AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾತಾವರಣ ವೈಪರೀತ್ಯ; ಹೆಚ್ಚಾದ ಡೆಂಗ್ಯೂ, ಇತರೆ ಸೋಂಕಿನ ಪ್ರಮಾಣ, ಇಲ್ಲಿದೆ ವೈದ್ಯರ ಸಲಹೆ

ಬೆಂಗಳೂರಿನಲ್ಲಿ ಮಳೆ, ಚಳಿ ಗಾಳಿ, ಹವಾಮಾನ ಬದಲಾವಣೆಯಿಂದಾಗಿ ಅನೇಕ ಸೋಂಕುಗಳು ಜನರಲ್ಲಿ ಕಂಡುಬರುತ್ತಿವೆ. ಡೆಂಗ್ಯೂ, ಗಂಟಲು ನೋವು, ಕಿವಿ ಸೋಂಕುಗಳ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ ವೈದ್ಯರು ಎಚ್ಚರಿಕೆಯಿಂದಿರಲು ಸೂಚಿಸಿದ್ದಾರೆ. ಹಾಘೂ ಅಗತ್ಯ ಕ್ರಮಗಳನ್ನು ಅನುಸರಿಸಲು ಕೆಲವು ಸಲಹೆಗಳನ್ನು ನೀಡಿದ್ದಾರೆ.

ವಾತಾವರಣ ವೈಪರೀತ್ಯ; ಹೆಚ್ಚಾದ ಡೆಂಗ್ಯೂ, ಇತರೆ ಸೋಂಕಿನ ಪ್ರಮಾಣ, ಇಲ್ಲಿದೆ ವೈದ್ಯರ ಸಲಹೆ
ಸಾಂದರ್ಭಿಕ ಚಿತ್ರ
Vinayak Hanamant Gurav
| Edited By: |

Updated on: Jun 02, 2024 | 8:35 AM

Share

ಬೆಂಗಳೂರು, ಜೂನ್.02; ದಿಢೀರನೇ ವಾತಾವರಣ ಏರಿಳಿತದಿಂದಾಗಿ ಹಾಗೂ ಮಳೆಗಾಲ ಆರಂಭ ಕಾಲ ಹಿನ್ನಲೆ ಆರೋಗ್ಯದಲ್ಲಿ ಹಲವಾರು ಸಮಸ್ಯೆಗಳು ಕಂಡು ಬರುತ್ತಿವೆ. ಗಂಟಲು ಹಾಗೂ ಕಿವಿ ಸೋಂಕು ಜೊತೆಗೆ ಡೆಂಗ್ಯೂ ಸಂಖ್ಯೆ ಪ್ರಕರಣಗಳು ಹೆಚ್ಚು ದಾಖಲಾಗುತ್ತಿದ್ದು, ಮಳೆಗಾಲಕ್ಕೆ ರೋಗಗಳು ಹರಡದಂತೆ ತಡೆಗಟ್ಟಲು ಸಲಹೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಗಂಟಲು ನೋವು ಜೊತೆಗೆ ಸೋಂಕು ರೋಗಿಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಇದಕ್ಕೆ ಕಾರಣ ಪ್ರಮುಖವಾಗಿ ವಾತಾವರಣದಲ್ಲಿ ಏರುಪೇರು. ಇನ್ನೂ ಮಳೆಯಿಂದಾಗಿ ರೋಗಗಳು ಹರಡುವ ಭೀತಿ ಜೊತೆಗೆ ಮುಂದಿನ ವಾರದಲ್ಲಿ ಮಳೆಗಾಲ ಆರಂಭ ಹಿನ್ನಲೆ ಆದಷ್ಟು ಮಳೆಯಲ್ಲಿ ನೆನೆಯುವುದರಿಂದ ದೂರವಿರುವಂತೆ ಹಾಗೂ ಡೆಂಗ್ಯೂ ಪ್ರಕರಣಗಳು‌ ಹೆಚ್ಚಿಗೆ ಆಗುತ್ತಿವೆ. ಹೀಗಾಗಿ‌ ಡೆಂಗ್ಯೂ ಲಕ್ಷಣಗಳು ಕಂಡು ಬಂದರೆ ವೈದ್ಯರನ್ನ ಸಂಪರ್ಕಿಸುವಂತೆ ಕೆ.ಸಿ.ಜನರಲ್ ಆಸ್ಪತ್ರೆ ವೈದ್ಯರು ಸಲಹೆ ನೀಡುತ್ತಿದ್ದಾರೆ.

ಇದನ್ನೂ ಓದಿ: Bengaluru: ಅಪಘಾತ ತಪ್ಪಿಸಲು ಬಿಎಂಟಿಸಿ ಬಸ್​ ಚಾಲಕರಿಗೆ ವಿಶೇಷ ತರಬೇತಿ

ಇನ್ನೂ ಮಳೆಗಾಲ ಸಂದರ್ಭದಲ್ಲಿ ಕುಡಿಯುವ ನೀರಿಗೆ ಮಳೆ ನೀರು ಕಲುಷಿತವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಕಾಯಿಸಿ ಆರಿಸಿದ ನೀರನ್ನು ಸೇವಿಸಬೇಕು. ಟೈರ್, ತೆಂಗಿನಕಾಯಿ ಚಿಪ್ಪು ಸೇರಿದಂತೆ ನಿಂತ ಮಳೆ‌ನೀರಲ್ಲಿ ಸೊಳ್ಳೆಗಳು ಮೊಟ್ಟೆ ಇಟ್ಟು ಲಾರ್ವಾ ಉತ್ಪತ್ತಿ ಆಗುತ್ತದೆ. ಹೀಗಾಗಿ ಡೆಂಗ್ಯೂ ಪ್ರಕರಣಗಳು ಕೂಡ ಹೆಚ್ಚಳ ಆಗುತ್ತಿರುವುದರಿಂದ ಸ್ವಚ್ಚತೆ ಕಡೆಗೆ ಗಮನ ಕೊಡಲು ಒತ್ತು ನೀಡಬೇಕೆನ್ನುತ್ತಿದ್ದು, ಮಳೆಯಿಂದ ಸಣ್ಣಪುಟ್ಟ ರೋಗ ಸಮಸ್ಯೆಯಾದರೆ ಮನೆಯಲ್ಲೆ ಚಿಕಿತ್ಸೆ ಪಡೆದುಕೊಳ್ಳುವುದಕ್ಕಿಂತ ವೈದ್ಯರನ್ನ ಸಂಪರ್ಕಿಸುವಂತೆ ವೈದ್ಯರು ಹೃಳುತ್ತಿದ್ದಾರೆ. ಅತ್ತ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳನ್ನ ನೋಡೊದಾದರೆ 2797 ಕೇಸ್ ಗಳಿದ್ದರೆ, ಈ ಪೈಕಿ ಬೆಂಗಳೂರಿನಲ್ಲಿ ಪಾಲಿಕೆ ವ್ಯಾಪ್ತಿಯಲ್ಲಿ 1002 ಪ್ರಕರಣಗಳು ದಾಖಲಾಗಿವೆ.

ಒಟ್ಟಿನಲ್ಲಿ ಮಾನ್ಸೂನ್ ಆರಂಭಕ್ಕೂ ಮುನ್ನ ಇವತ್ತಿನಿಂದ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಎಂಟ್ರಿ ಕೊಟ್ಟಿದ್ದು, ಮುಂದಿನ ದಿನಗಳಲ್ಲಿ ಡೆಂಗ್ಯೂ ಪ್ರಕರಣದಲ್ಲಿ ಹೆಚ್ಚಳವಾಗಲಿದೆ. ಹೀಗಾಗಿ ಮಳೆಗಾಲ ಸಂದರ್ಭದಲ್ಲಿ ಆದಷ್ಟು ಆರೋಗ್ಯ ಬಗ್ಗೆ ಜಾಗೃತರಾಗಿರುವುದು ಉತ್ತಮ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಹೊರಗೆ ಬಂದಮೇಲೆ ಬಿಗ್ ಬಾಸ್ ಬಗ್ಗೆ ವಿಡಿಯೋ ಮಾಡಲು ನಿರ್ಧರಿಸಿದ ರಘು
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಆರ್​ಸಿಬಿ ಪರ ಚೊಚ್ಚಲ ವಿಕೆಟ್ ಉರುಳಿಸಿದ ಲಾರೆನ್ ಬೆಲ್
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಹಿಮಾಚಲ ಪ್ರದೇಶದಲ್ಲಿ ಭಾರೀ ಬಸ್ ಅಪಘಾತ; 9 ಜನ ಸಾವು, 40 ಮಂದಿಗೆ ಗಾಯ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ