AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಾಂತ್ಯ, ಗೌರಿ-ಗಣೇಶ ಹಬ್ಬ ರಜೆ: ಖಾಸಗಿ ಬಸ್​ ಮಾಲೀಕರಿಂದ ದುಪ್ಪಟ್ಟು ಹಣ ವಸೂಲಿ

ವಾರಾಂತ್ಯ ಮತ್ತು ಗೌರಿ-ಗಣೇಶ ಹಬ್ಬದ ರಜಾ ನಿಮಿತ್ತ ಊರಿಗೆ ಹೋಗುವ ಪ್ರಯಾಣಿಕರಿಗೆ ಖಾಸಗಿ ಬಸ್‌ಗಳ ಮಾಲೀಕರು ಶಾಕ್​ ನೀಡಿದ್ದಾರೆ. ಪ್ರಯಾಣದ ದರ ದ್ವಿಗುಣಗೊಂಡಿದೆ. ವಾರಾಂತ್ಯದ ರಜೆ ಮತ್ತು ಹಬ್ಬದ ಸಮಯದಲ್ಲಿ ಖಾಸಗಿ ಬಸ್‌ ಮಾಲೀಕರು ದರ ಏರಿಕೆ ಮಾಡಿದ್ದಾರೆ. ಬೆಂಗಳೂರಿನಿಂದ ವಿವಿಧ ಊರುಗಳಿಗೆ ಪ್ರಯಾಣದ ದರ ಎಷ್ಟು ಏರಿಕೆಯಾಗಿದೆ ಇಲ್ಲಿದೆ ವಿವರ.

ವಾರಾಂತ್ಯ, ಗೌರಿ-ಗಣೇಶ ಹಬ್ಬ ರಜೆ: ಖಾಸಗಿ ಬಸ್​ ಮಾಲೀಕರಿಂದ ದುಪ್ಪಟ್ಟು ಹಣ ವಸೂಲಿ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Aug 22, 2025 | 3:57 PM

Share

ಬೆಂಗಳೂರು, ಆಗಸ್ಟ್​ 22: ವಾರಾಂತ್ಯದ ರಜೆ ಮತ್ತು ಗೌರಿ- ಗಣೇಶ ಹಬ್ಬ (Gauri-Ganesha Festival) ಅಂತ ಬೆಂಗಳೂರಿನಿಂದ (Bengaluru) ಅನೇಕ ಜನರು ತಮ್ಮ ಊರಿಗೆ ಹೋಗಲು ಸಜ್ಜಾಗಿದ್ದಾರೆ. ಇದನ್ನೇ, ಬಂಡವಾಳ ಮಾಡಿಕೊಂಡಿರುವ ಕೆಲ ಖಾಸಗಿ ಬಸ್​ ಮಾಲೀಕರು ಪ್ರಯಾಣದ ದರವನ್ನು ದುಪಟ್ಟು ಮಾಡಿದ್ದಾರೆ. ನಾಳೆ ನಾಲ್ಕನೇ ಶನಿವಾರ ರಜೆ, ಭಾನುವಾರ ರಜೆ ಸೋಮವಾರ ಒಂದು ದಿನ ರಜೆ ತೆಗೆದುಕೊಂಡರೆ ಮಂಗಳವಾರ ಗೌರಿ ಹಬ್ಬ, ಬುಧವಾರ ಗಣೇಶ ಹಬ್ಬ ಒಟ್ಟು ಐದು ದಿನಗಳ ರಜೆ ಸಿಗಲಿದೆ. ಈ ಹಿನ್ನೆಲೆಯಲ್ಲಿ ಸಾಕಷ್ಟು ಉದ್ಯೋಗಿಗಳು ಈಗಾಗಲೇ ತಮ್ಮ ಕಚೇರಿಗಳಿಗೆ ರಜೆ ಹಾಕಿದ್ದಾರೆ. ಇದನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್ ಮಾಲೀಕರು, ಟಿಕೆಟ್​ ದರ ದುಪ್ಪಟ್ಟು ಮಾಡಿದ್ದಾರೆ.

ಸಾಮಾನ್ಯ ದಿನದ ದರ ಮತ್ತು ಹಬ್ಬದ ದರ

ಬೆಂಗಳೂರು-ಧರ್ಮಸ್ಥಳ

  • ಪ್ರಸ್ತುತ ದರ: 600-1100 ರೂ.
  • ರಜಾ ದಿನದ ದರ: 1499-2600 ರೂ.

ಬೆಂಗಳೂರು-ಮೈಸೂರು

  • ಪ್ರಸ್ತುತ ದರ: 199-2000 ರೂ.
  • ರಜಾ ದಿನದ ದರ: 300-5000 ರೂ.

ಬೆಂಗಳೂರು-ಕೊಡಗು

  • ಪ್ರಸ್ತುತ ದರ: 494-849 ರೂ.
  • ರಜಾ ದಿನದ ದರ: 680-5000 ರೂ.

ಬೆಂಗಳೂರು-ಚಿಕ್ಕಮಗಳೂರು

  • ಪ್ರಸ್ತುತ ದರ: 575-800 ರೂ.
  • ರಜಾ ದಿನದ ದರ: 950-1600 ರೂ.

ಬೆಂಗಳೂರು-ಮಂಗಳೂರು

  • ಪ್ರಸ್ತುತ ದರ: 349-2750 ರೂ.
  • ರಜಾ ದಿನದ ದರ: 1019-3000 ರೂ.

ಬೆಂಗಳೂರು-ಧಾರವಾಡ

  • ಪ್ರಸ್ತುತ ದರ: 684-3600 ರೂ.
  • ರಜಾ ದಿನ ದರ: 1000-5000 ರೂ.

ಬೆಂಗಳೂರು-ಹುಬ್ಬಳ್ಳಿ

  • ಪ್ರಸ್ತುತ ದರ: 609-1800 ರೂ.
  • ರಜಾ ದಿನ ದರ: 1200-9999 ರೂ.

ಬೆಂಗಳೂರು- ಕಾರವಾರ

  • ಪ್ರಸ್ತುತ ದರ: 740-1600 ರೂ.
  • ರಜಾ ದಿನ ದರ: 1500-3499 ರೂ.

ಬೆಂಗಳೂರು-ಕಲಬುರಗಿ

  • ಪ್ರಸ್ತುತ ದರ: 570-1300 ರೂ.
  • ರಜಾ ದಿನ ದರ: 950-2200 ರೂ.

ಬೆಂಗಳೂರು-ಶಿವಮೊಗ್ಗ

  • ಪ್ರಸ್ತುತ ದರ: 375-1199 ರೂ.
  • ರಜಾ ದಿನದ ದರ: 799-2100 ರೂ.

ಇದನ್ನೂ ಓದಿ: ಪಿಒಪಿ ಗಣೇಶ ತಯಾರಿ, ಮಾರಾಟ ಮಾಡಿದ್ರೆ ಕ್ರಿಮಿನಲ್ ಕೇಸ್

ಖಾಸಗಿ ಬಸ್​ಗಳು ದುಪ್ಪಟ್ಟು ಹಣ ವಸೂಲಿ ಮಾಡುತ್ತಿರುವುದರಿಂದ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಊರುಗಳಿಗೆ ತೆರಳುವ ದಾವಂತದಲ್ಲಿರುವವರು ಟಿಕೆಟ್​ ದರ ಕೇಳಿ ದಂಗಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:57 pm, Fri, 22 August 25

Follow Us
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಬ್ರಿಕ್ಸ್ ಶೃಂಗಸಭೆಗೂ ಮುನ್ನ ಚೀನಾ ಸಚಿವರ ಜೊತೆ ಅಜಿತ್ ದೋವಲ್ ಮಾತುಕತೆ
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
ಅಮೆರಿಕಕ್ಕೆ ತೆರಳಿದ ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
‘ಟಾಕ್ಸಿಕ್’ ಸಿನಿಮಾದ ಸ್ವಾಗತಕ್ಕೆ ಸಿಂಗಾರಗೊಂಡ ಗಾಂಧಿನಗರ; ವಿಡಿಯೋ ನೋಡಿ..
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
1 ಲಕ್ಷ ರೂ. ಬಾಡಿಗೆ, 10 ಸಾವಿರ ರೂ. ಮುಂಗಡಕ್ಕೆ ಜಿಬಿಎ ಆಜ್ಞೆ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಬೆಂಗಳೂರಿನ ಅವೆನ್ಯೂ ರಸ್ತೆಯಲ್ಲಿ ಫುಟ್‌ಪಾತ್ ತೆರವು ಅಭಿಯಾನ
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
ಒಳ್ಳೆ ಪತಿಯಾಗುವುದು ಹೇಗೆ? ಚಿಕ್ಕಣ್ಣನಿಗೆ ಪಾಠ ಹೇಳಿದ್ದಾರಂತೆ ಯಶ್
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
‘ಮದುವೆಗೆ ದರ್ಶನ್ ಅವರನ್ನು ಕರೆಯೋಕೆ ಆಗಲ್ಲ’: ಕಾರಣ ತಿಳಿಸಿದ ಚಿಕ್ಕಣ್ಣ
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
ಕರ್ನಾಟಕದಲ್ಲಿ ಕೆಜಿ ಈರುಳ್ಳಿ ದರ ಶೀಘ್ರವೇ 100 ರೂಪಾಯಿ?
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಕೇಸ್​ಗೆ ಟ್ವಿಸ್ಟ್
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ
ಬಾಗಲಕೋಟೆ ಶ್ರೀ ಬನಶಂಕರಿ ದೇವಾಲಯದ ಮಹತ್ವ ಮತ್ತು ಐತಿಹಾಸಿಕ ಹಿನ್ನೆಲೆ