Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ, ಕನ್ನಡಿಗರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಇನ್ಸ್ಟಾಗ್ರಾಮ್​ ಪೋಸ್ಟ್​ ವೈರಲ್​

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಪಶ್ಚಿಮ ಬಂಗಾಳ ಯುವಕ ನಿಲಯ್ ಮಂಡಲ್ ಇನ್ಸ್ಟಾಗ್ರಾಮ್​​ನಲ್ಲಿ ಕರ್ನಾಟಕ, ಕನ್ನಡಿಗರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾನೆ.

ಕರ್ನಾಟಕ, ಕನ್ನಡಿಗರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ: ಇನ್ಸ್ಟಾಗ್ರಾಮ್​ ಪೋಸ್ಟ್​ ವೈರಲ್​
ಆರೋಪಿಯ ಪೋಸ್ಟ್​
Follow us
TV9 Web
| Updated By: ವಿವೇಕ ಬಿರಾದಾರ

Updated on: Oct 01, 2023 | 10:51 AM

ಬೆಂಗಳೂರು ಅ.01: ವಿವಿಧ ರಾಜ್ಯ ಮತ್ತು ದೇಶಗಳಿಂದ ವಿದ್ಯಾಭ್ಯಾಸ ಅಥವಾ ಕೆಲಸಕ್ಕಾ ರಾಜಧಾನಿ ಬೆಂಗಳೂರಿಗೆ (Bengaluru) ಬಂದು ನೆಲಸುತ್ತಾರೆ. ಇಲ್ಲಿದ್ದು, ವರ್ಷಗಳೇ ಕಳೆದರೂ ಕನ್ನಡ ಕಲಿಯದೇ “ಕನ್ನಡ ಗೊತ್ತಿಲ್ಲ” ಎನ್ನುವರು. ಇದಷ್ಟೇ ಅಲ್ಲದೇ ಈ ಮಣ್ಣಿನ ಆಹಾರ, ನೀರು ಸೇವಿಸಿ ಉಂಡ ಮನೆಗೆ ಎರಡು ಬಗೆ ಎಂಬ ಮಾತಿನಂತೆ ಕನ್ನಡಿಗರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಾರೆ. ಇದೇ ರೀತಿಯಾಗಿ ಪಶ್ಚಿಮ ಬಂಗಾಳ (West Bengal) ಯುವಕ ನಿಲಯ್ ಮಂಡಲ್ ಕನ್ನಡ ಮತ್ತು ಕನ್ನಡಿಗರ ಬಗ್ಗೆ ಬಹಳ ತುಚ್ಛವಾದ ಶಬ್ಧಗಳನ್ನು ಬಳಸಿ ಸಾಮಾಜಿಕ ಜಾಲತಾಣದಲ್ಲಿ (Socail Media) ಬರೆದುಕೊಂಡಿದ್ದಾನೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಇನ್ಸ್ಟಾಗ್ರಾಮ್​​ನಲ್ಲಿ ಕರ್ನಾಟಕ, ಕನ್ನಡಿಗರಿಗೆ ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾನೆ. ಈತನ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್ ಠಾಣೆ ಪೊಲೀಸರು ಸ್ವಯಂ ದೂರು ದಾಖಲಿಸಿಕೊಂಡಿದ್ದಾರೆ. ಆರೋಪಿ ಪತ್ತೆಗೆ ಕೊಡಿಗೆಹಳ್ಳಿ ಪೊಲೀಸರು ಮುಂದಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಒಂಟಿಯಾಗಿ ಓಡಾಡುವ ಯುವತಿಯರನ್ನೇ ಟಾರ್ಗೆಟ್​ ಮಾಡಿ ಖಾಸಗಿ ಅಂಗ ಮುಟ್ಟಿ ಅಸಭ್ಯ ವರ್ತನೆ, ಕಾಮುಕ ಅರೆಸ್ಟ್

ನಿಲಯ್ ಮಂಡಲ್ ಪೋಸ್ಟ್​​ನಲ್ಲಿ ಏನಿದೆ?

ಬೆಂಗಳೂರು ಇಲ್ಲದೆ ಕರ್ನಾಟಕ ಏನೂ ಅಲ್ಲ. ನೀವು ಕರ್ನಾಟಕದ ಜನತೆ ಅವಿದ್ಯಾವಂತರು. ಅದಕ್ಕಾಗಿಯೇ ಜನರು ಬಂದು ನಿಮ್ಮ ತಾಯಿಯನ್ನು ಹಾಳು ಮಾಡುತ್ತಾರೆ. ಕರ್ನಾಟಕದ ಜನರು ಅವಿದ್ಯಾವಂತರು ಮತ್ತು ನನ್ನ ಸ್ನಾನಗೃಹವನ್ನು ಸ್ವಚ್ಛಗೊಳಿಸುವವರು. ನಾವು ಉತ್ತರ ಭಾರತೀಯರು, ಅದರಲ್ಲೂ ಬಂಗಾಳಿಗಳು ನಿಮ್ಮನ್ನು ಅಭಿವೃದ್ಧಿಪಡಿಸಲು ಇಲ್ಲಿಗೆ ಬರುತ್ತೇವೆ. ನಿಮ್ಮನ್ನು ಬಿಟ್ಟರೆ ಕನ್ನಡ ಮಾತನಾಡುವ ತಾಯಂದಿರು ಅರಣ್ಯವಾಸಿಗಳಾಗುತ್ತಾರೆ. ನೀವು ಕನ್ನಡ, ಕರ್ನಾಟಕ, ಬೆಂಗಳೂರು ಜನರು ಬಾತ್ರೂಮ್ ಸ್ವಚ್ಛಗೊಳಿಸಲು ಲಾಯಕರ. ಮತ್ತು ಯಾರೂ ನಿಮ್ಮ ಭಾಷೆಯನ್ನು ಕಲಿಯುವುದಿಲ್ಲ, ಇದು ಅತ್ಯಂತ ಕೆಟ್ಟ ಭಾಷೆಯಾಗಿದೆ. ಭಾರತದ ಅತ್ಯಂತ ಅನುಪಯುಕ್ತ ರಾಜ್ಯ ಕರ್ನಾಟಕ ಎಂದು ನಿಂದಿಸಿದ್ದಾನೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ