AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘಟಕ ಪರೀಕ್ಷೆಗಳಿಗೂ ವೆಬ್ ಕಾಸ್ಟಿಂಗ್ ಅಸ್ತ್ರ ಪ್ರಯೋಗ; ಸರ್ಕಾರಿ ಶಾಲಾ ಶಿಕ್ಷಕರ ಪರದಾಟಕ್ಕೆ ಕಾರಣಾಯ್ತು ಇಲಾಖೆ ನಡೆ

ಶಿಕ್ಷಣ ಇಲಾಖೆ ಕಳೆದ ವರ್ಷ ಎಸ್ಎಸ್ಎಲ್​ಸಿ ಮುಖ್ಯ ಪರೀಕ್ಷೆಯ ಅಕ್ರಮಕ್ಕೆ ಬ್ರೇಕ್ ಹಾಕಲು ವೆಬ್ ಕಾಸ್ಟಿಂಗ್ ಅಸ್ತ್ರ ಪ್ರಯೋಗಿಸಿತ್ತು. ಇದರಿಂದ ಕಳೆದ ವರ್ಷದ ಎಸ್ಎಸ್ಎಲ್​ಸಿ ಫಲಿತಾಂಶ ಪಾತಳಕ್ಕೆ ಕುಸಿತ ಕಂಡು ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಇದರಿಂದಲೂ ಬುದ್ದಿ ಕಲಿಯದ ಶಾಲಾ ಶಿಕ್ಷಣ ಇಲಾಖೆ ಈಗ ಮತ್ತೊಂದು ಎಡವಟ್ಟು ಮಾಡಲು ಮುಂದಾಗಿದೆ.

ಘಟಕ ಪರೀಕ್ಷೆಗಳಿಗೂ ವೆಬ್ ಕಾಸ್ಟಿಂಗ್ ಅಸ್ತ್ರ ಪ್ರಯೋಗ; ಸರ್ಕಾರಿ ಶಾಲಾ ಶಿಕ್ಷಕರ ಪರದಾಟಕ್ಕೆ ಕಾರಣಾಯ್ತು ಇಲಾಖೆ ನಡೆ
ಸಾಂದರ್ಭಿಕ ಚಿತ್ರ
Vinay Kashappanavar
| Edited By: ಆಯೇಷಾ ಬಾನು|

Updated on: Sep 11, 2024 | 9:04 AM

Share

ಬೆಂಗಳೂರು, ಸೆ.11: ಕಳೆದ ವರ್ಷ 10ನೇ ತರಗತಿ ಫಲಿತಾಂಶ ನೋಡಿ ಇಡೀ ರಾಜ್ಯ ಶಾಕ್ ಆಗಿತ್ತು. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿಗಳ ಮೂಲಕ ಶಿಕ್ಷಣ ಇಲಾಖೆ ವೆಬ್ ಕಾಸ್ಟಿಂಗ್ (Webcasting) ಮಾಡಿದ ಹಿನ್ನಲೆ ಪರೀಕ್ಷಾ ಕೊಠಡಿಗಳ ದೃಶ್ಯಾವಳಿಗಳನ್ನ ಮೇಲ್ವಿಚಾರಣೆ ಮಾಡಲು ಎಲ್ಲ ಜಿಲ್ಲೆಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಲಾಗಿತ್ತು. ಇದರಿಂದ ರಾಜ್ಯದಲ್ಲಿ ಶಿಕ್ಷಣ ಮಟ್ಟ ಕುಸಿದಿದೆ ಅನ್ನೋ ಟೀಕೆಗಳೂ ಕೇಳಿ ಬಂದಿದ್ವು. ಎಸ್ಎಸ್ಎಲ್ ಸಿ ಸ್ಟೂಡೆಂಟ್ಸ್​​ಗೆ ವೆಬ್ ಕಾಸ್ಟಿಂಗ್ ಮಾಡಿ ಶಿಕ್ಷಣ ಇಲಾಖೆ (Education Department) ಛೀಮಾರಿ ಹಾಕಿಸಿಕೊಂಡಿತ್ತು. ಇದರಿಂದ ಬುದ್ದಿ ಕಲಿಯದ ಇಲಾಖೆ ಈಗ ಮತ್ತೆ ಅದೇ ಎಡವಟ್ಟು ಮಾಡಲು ಮುಂದಾಗಿದೆ. ಮತ್ತೆ ಈಗ ಶಾಲಾ ಶಿಕ್ಷಣ ಇಲಾಖೆ ಎಸ್ಎಸ್ಎಲ್ ಸಿ (SSLC) ಎಲ್ಲ ಘಟಕ ಪರೀಕ್ಷೆಗಳಿಗೂ ವೆಬ್ ಕಾಸ್ಟಿಂಗ್​ಗೆ ಮುಂದಾಗಿದೆ. ಇದು ಸರ್ಕಾರಿ ಶಾಲಾ ಶಿಕ್ಷಕರ ಪರದಾಟಕ್ಕೆ ಕಾರಣವಾಗಿದೆ.

ಪ್ರಸಕ್ತ ವರ್ಷದಲ್ಲಿ ಶಾಲಾ ಶಿಕ್ಷಣ ಇಲಾಖೆ ಎಲ್ಲ ಪರೀಕ್ಷೆ ಹಾಗೂ ಘಟಕ ಪರೀಕ್ಷೆಗಳಿಗೆ ವೆಬ್ ಕಾಸ್ಟಿಂಗ್ ಮಾಡುವಂತೆ ಸೂಚಿಸಿದೆ. ಆದರೆ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶೇ 50% ಶಾಲೆಗಳಲ್ಲಿ ವೆಬ್ ಕಾಸ್ಟಿಂಗ್ ಇಲ್ಲ. ವೆಬ್ ಕಾಸ್ಟಿಂಗ್ ಅಳವಡಿಕೆಗೆ ಸರ್ಕಾರದಿಂದ ಯಾವುದೇ ಅನುದಾನವನ್ನು ನೀಡಿಲ್ಲ. ಯಾವುದೇ ಅನುದಾನ ನೀಡದೆ ಹೇಗೆ ವೆಬ್ ಕಾಸ್ಟಿಂಗ್ ಅಳವಡಿಕೆ ಮಾಡಿಕೊಳ್ಳುವುದು ಅಂತಾ ಶಾಲಾ ಶಿಕ್ಷಕರು ಪರದಾಡುತ್ತಿದ್ದಾರೆ. ಈ ನಡುವೆ ಇಲಾಖೆ ಎಲ್ಲ ಘಟಕ ಪರೀಕ್ಷೆಗಳಿಗೂ ವೆಬ್ ಕಾಸ್ಟಿಂಗ್ ರೂಲ್ಸ್ ಜಾರಿಮಾಡಿದೆ. ವೆಬ್ ಕಾಸ್ಟಿಂಗ್ ಇಲ್ಲದ ಶಾಲೆಗಳು ಪಕ್ಕದ ಶಾಲೆಗೆ ಹೋಗಿ ಪರೀಕ್ಷೆ ಬರೆಸುವಂತೆ ಸೂಚನೆ ನೀಡಿರುವ ಇಲಾಖೆ ನಡೆ ಈಗ ಸರ್ಕರಿ ಶಾಲಾ ಶಿಕ್ಷಕರ ವಿರೋಧಕ್ಕೆ ಕಾರಣವಾಗಿದೆ. ವೆಬ್ ಕಾಸ್ಟಿಂಗ್ ವ್ಯವಸ್ಥೆ ಇಲ್ಲದ ಶಾಲೆಗಳು ಹತ್ತಾರೂ ಕಿಲೋ ಮೀಟರ್ ದೂರದವರೆಗೆ ಶಾಲಾ ಮಕ್ಕಳನ್ನ ಕರೆದುಕೊಂಡು ಹೋಗಿ ಪರೀಕ್ಷೆ ನಡೆಸುವುದು ಹೇಗೆ ಅಂತಾ ಶಿಕ್ಷಕರಿಂದ ವಿರೋಧ ಕೇಳಿ ಬರ್ತಿದೆ.

ಇದನ್ನೂ ಓದಿ: ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಪಾಲರಿಲ್ಲದೆಯೇ ನಡೆದ ಬೆಂಗಳೂರು ವಿಶ್ವವಿದ್ಯಾಲಯ ಘಟಿಕೋತ್ಸವ ಕಾರ್ಯಕ್ರಮ

ಏನಿದು ವೆಬ್ ಕಾಸ್ಟಿಂಗ್?

ಎಸ್ಎಸ್ಎಲ್​ಸಿ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರಕ್ಕೆ ಸಿಸಿಟಿವಿ ಫಿಕ್ಸ್ ಮಾಡಿ ವೆಬ್‌ಕಾಸ್ಟಿಂಗ್ ಮೂಲಕ ನೇರವಾಗಿ ಪರೀಕ್ಷಾ ಕೊಠಡಿಯಿಂದ ಲೈವ್ ವಿಷ್ಯೂಯಲ್‌ಗಳು ಕಮಾಂಡ್ ರೂಂನಲ್ಲಿ ವೀಕ್ಷಿಸುವ ವ್ಯವಸ್ಥೆಯಾಗಿದೆ. ಇದರ ಸಹಾಯದಿಂದ ಶಿಕ್ಷಕರು ಹಾಗೂ ಅಭ್ಯರ್ಥಿಗಳ ಚಲನವಲನಗಳನ್ನ ಒಮ್ಮೆಲೇ ವೀಕ್ಷಿಸಬಹುದಾಗಿದೆ. ಸಾಮೂಹಿಕ ಅಕ್ರಮ ತಡೆಯುವ ವ್ಯವಸ್ಥೆಯಾಗಿದೆ.

ಒಟ್ನಲ್ಲಿ ಸಾಮೂಹಿಕ ನಕಲು ತಡೆಯಲು ಶಿಕ್ಷಣ ಇಲಾಖೆ ವೆಬ್ ಕಾಸ್ಟಿಂಗ್ ಮೊರೆ ಹೋಗಿದೆ. ಫಲಿತಾಂಶದ ಪ್ರತಿಷ್ಠೆಯ ಬೆನ್ನು ಹತ್ತದೆ ಅಕ್ರಮ ತಡೆಯುವ ವಸ್ತುನಿಷ್ಠ ಪರೀಕ್ಷೆಗೆ ಇಲಾಖೆ ಮುಂದಾಗಿದೆ. ಆದ್ರೆ ಪೂರ್ವ ಸಿದ್ಧತೆ ಇಲ್ಲದೆ ವೆಬ್ ಕಾಸ್ಟಿಂಗ್ ವ್ಯವಸ್ಥೆಗೆ ಬೇಕಾದ ಅನಕೂಲ ಕಲ್ಪಿಸದೆ ವೆಬ್ ಕಾಸ್ಟಿಂಗ್ ರೂಲ್ಸ್ ಜಾರಿ ಮಾಡಿರುವುದು ಈಗ ವಿರೋಧಕ್ಕೆ ಕಾರಣವಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು