AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Training to be organized: ಡೈರಿಯಲ್ಲಿ ಸಿಕ್ಕ ಮಾಹಿತಿ ಹಿಂದೆ ಬಿದ್ದ ಪೊಲೀಸರು, ಪಿಎಫ್‌ಐ ಮುಖಂಡರ ಮನೆಗಳ ದಾಳಿ ಹಿಂದಿರುವ ಉದ್ದೇಶವೇನು?

ಆರೋಪಿಗಳ ಬಳಿ ಸಿಕ್ಕ ಡೈರಿಯಲ್ಲಿ Training to be organized ಅಂತ ಮಾತ್ರ ಬರೆದಿದ್ದು ಸ್ಥಳ ಹಾಗೂ ದಿನಾಂಕ ಬರೆದಿಲ್ಲ. ಹೀಗಾಗಿ ಎಲ್ಲಿ ಟ್ರೈನಿಂಗ್ ಫ್ಲ್ಯಾನ್ ಮಾಡಿದ್ರು? ಯಾರೆಲ್ಲ ಟ್ರೈನಿಂಗ್ ಅಲ್ಲಿ ಭಾಗಿಯಾಗಲಿದ್ದಾರೆ ಎಂಬ ಬಗ್ಗೆ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ.

Training to be organized: ಡೈರಿಯಲ್ಲಿ ಸಿಕ್ಕ ಮಾಹಿತಿ ಹಿಂದೆ ಬಿದ್ದ ಪೊಲೀಸರು, ಪಿಎಫ್‌ಐ ಮುಖಂಡರ ಮನೆಗಳ ದಾಳಿ ಹಿಂದಿರುವ ಉದ್ದೇಶವೇನು?
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Sep 27, 2022 | 11:38 AM

Share

ಬೆಂಗಳೂರು: ರಾಜ್ಯದ ವಿವಿಧೆಡೆ ಪಿಎಫ್‌ಐ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ 75ಕ್ಕೂ ಹೆಚ್ಚು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ. ಅನೇಕರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಈ ಹಿಂದೆ ಎನ್ಐಎ ದಾಳಿ ವೇಳೆ ವಶಕ್ಕೆ ಪಡೆದಿದ್ದವರನ್ನು ವಿಚಾರಣೆ ನಡೆಸಿದಾಗ ಸಿಕ್ಕ ಮಾಹಿತಿಯ ತನಿಖೆಗಾಗಿ ಇಂದು ಪೊಲೀಸರು ಮತ್ತೆ ದಾಳಿ ನಡೆಸಿ ಕೆಲ ಪಿಎಫ್‌ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಪಿಎಫ್‌ಐ ಮುಖಂಡರ ದಾಳಿಗೆ ಮಹತ್ವದ ತಿರುವು ಸಿಕ್ಕಿದೆ.

ಈ ಹಿಂದೆ ವಶಕ್ಕೆ ಪಡೆಯಲಾಗಿದ್ದ ಪಿಎಫ್‌ಐ ಮುಖಂಡರ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗವಾಗಿತ್ತು. ಕೆಜಿ ಹಳ್ಳಿ ಹಾಗೂ ಸಿಸಿಬಿ ಪೊಲೀಸರಿಗೆ ತನಿಖೆ ವೇಳೆ ಡೈರಿಯೊಂದು ಸಿಕ್ಕಿದ್ದು ಡೈರಿ ರಹಸ್ಯ ಬೆನ್ನತ್ತಿ ಇಂದು ಪೊಲೀಸರು ಮತ್ತಷ್ಟು ಜನರನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳ ಬಳಿ ಸಿಕ್ಕ ಡೈರಿಯಲ್ಲಿ Training to be organized ಅಂತ ಮಾತ್ರ ಬರೆದಿದ್ದು ಸ್ಥಳ ಹಾಗೂ ದಿನಾಂಕ ಬರೆದಿಲ್ಲ. ಹೀಗಾಗಿ ಎಲ್ಲಿ ಟ್ರೈನಿಂಗ್ ಫ್ಲ್ಯಾನ್ ಮಾಡಿದ್ರು? ಯಾರೆಲ್ಲ ಟ್ರೈನಿಂಗ್ ಅಲ್ಲಿ ಭಾಗಿಯಾಗಲಿದ್ದಾರೆ ಎಂಬ ಬಗ್ಗೆ ಪೊಲೀಸರು ತಲೆ ಕೆಡಿಸಿಕೊಂಡಿದ್ದಾರೆ. ಹೀಗಾಗಿ ರಾಜ್ಯಾದ್ಯಂತ ಪೊಲೀಸರು ಪಿಎಫ್‌ಐ ಮುಖಂಡರ ಮೇಲೆ ದಾಳಿ ನಡೆಸಿದ್ದಾರೆ. ದಾಳಿ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: Shocking News: ವಾಮಾಚಾರ ಮಾಡುತ್ತಿದ್ದಾರೆ ಎಂದು ಮಹಿಳೆಯರಿಗೆ ಬಲವಂತವಾಗಿ ಮಲಮೂತ್ರವನ್ನು ತಿನ್ನಿಸಿದ ಗ್ರಾಮಸ್ಥರು

ಡೈರಿಯಲ್ಲಿ ತರಬೇತಿ ಸಿದ್ದ ಅಂತ ಬರೆದಿದ್ದು ಪೊಲೀಸರಲ್ಲಿ ಹಲವು ಅನುಮಾನಗಳು ಮೂಡಿವೆ. ಭಯೋತ್ಪಾದನಾ ಕೃತ್ಯ ಎಸಗುವ ತರಬೇತಿ ಇರಬಹುದಾ? ಕೋಮು ಗಲಭೆ ಸೃಷ್ಟಿಸುವ ತರಬೇತಿ ಇರಬಹುದಾ? ಸ್ಫೋಟಕ ತಯಾರು ಮಾಡುವ ತರಬೇತಿ ಇರಬಹುದಾ? ಎಂಬ ಎಲ್ಲಾ ಆಯಾಮಗಳಲ್ಲೂ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ರಾಜ್ಯಾದ್ಯಂತ ಪಿಎಫ್​ಐ ಮುಖಂಡರ ಮನೆಗಳ ಮೇಲೆ ದಾಳಿ: 70ಕ್ಕೂ ಹೆಚ್ಚು ಮುಖಂಡರು ವಶಕ್ಕೆ

ಬೆಂಗಳೂರು: ಬೆಳ್ಳಂ ಬೆಳಗ್ಗೆ ರಾಜ್ಯಾದ್ಯಂತ ಪಿಎಫ್​ಐ (PFI) ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಹಾಗೂ 70ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ, ಬೀದರ್​, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾ., ಮೈಸೂರು, ವಿಜಯಪುರ ಸೇರಿದಂತೆ ರಾಜ್ಯಾದ್ಯಂತ ಪಿಎಫ್​​ಐ ಮುಖಂಡರ ಮನೆ ಮೇಲೆ ದಾಳಿ ನಡೆದಿದೆ.

ಕಳೆದ ಕೆಲ ದಿನಗಳ ಹಿಂದೆ ಎನ್​ಐಎ ದಾಳಿ ನಡೆಸಿ ನೂರಕ್ಕೂ ಹೆಚ್ಚು ಪಿಎಫ್​ಐ ಮುಖಂಡರನ್ನು ವಶಕ್ಕೆ ಪಡೆಯಲಾಗಿತ್ತು. ಈಗ ಮತ್ತೆ ಕಾನೂನು & ಸುವ್ಯವಸ್ಥೆ ಎಡಿಜಿಪಿ ಅಲೋಕ್​ ಕುಮಾರ್​ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು 40ಕ್ಕೂ ಹೆಚ್ಚು ಮುಖಂಡರನ್ನ ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿ ಆರೋಪದಡಿ ವಶಕ್ಕೆ ಪಡೆಯಲಾಗಿದೆ.

ಈ ಬಗ್ಗೆ ಮಾತನಾಡಿದ ಎಡಿಜಿಪಿ ಅಲೋಕ್​ ಕುಮಾರ್, ರಾಜ್ಯಾದ್ಯಂತ PFI ಮುಖಂಡರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಈವರೆಗೂ ಸುಮಾರು 70 PFI ಕಾರ್ಯಕರ್ತರು ವಶಕ್ಕೆ ಪಡೆಯಲಾಗಿದೆ. ಶಾಂತಿ ಕದಡುವ ಕೃತ್ಯದಲ್ಲಿ ಭಾಗಿ ಆರೋಪದಡಿ ಆಯಾ ಜಿಲ್ಲೆಗಳಲ್ಲಿ ಎಸ್​ಪಿ ನೇತೃತ್ವದಲ್ಲಿ ದಾಳಿ ನಡೆದಿದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:37 am, Tue, 27 September 22

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ರಸ್ತೆ ಗುಂಡಿ, ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಮತ್ತಷ್ಟು ಅವ್ಯವಸ್ಥೆ ಬಯಲು
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂಗೆ ಅರ್ಜಿ