AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರಾಫಿಕ್ ಜಾಮ್​ ಉಂಟಾಗಲು ಕಾರಣಗಳೇನು? ಒಂದು ವಾಕ್ಯದಲ್ಲಿ ಉತ್ತರಿಸಿ ಎಂದ ಯಶವಂತಪುರ ಪೊಲೀಸ್​​

ಬೆಂಗಳೂರಿನ ಟ್ರಾಫಿಕ್​ ಜಾಮ್​ ವಿಚಾರವಾಗಿ ಯಶವಂತಪುರ ಟ್ರಾಫಿಕ್​ ಪೊಲೀಸ್​ ಸಾರ್ವಜನಿಕರಿಗೆ ಟ್ರಾಫಿಕ್​ ಜಾಮ್​ ಉಂಟಾಗಲು ಕಾರಣ ಏನು? ಒಂದು ವಾಕ್ಯದಲ್ಲಿ ಉತ್ತರಿಸಿ. ಅತ್ಯುತ್ತಮ ಉತ್ತರ ನೀಡುವವರಿಗೆ ಉತ್ತಮ ಬಹುಮಾನವೂ ಇದೆ ಎಂದು ಹೇಳುವ ಮೂಲಕ ಟ್ವೀಟ್​ ಮಾಡಿದ್ದಾರೆ.

ಟ್ರಾಫಿಕ್ ಜಾಮ್​ ಉಂಟಾಗಲು ಕಾರಣಗಳೇನು? ಒಂದು ವಾಕ್ಯದಲ್ಲಿ ಉತ್ತರಿಸಿ ಎಂದ ಯಶವಂತಪುರ ಪೊಲೀಸ್​​
ಯಶವಂತಪುರ ಟ್ರಾಫಿಕ್​ ಪೊಲೀಸ್
TV9 Web
| Edited By: |

Updated on: Jul 08, 2023 | 11:33 PM

Share

ರಾಜ್ಯ ರಾಜಧಾನಿ ಬೆಂಗಳೂರು ಎಂದಾಕ್ಷಣ ಸಾಕಷ್ಟು ಸಂಗತಿಗಳು ನಮ್ಮ ಕಣ್ಣ ಮುಂದೆ ಹೋಗುತ್ತದೆ. ಅದರಲ್ಲಿ ಪ್ರಮುಖವಾಗಿ ಬೆಂಗಳೂರಿನ ಟ್ರಾಫಿಕ್​ ಜಾಮ್ (traffic jam) ಕೂಡ ಒಂದು. ವಿಶ್ವದಲ್ಲಿಯೇ ಅತೀ ಹೆಚ್ಚು ವಾಹನಗಳ ದಟ್ಟಣೆ ಇರುವ ನಗರಗಳಲ್ಲಿ ಸಿಲಿಕಾನ್​ ಸಿಟಿ ಕೂಡ ಒಂದು. ಬೆಂಗಳೂರಿನ ಟ್ರಾಫಿಕ್​ ಜಾಮ್​ಗೆ ಮೂಗು ಮೂರಿಯದ ಜನರು ಇಲ್ಲ. ಇಂಹತ ಟ್ರಾಫಿಕ್​ ಜಾಮ್​ ನಿಯಂತ್ರಣಕ್ಕೆ ಸರ್ಕಾರ ಹೊಸ ಹೊಸ ಯೋಜನೆ, ನಿಯಮಗಳನ್ನು ಆಗಾಗ ಜಾರಿಗೊಳಿಸುತ್ತಿರುತ್ತದೆ.

ಸದ್ಯ ಇದೇ ಬೆಂಗಳೂರಿನ ಟ್ರಾಫಿಕ್​ ಜಾಮ್​ ವಿಚಾರವಾಗಿ ಯಶವಂತಪುರ ಟ್ರಾಫಿಕ್​ ಪೊಲೀಸ್​​  ಸಾರ್ವಜನಿಕರಿಗೆ ಟ್ರಾಫಿಕ್​ ಜಾಮ್​ ಉಂಟಾಗಲು ಕಾರಣ ಏನು? ಒಂದು ವಾಕ್ಯದಲ್ಲಿ ಉತ್ತರಿಸಿ. ಅತ್ಯುತ್ತಮ ಉತ್ತರ ನೀಡುವವರಿಗೆ ಉತ್ತಮ ಬಹುಮಾನವೂ ಇದೆ ಎಂದು ಹೇಳುವ ಮೂಲಕ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ: ನನ್ನಾಕಿ ಹೃದಯದಲ್ಲಿರಲಿ, ಗಾಡಿ ನಂಬರ್ ಪ್ಲೇಟ್ ಮೇಲಲ್ಲ! ವೈರಲ್ ಆಗ್ತಿದೆ ಹುಬ್ಬಳ್ಳಿ ಧಾರವಾಡ ಪೊಲೀಸರ ಜಾಗೃತಿ ಸಂದೇಶ

ಟ್ವೀಟ್​ನಲ್ಲಿ ಏನಿದೆ?

ಮೇಷ್ಟ್ರು: ಟ್ರಾಫಿಕ್ ಜಾಮ್​ಗಳು ಉಂಟಾಗಲು ಕಾರಣಗಳೇನು ಮತ್ತು ಅವುಗಳನ್ನು ಹೇಗೆ ನಿವಾರಿಸಬಹುದು? (1 ವಾಕ್ಯದಲ್ಲಿ ಉತ್ತರಿಸಿ)

ಬುದ್ದಿವಂತ ವಿದ್ಯಾರ್ಥಿಗಳು ಈ ಕೂಡಲೇ ಉತ್ತರಿಸಬಹುದು. (ಪ್ರತಿಯೊಬ್ಬರೂ ಸಹ ವಿದ್ಯಾರ್ಥಿಗಳೇ ಅಂಬೋದು ಸತ್ಯ ಅಲ್ವಾ)

“ಅತ್ಯುತ್ತಮ ಉತ್ತರದ ಮಾಲೀಕರಿಗೆ ನಮ್ಮೊಟ್ಟಿಗೆ ಠಾಣೆಯಲ್ಲಿ ಕಾಫಿ ಕುಡಿಯುವ ಅವಕಾಶ ಉಂಟು” ಎಂದು ಟ್ವೀಟ್​ ಮಾಡಿದೆ.

ಯಶವಂತಪುರ ಟ್ರಾಫಿಕ್​ ಪೊಲೀಸ್​ರ ಈ ಟ್ವೀಟ್​ಗೆ ಸಾಕಷ್ಟು ಜನರು ಮರು ಟ್ವೀಟ್​ ಮಾಡುವ ಮೂಲಕ ಅತ್ಯುತ್ತಮ ಉತ್ತರ ನೀಡಲು ಪ್ರಯಿತ್ನಿಸಿದ್ದಾರೆ. ಕಾರಣಗಳು ಹಲವಾರು, ನಿವಾರಣೆಗೆ ಕೈಗೂಡಿಸಬೇಕು ಪೊಲೀಸರು ಹಾಗೂ ವಾಹನ ಸವಾರರು.

ಇದನ್ನೂ ಓದಿ: ಬೆಂಗಳೂರಿನ ಸುತ್ತಮುತ್ತ ಧಾರಾಕಾರ ಮಳೆ; ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳ ಪರದಾಟ

ಅನವಶ್ಯಕ ಗಡಿಬಿಡಿ, ಅಸಹನೆ, ಟ್ರಾಫಿಕ್ ಗದ್ದಲ ಗೋಜುಗಳಲ್ಲಿ ಮೊಂಡು ಕೋಪ, ಸರ್ ಹೀಗೆ ಹೇಳುತ್ತಾ ಹೋದರೆ ಹನುಮಂತನ ಬಾಲದಂತೆ ಬೆಳೆಯುತ್ತೆ. ನಮ್ಮ ಸುರಕ್ಷತೆ ಹೊಣೆಹೊತ್ತ ಪೊಲೀಸ್​ ದೇವರಿಗೆ ಸಹಕಾರ ನೀಡಿದರೆ, ನಮ್ಮೆಲ್ಲ ಬಾಳು ಚೆಂದ.

ಒಬ್ಬರ ಹಿಂದೆ ಒಬ್ಬರು ಹೋಗುವ ಬದಲು ಓವರ್​ಟೇಕ್​ ಮಾಡುವುದು ಟ್ರಾಫಿಕ್ ಜಾಮ್​ಗೆ ಮೂಲ ಕಾರಣ. ಹೀಗೆ ಸಾಕಷ್ಟು ಜನರು ತಮ್ಮ ತಮ್ಮ ಉತ್ತರಗಳನ್ನು ನೀಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ