AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊನ್ನೆ ಕಾಶ್ಮೀರದಲ್ಲಿ ನಡೆದಿದ್ದು ನಾಳೆ ದೇಶದಲ್ಲೂ ಆಗಬಹುದು; ಬುದ್ಧಿಜೀವಿಗಳು ಮೌನವಾಗಿದ್ದಾರೆ -ಬಿಜೆಪಿ ನಾಯಕ ಸಿ.ಟಿ.ರವಿ

ಮೊನ್ನೆ ಕಾಶ್ಮೀರದಲ್ಲಿ ನಡೆದಿದ್ದು ನಾಳೆ ದೇಶದಲ್ಲೂ ಆಗಬಹುದು. ಇದನ್ನು ನಾನು ಖಂಡಿಸುತ್ತೇನೆ. ಇದರ ಬಗ್ಗೆ ಬುದ್ಧಿಜೀವಿಗಳು ಮೌನವಾಗಿದ್ದಾರೆ. ಸತ್ತವನು ಹಿಂದೂ ಆದರೆ ಕಾಂಗ್ರೆಸ್ನವರಿಗೆ ಕಣ್ಣೀರು ಬರಲ್ಲ. ಸತ್ತವರು ಹಿಂದೂ ಆದರೆ ಸಿದ್ದರಾಮಯ್ಯ ಸಂತಾಪ ಸೂಚಿಸಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ.

ಮೊನ್ನೆ ಕಾಶ್ಮೀರದಲ್ಲಿ ನಡೆದಿದ್ದು ನಾಳೆ ದೇಶದಲ್ಲೂ ಆಗಬಹುದು; ಬುದ್ಧಿಜೀವಿಗಳು ಮೌನವಾಗಿದ್ದಾರೆ -ಬಿಜೆಪಿ ನಾಯಕ ಸಿ.ಟಿ.ರವಿ
ಸಿ ಟಿ ರವಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ
TV9 Web
| Edited By: ಆಯೇಷಾ ಬಾನು|

Updated on: Apr 06, 2022 | 11:09 AM

Share

ಬೆಂಗಳೂರು: ಮುಸ್ಲಿಮರು ಮಾವು ತೆಗೆದುಕೊಳ್ಳದಂತೆ ಅಭಿಯಾನ ವಿಚಾರಕ್ಕೆ ಸಂಬಂಧಿಸಿ ಈ ರೀತಿಯ‌ ನಿಲುವನ್ನು ನಮ್ಮ ಪಕ್ಷ ಸಮರ್ಥಿಸಿಕೊಳ್ಳುವುದಿಲ್ಲ ಎಂದು ಬೆಂಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದ್ದಾರೆ.

ಮೊನ್ನೆ ಕಾಶ್ಮೀರದಲ್ಲಿ ನಡೆದಿದ್ದು ನಾಳೆ ದೇಶದಲ್ಲೂ ಆಗಬಹುದು. ಇದನ್ನು ನಾನು ಖಂಡಿಸುತ್ತೇನೆ. ಇದರ ಬಗ್ಗೆ ಬುದ್ಧಿಜೀವಿಗಳು ಮೌನವಾಗಿದ್ದಾರೆ. ಸತ್ತವನು ಹಿಂದೂ ಆದರೆ ಕಾಂಗ್ರೆಸ್ನವರಿಗೆ ಕಣ್ಣೀರು ಬರಲ್ಲ. ಸತ್ತವರು ಹಿಂದೂ ಆದರೆ ಸಿದ್ದರಾಮಯ್ಯ ಸಂತಾಪ ಸೂಚಿಸಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಕನ್ನಡ ಮಾತಾಡಿದ್ದಕ್ಕೆ ಯುವಕ ಚಂದ್ರು ಹತ್ಯೆ ಮಾಡಿದ್ದಾರೆ. ಬೆಂಗಳೂರಿನ ಗೋರಿಪಾಳ್ಯದಲ್ಲಿ ಯುವಕನ ಹತ್ಯೆಯಾಗಿದೆ. ನಾವು ಯಾವ ದೇಶದಲ್ಲಿ ಇದ್ದೇವೆಂದು ಸಿ.ಟಿ.ರವಿ ಪ್ರಶ್ನೆ ಮಾಡಿದ್ದಾರೆ. ಈ ವಿಚಾರವನ್ನು ನಾವು ವ್ಯಕ್ತಿಗತ ಆಧಾರದಲ್ಲಿ ನೋಡಬಾರದು. ಇದರ ಹಿಂದೆ ಯಾವ ಪ್ರಚೋದನಕಾರಿ ಅಂಶಗಳಿವೆ. ಮೊನ್ನೆ ಕಾಶ್ಮೀರದಲ್ಲಿ ನಡೆದಿದ್ದು ನಾಳೆ ದೇಶದಲ್ಲೂ ಆಗಬಹುದು. ಇದನ್ನು ನಾನು ಖಂಡಿಸುತ್ತೇನೆ.

ಸಮವಸ್ತ್ರ ಕುರಿತ ಹೈಕೋರ್ಟ್ ಆದೇಶಕ್ಕೆ ನಾವು ಬದ್ಧ. ಶಾದಿ ಭಾಗ್ಯದಿಂದ ಸಮಾಜ ಒಡೆಯುವ ಕೆಲಸ ಮಾಡಿದ್ರು. ಧ್ವನಿವರ್ಧಕಗಳ ಶಬ್ದದ ಪ್ರಮಾಣ ಬಗ್ಗೆ ಕೋರ್ಟ್ ಆದೇಶಗಳನ್ನು ಎಲ್ಲರೂ ಪಾಲಿಸಲಿ. ನಾವು ನ್ಯಾಯಾಲಯದ ಪರ, ಪರಿಸರ ಇಲಾಖೆಯ ಪರ. ನ್ಯಾಯಾಲಯದ ತೀರ್ಪುನ್ನು ವಿರೋಧ ಮಾಡಬಾರದು. ಮತಾಂಧತೆ ಭೂತ ಯಾರಿಗೆ ಹೊಕ್ಕಿದೆ ಎಂದು ಗೊತ್ತಾಗುತ್ತೆ ಎಂದು ಬೆಂಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.

ಪಕ್ಷದೊಳಗೆ ಪ್ರಜಾಪ್ರಭುತ್ವವೇ ಇಲ್ಲ ಬಿಜೆಪಿ‌ ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪಕ್ಷ. ಕೆಲ ಪಕ್ಷಗಳು ಪ್ರಜಾಪ್ರಭುತ್ವದ ಬಗ್ಗೆ ಮಾತನಾಡುತ್ತವೆ. ಆದರೆ ಆ ಪಕ್ಷದೊಳಗೆ ಪ್ರಜಾಪ್ರಭುತ್ವವೇ ಇಲ್ಲ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಹತ್ತು ಲಕ್ಷಕ್ಕೂ ಹೆಚ್ಚು ಬೂತ್‌ಗಳಲ್ಲಿ ಬೂತ್ ಅಧ್ಯಕ್ಷರು ತಮ್ಮ ಮನೆಗಳೆದುರು ಪಕ್ಷದ ಧ್ವಜ‌ ಹಾರಿಸಿದ್ದಾರೆ. 15 ಸಾವಿರ ಮಂಡಲಗಳಲ್ಲಿ ಶೋಭಾಯಾತ್ರೆ, ಧ್ವಜಾರೋಹಣ ಮಾಡಲಾಗಿದೆ. ಬಿಜೆಪಿ 42 ವಸಂತಗಳನ್ನು ಪೂರೈಸಿದೆ. 1951 ರಲ್ಲಿ ರಾಷ್ಟ್ರದ ಹಿತಕ್ಕೆ ಒಂದು ಪಕ್ಷದ ಅವಶ್ಯಕತೆ ಕಂಡು ಬಂತು. ಶ್ಯಾಮ್ ಪ್ರಸಾದ್ ಮುಖರ್ಜಿ ನೇತೃತ್ವದಲ್ಲಿ ಆಂದೋಲನ‌ ಶುರುವಾಯಿತು. ಧ್ಯೇಯ ನಿಷ್ಠೆ, ಸತತ ಪರಿಶ್ರಮದಿಂದ ಬಿಜೆಪಿ ಬೆಳೆದಿದೆ. ಇವತ್ತು ಬಿಜೆಪಿ‌ 18 ಕೋಟಿ ಸದಸ್ಯತ್ವ ಹೊಂದಿದೆ. ಅತೀ ಹೆಚ್ಚು ಒಬಿಸಿ, ಎಸ್ಸಿ ಎಸ್ಟಿ ಶಾಸಕರನ್ನು, ಮಹಿಳಾ ಶಾಸಕಿಯರನ್ನು ಹೊಂದಿದೆ. ಜಗತ್ತಿನಲ್ಲೇ ಸಮರ್ಥ ನಾಯಕತ್ವ ಹೊಂದಿರುವ ಪಕ್ಷ ಬಿಜೆಪಿ.

ಕುಮಾರಸ್ವಾಮಿ ಮೊದಲು ಹಿಜಾಬ್, ಸಮವಸ್ತ್ರ ಬಗ್ಗೆ ತಮ್ಮ ನಿಲುವು ಸ್ಪಷ್ಟ ಪಡಿಸಲಿ ಇನ್ನು ಬಿಜೆಪಿ ಬಗ್ಗೆ ಕುಮಾರಸ್ವಾಮಿ ಟೀಕೆ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಸಿ.ಟಿ.ರವಿ, ಅವರು ಟೀಕೆ ಮಾಡಲೇಬೇಕು. ಅವರಿಗೆ ಹೊಗಳುವ ಔದಾರ್ಯತೆ ಇಲ್ಲ. ಯೂನಿಫಾರಂ ವಿರುದ್ಧ ಹಿಜಾಬ್ ತಂದವರಿಗೆ ಅವರು‌ ಪಾಠ ಹೇಳಬೇಕಿತ್ತು. ಕುಮಾರಸ್ವಾಮಿ ಮೊದಲು ಹಿಜಾಬ್, ಸಮವಸ್ತ್ರ ಬಗ್ಗೆ ತಮ್ಮ ನಿಲುವು ಸ್ಪಷ್ಟ ಪಡಿಸಲಿ ಎಂದರು.

ಇದನ್ನೂ ಓದಿ: BJP Foundation Day: ಬಿಜೆಪಿ ಪಾಲಿಗೆ ಈ ಸಂಸ್ಥಾಪನಾ ದಿನ ತುಂಬ ಮಹತ್ವದ್ದು; ಮೂರು ಕಾರಣ ಹೇಳಿದ ಪ್ರಧಾನಿ ಮೋದಿ

Fighting: ಟೈಮಿಂಗ್ ವಿಚಾರಕ್ಕೆ ಉಡುಪಿಯ ಬಸ್ ಕಂಡಕ್ಟರ್​ಗಳ ನಡುವೆ ಹೊಡೆದಾಟ; ವಿಡಿಯೋ ವೈರಲ್

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ