AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ, ಗೌರಿ-ಗಣೇಶ ಹಬ್ಬ ರಜೆ: ಖಾಸಗಿ ಬಸ್​ ಮಾಲೀಕರಿಂದ ದುಪ್ಪಟ್ಟು ಹಣ ವಸೂಲಿ

ವಾರಾಂತ್ಯ ಮತ್ತು ಗೌರಿ-ಗಣೇಶ ಹಬ್ಬದ ರಜಾ ನಿಮಿತ್ತ ಊರಿಗೆ ಹೋಗುವ ಪ್ರಯಾಣಿಕರಿಗೆ ಖಾಸಗಿ ಬಸ್‌ಗಳ ಮಾಲೀಕರು ಶಾಕ್​ ನೀಡಿದ್ದಾರೆ. ಪ್ರಯಾಣದ ದರ ದ್ವಿಗುಣಗೊಂಡಿದೆ. ವಾರಾಂತ್ಯದ ರಜೆ ಮತ್ತು ಹಬ್ಬದ ಸಮಯದಲ್ಲಿ ಖಾಸಗಿ ಬಸ್‌ ಮಾಲೀಕರು ದರ ಏರಿಕೆ ಮಾಡಿದ್ದಾರೆ. ಬೆಂಗಳೂರಿನಿಂದ ವಿವಿಧ ಊರುಗಳಿಗೆ ಪ್ರಯಾಣದ ದರ ಎಷ್ಟು ಏರಿಕೆಯಾಗಿದೆ ಇಲ್ಲಿದೆ ವಿವರ.

ವಾರಾಂತ್ಯ, ಗೌರಿ-ಗಣೇಶ ಹಬ್ಬ ರಜೆ: ಖಾಸಗಿ ಬಸ್​ ಮಾಲೀಕರಿಂದ ದುಪ್ಪಟ್ಟು ಹಣ ವಸೂಲಿ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Aug 22, 2025 | 3:57 PM

Share

ಬೆಂಗಳೂರು, ಆಗಸ್ಟ್​ 22: ವಾರಾಂತ್ಯದ ರಜೆ ಮತ್ತು ಗೌರಿ- ಗಣೇಶ ಹಬ್ಬ (Gauri-Ganesha Festival) ಅಂತ ಬೆಂಗಳೂರಿನಿಂದ (Bengaluru) ಅನೇಕ ಜನರು ತಮ್ಮ ಊರಿಗೆ ಹೋಗಲು ಸಜ್ಜಾಗಿದ್ದಾರೆ. ಇದನ್ನೇ, ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್​ ಮಾಲೀಕರು ಪ್ರಯಾಣದ ದರವನ್ನು ದುಪಟ್ಟು ಮಾಡಿದ್ದಾರೆ. ನಾಳೆ ನಾಲ್ಕನೇ ಶನಿವಾರ ರಜೆ, ಭಾನುವಾರ ರಜೆ ಸೋಮವಾರ ಒಂದು ದಿನ ರಜೆ ತೆಗೆದುಕೊಂಡರೆ ಮಂಗಳವಾರ ಗೌರಿ ಹಬ್ಬ, ಬುಧವಾರ ಗಣೇಶ ಹಬ್ಬ ಒಟ್ಟು ಐದು ದಿನಗಳ ರಜೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಉದ್ಯೋಗಿಗಳು ಈಗಾಗಲೇ ತಮ್ಮ ಕಚೇರಿಗಳಿಗೆ ರಜೆ ಹಾಕಿದ್ದಾರೆ. ಇದನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು, ಟಿಕೆಟ್​ ದರ ದುಪ್ಪಟ್ಟು ಮಾಡಿದ್ದಾರೆ.

ಸಾಮಾನ್ಯ ದಿನದ ದರ ಮತ್ತು ಹಬ್ಬದ ದರ

ಬೆಂಗಳೂರು-ಧರ್ಮಸ್ಥಳ

  • ಪ್ರಸ್ತುತ ದರ: 600-1100 ರೂ.
  • ರಜಾ ದಿನದ ದರ: 1499-2600 ರೂ.

ಬೆಂಗಳೂರು-ಮೈಸೂರು

  • ಪ್ರಸ್ತುತ ದರ: 199-2000 ರೂ.
  • ರಜಾ ದಿನದ ದರ: 300-5000 ರೂ.

ಬೆಂಗಳೂರು-ಕೊಡಗು

  • ಪ್ರಸ್ತುತ ದರ: 494-849 ರೂ.
  • ರಜಾ ದಿನದ ದರ: 680-5000 ರೂ.

ಬೆಂಗಳೂರು-ಚಿಕ್ಕಮಗಳೂರು

  • ಪ್ರಸ್ತುತ ದರ: 575-800 ರೂ.
  • ರಜಾ ದಿನದ ದರ: 950-1600 ರೂ.

ಬೆಂಗಳೂರು-ಮಂಗಳೂರು

  • ಪ್ರಸ್ತುತ ದರ: 349-2750 ರೂ.
  • ರಜಾ ದಿನದ ದರ: 1019-3000 ರೂ.

ಬೆಂಗಳೂರು-ಧಾರವಾಡ

  • ಪ್ರಸ್ತುತ ದರ: 684-3600 ರೂ.
  • ರಜಾ ದಿನ ದರ: 1000-5000 ರೂ.

ಬೆಂಗಳೂರು-ಹುಬ್ಬಳ್ಳಿ

  • ಪ್ರಸ್ತುತ ದರ: 609-1800 ರೂ.
  • ರಜಾ ದಿನ ದರ: 1200-9999 ರೂ.

ಬೆಂಗಳೂರು- ಕಾರವಾರ

  • ಪ್ರಸ್ತುತ ದರ: 740-1600 ರೂ.
  • ರಜಾ ದಿನ ದರ: 1500-3499 ರೂ.

ಬೆಂಗಳೂರು-ಕಲಬುರಗಿ

  • ಪ್ರಸ್ತುತ ದರ: 570-1300 ರೂ.
  • ರಜಾ ದಿನ ದರ: 950-2200 ರೂ.

ಬೆಂಗಳೂರು-ಶಿವಮೊಗ್ಗ

  • ಪ್ರಸ್ತುತ ದರ: 375-1199 ರೂ.
  • ರಜಾ ದಿನದ ದರ: 799-2100 ರೂ.

ಇದನ್ನೂ ಓದಿ: ಪಿಒಪಿ ಗಣೇಶ ತಯಾರಿ, ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್

ಖಾಸಗಿ ಬಸ್​ಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದರಿಂದ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಊರುಗಳಿಗೆ ತೆರಳುವ ದಾವಂತದಲ್ಲಿರುವವರು ಟಿಕೆಟ್​ ದರ ಕೇಳಿ ದಂಗಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Fri, 22 August 25

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ