AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajpet Idgah Maidan: ಗಣರಾಜ್ಯೋತ್ಸವದಂದು ಧ್ವಜ ಹಾರಿಸುತ್ತೇವೆ; ನಮ್ಮ ತಾಕತ್ತು ತೋರಿಸುತ್ತೇವೆ: ನಾಗರಿಕ ಒಕ್ಕೂಟ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವದ ದಿನ ತ್ರಿವರ್ಣ ಧ್ವಜ ಹಾರಿಸುತ್ತೇವೆ. ಸಭೆಯಲ್ಲಿ ಒಕ್ಕೂಟ ವತಿಯಿಂದ ಆಚರಿಸಬೇಕೆಂದು ಎಲ್ಲರ ಒಮ್ಮತ ದೊರೆತಿದೆ ಎಂದು ಒಕ್ಕೂಟದ ಅಧ್ಯಕ್ಷ ರಾಮೇಗೌಡ ಹೇಳಿದ್ದಾರೆ.

Chamarajpet Idgah Maidan: ಗಣರಾಜ್ಯೋತ್ಸವದಂದು ಧ್ವಜ ಹಾರಿಸುತ್ತೇವೆ; ನಮ್ಮ ತಾಕತ್ತು ತೋರಿಸುತ್ತೇವೆ: ನಾಗರಿಕ ಒಕ್ಕೂಟ
ಚಾಮರಾಜಪೇಟೆ ಈದ್ಗಾ ಮೈದಾನ
TV9 Web
| Edited By: ವಿವೇಕ ಬಿರಾದಾರ|

Updated on:Jan 22, 2023 | 12:54 PM

Share

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ (Chamarajpet Idgah Maidan) ಗಣರಾಜ್ಯೋತ್ಸವ (Republic Day)ಆಚರಣೆಗೆ ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ (Chamarajpet Nagarik Okkut) ಸರ್ಕಾರಕ್ಕೆ ನೀಡಿದ್ದ ಗಡುವು ಮುಗಿದೆ. ಈ ಸಂಬಂಧ ಒಕ್ಕೂಟ ಇಂದು (ಜ.22) ಸಭೆ ನಡೆಸಿತು. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ನಾಗರಿಕರ ಒಕ್ಕೂಟದ ಅಧ್ಯಕ್ಷ ರಾಮೇಗೌಡ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣರಾಜ್ಯೋತ್ಸವದ ದಿನ ತ್ರಿವರ್ಣ ಧ್ವಜ ಹಾರಿಸುತ್ತೇವೆ. ಸಭೆಯಲ್ಲಿ ಒಕ್ಕೂಟ ವತಿಯಿಂದ ಆಚರಿಸಬೇಕೆಂದು ಎಲ್ಲರ ಒಮ್ಮತ ಇದೆ ಎಂದು ತಿಳಿಸಿದರು.

ಸುಪ್ರೀಂಕೋರ್ಟ್ ಆದೇಶದಲ್ಲೇ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವ ಆಚರಣೆಗೆ ಅನುಮತಿ ಇದೆ. ಆದರೂ ಸರ್ಕಾರ ಇದುವರೆಗೆ ಯಾವುದೇ ನಿಲುವು ಪ್ರಕಟಿಸಿಲ್ಲ. ನಮ್ಮ ಒಕ್ಕೂಟದಿಂದಲೇ ತ್ರಿವರ್ಣ ಧ್ವಜ ಹಾರಿಸುತ್ತೇವೆ. ಜ.26ರಂದು ಶಾಂತಿಭಂಗ ಉಂಟಾದರೆ ಅದಕ್ಕೆ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ.

ಸಭೆ ಮಾಡಿ ರೂಪುರೇಷೆ ಬಗ್ಗೆ ಮಾಹಿತಿ ನೀಡಲಿದ್ದೇವೆ

ಮಂಗಳವಾರ ಸಭೆ ಮಾಡಿ ಗಣರಾಜ್ಯೋತ್ಸವದ ಆಚರಣೆಗೆ ರೂಪುರೇಷೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ತಿಳಿಸುತ್ತೇವೆ. ಜೈಲಿಗೆ ಹೋದ್ರೂ ಪರವಾಗಿಲ್ಲ, ಕೇಸ್ ಹಾಕಿದರೂ ಹೆದರೋದಿಲ್ಲ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸೇ ಹಾರಿಸೇ ಹಾರಿಸುತ್ತೇವೆ. ಸರ್ಕಾರ ಮೌನವಾಗಿದೆ, ಆದರೆ ನಾವು ಸುಮ್ಮನಿರೋದಿಲ್ಲ ಎಂದರು.

ತಾಕತ್ತಿದ್ದರೆ ಅನುಮತಿ ಕೊಡಿ, ಇಲ್ಲ ಅಂದರೇ ನಮ್ಮ ತಾಕತ್ ತೋರಿಸುತ್ತೇವೆ

ತಾಕತ್ತಿದ್ದರೆ ಅನುಮತಿ ಕೊಡಿ, ಇಲ್ಲ ಅಂದರೇ ನಮ್ಮ ತಾಕತ್ ತೋರಿಸುತ್ತೇವೆ. ಜ.26ರಂದು ಚಾಮರಾಜಪೇಟೆ ಹಿಂದೂಗಳು ಏನು ಅಂತ ತೋರಿಸುತ್ತೇವೆ ಎಂದು ಚಾಮರಾಜಪೇಟೆ ನಾಗರಿಕ ಒಕ್ಕೂಟ ಪ್ರಧಾನ ಕಾರ್ಯದರ್ಶಿ ರಾಜು ಹೇಳಿದ್ದಾರೆ. ಗಣೇಶ ಹಬ್ಬಕ್ಕೂ ಅನುಮತಿ ಕೊಟ್ಟಿಲ್ಲ, ಈಗಲೂ ಕೊಡದಿದ್ದರೆ ಸುಮ್ಮನಿರಲ್ಲ. ಜೈಲಿಗೆ ಹೋದರೂ ಪರವಾಗಿಲ್ಲ ಮೈದಾನದಲ್ಲಿ ಧ್ವಜಾರೋಹಣ ಮಾಡುತ್ತೇವೆ. ಅನುಮತಿ ನೀಡದ ಹಿಂದೆ ಕಾಂಗ್ರೆಸ್ ಶಾಸಕ ಜಮೀರ್ ಕೈವಾಡ ಇದ್ದರೂ ಇರಬಹುದು. ಅನುಮತಿ ಕೊಡದಿದ್ದರೆ ಚುನಾವಣೆಯಲ್ಲಿ ಚಾಮರಾಜಪೇಟೆಯ ಹಿಂದೂಗಳು ಏನು ಅಂತ ಗೊತ್ತಾಗುತ್ತೆ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:46 pm, Sun, 22 January 23

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ