿ ಹಗರಣಗಳ ರಾಶಿಯೇ ಬಿದ್ದಿತ್ತು. ಅಧಿಕಾರಕ್ಕೆ ಏರಿದ ಮರುದಿನವೇ ರಾಜೀನಾಮೆ ನೀಡಬೇಕಿತ್ತು. ಅಧಿಕಾರಿಗಳಾದ ಡಿ.ಕೆ.ರವಿ, ಗಣಪತಿ ಆತ್ಮಹತ್ಯೆಗೆ ಶರಣಾಗಿದ್ದರು. ಹಲವು ಡಿವೈಎಸ್​​ಪಿಗಳು ರಾಜೀನಾಮೆ ನೀಡಿದ್ದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಹಗರಣಗಳೇ ತುಂಬಿದ್ದವು. ಆಗ ಯಾರ ವಿರುದ್ಧವೂ ಸರ್ಕಾರ ಕ್ರಮಕೈಗೊಂಡಿಲ್ಲ. ಸಿದ್ದರಾಮಯ್ಯಗೆ ಸಿಎಂ ರಾಜೀನಾಮೆ ಕೇಳುವ ನೈತಿಕತೆಯಿಲ್ಲ ಎಂದು ಸಿದ್ದರಾಮಯ್ಯಗೆ ನಳಿನ್ ಕುಮಾರ್ ಕಟೀಲು ತಿರುಗೇಟು ನೀಡಿದರು.

ಇದನ್ನೂ ಓದಿ: Politics: ಕಾಂಗ್ರೆಸ್​ನಲ್ಲಿ ಸಿದ್ದರಾಮಯ್ಯ VS ಡಿಕೆಶಿ ಫೈಟ್; ಮತ್ತೆ ಮುನ್ನೆಲೆಗೆ ಬಂದ ಮೂಲ ಕಾಂಗ್ರೆಸ್ಸಿಗ, ವಲಸಿಗ ವಿಚಾರ

ಕಾಂಗ್ರೆಸ್​ನಲ್ಲಿ ತಮ್ಮ ಅಸ್ತಿತ್ವ ಉಳಿಸ್ಕೋಬೇಕು. ಹೈಕಮಾಂಡ್​ಗೆ ತಮ್ಮ ಶಕ್ತಿ ತೋರಿಸಬೇಕು. ಮುಂದಿನ‌ ಮುಖ್ಯಮಂತ್ರಿ ನಾನೇ ಅಂತ ಘೋಷಣೆ ಮಾಡಬೇಕೆಂಬ ಒತ್ತಡವನ್ನು ಸಿದ್ದರಾಮಯ್ಯ ಸೃಷ್ಟಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ ಮುಗಿಸೋದು ಸಿದ್ದರಾಮಯ್ಯ ತಂತ್ರ. ಈಗಾಗಲೇ ಜನತಾ ದಳವನ್ನು ಸಿದ್ದರಾಮಯ್ಯ ಮುಗಿಸಿದರು. ಕಾಂಗ್ರೆಸ್​ಗೆ ಬಂದು ನಿಜವಾದ ಕಾಂಗ್ರೆಸಿಗರನ್ನು ಹೊರಗಿಟ್ರು. ದಲಿತ ಸಿಎಂ ಆಗಬೇಕಾಗಿದ್ದ ಖರ್ಗೆಯವರನ್ನು ಹೊರಗಿಟ್ರು. ಪರಮೇಶ್ವರ್ ಅವರನ್ನು ಸೋಲಿಸಿದ್ರು. ಈಗ ಡಿಕೆಶಿ ಮುಗಿಸುವ ತಂತ್ರಗಾರಿಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ: ಎಸಿಬಿ ಎಡಿಜಿಪಿ ವಿರುದ್ಧ ನ್ಯಾ.ಹೆಚ್.ಪಿ.ಸಂದೇಶ್ ಟೀಕೆ ಹಿನ್ನೆಲೆ ಹೈಕೋರ್ಟ್ ಮೊರೆ ಹೋದ ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಸಿಂಗ್

5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ