AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಿ ಕೋಟಿ ಒಡೆಯರಿಗೂ ಪಿಂಚಣಿ ನೀಡುವ ಅಗತ್ಯವೇನಿದೆ? ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಲು ಸಾಮಾಜಿಕ ಹೋರಾಟಗಾರರ ಆಗ್ರಹ

ಮಾಜಿ ಶಾಸಕರ ಪಿಂಚಣಿಗೆಂದೇ ಕೋಟಿ ಕೋಟಿ ಹಣ ವೆಚ್ಚವಾಗುತ್ತಿದೆ. ನೂರಾರು ಕೋಟಿ ಆಸ್ತಿಯ ಒಡೆಯರೂ ಕೂಡ ಸರ್ಕಾರದ ಪಿಂಚಣಿ ಪಡೆಯುತ್ತಿದ್ದಾರೆ. ಸರ್ಕಾರದ ಮೇಲಿನ ಹೊರೆ ತಗ್ಗಿಸಲು ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಿ.

ಕೋಟಿ ಕೋಟಿ ಒಡೆಯರಿಗೂ ಪಿಂಚಣಿ ನೀಡುವ ಅಗತ್ಯವೇನಿದೆ? ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಲು ಸಾಮಾಜಿಕ ಹೋರಾಟಗಾರರ ಆಗ್ರಹ
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on:Jul 17, 2022 | 2:55 PM

Share

ಬೆಂಗಳೂರು: ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ(Pension) ನಿಲ್ಲಿಸಿ ಎಂದು ವಿಧಾನಸಭಾ ಸ್ಪೀಕರ್ ಮತ್ತು ಸಭಾಪತಿಗೆ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಪತ್ರ ಬರೆದಿದ್ದಾರೆ. ಮಾಜಿ ಶಾಸಕರ ಪಿಂಚಣಿಗೆಂದೇ ಕೋಟಿ ಕೋಟಿ ಹಣ ವೆಚ್ಚವಾಗುತ್ತಿದೆ. ಕೋಟಿ ಕೋಟಿ ಆಸ್ತಿಯ ಒಡೆಯರೂ ಪಿಂಚಣಿ ಪಡೆಯುತ್ತಿದ್ದಾರೆ. ಹೀಗಾಗಿ ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಿ ಎಂದು ಪತ್ರ ಬರೆದು ಆಗ್ರಹಿಸಿದ್ದಾರೆ.

ಮಾಜಿ ಶಾಸಕರ ಪಿಂಚಣಿಗೆಂದೇ ಕೋಟಿ ಕೋಟಿ ಹಣ ವೆಚ್ಚವಾಗುತ್ತಿದೆ. ನೂರಾರು ಕೋಟಿ ಆಸ್ತಿಯ ಒಡೆಯರೂ ಕೂಡ ಸರ್ಕಾರದ ಪಿಂಚಣಿ ಪಡೆಯುತ್ತಿದ್ದಾರೆ. ಸರ್ಕಾರದ ಮೇಲಿನ ಹೊರೆ ತಗ್ಗಿಸಲು ಮಾಜಿ ಶಾಸಕರ, ಮಾಜಿ ಪರಿಷತ್ ಸದಸ್ಯರ ಪಿಂಚಣಿ ನಿಲ್ಲಿಸಿ. ಪ್ರತಿ ತಿಂಗಳು 440 ಮಾಜಿ ಶಾಸಕರಿಗೆ 2.8 ಕೋಟಿ ಪಿಂಚಣಿ ನೀಡಲಾಗುತ್ತಿದೆ. 105 ಮಾಜಿ ಪರಿಷತ್ ಸದಸ್ಯರಿಗೆ ವರ್ಷಕ್ಕೆ 8 ಕೋಟಿ ಪಿಂಚಣಿ ನೀಡಲಾಗುತ್ತಿದೆ. ಮಾಜಿ ಶಾಸಕರ ಪಿಂಚಣಿ ಮೊತ್ತ ವರ್ಷಕ್ಕೆ 26 ಕೋಟಿ. ಸಾವಿರಾರು ಕೋಟಿ ಒಡೆಯರಿಗೂ ಸರ್ಕಾರದ ಪೆನ್ಶನ್ ನೀಡುವ ಅಗತ್ಯವೇನಿದೆ ಎಂದು ಸಭಾಧ್ಯಕ್ಷರು ಹಾಗೂ ಸಭಾಪತಿಗಳಿಗೆ ಪ್ರಶ್ನೆ ಮಾಡಿ ಸಾಮಾಜಿಕ ಹೋರಾಟಗಾರ ಹೆಚ್.ಎಂ.ವೆಂಕಟೇಶ್ ಪತ್ರ ಬರೆದಿದ್ದಾರೆ. pension

ಈ ಕೊರೊನಾ ಸಾಂಕ್ರಾಮಿಕ ರೋಗ ದೇಶದ ನಾಗರಿಕರನ್ನು ಇನ್ನಿಲ್ಲದಂತೆ ಮಾಡುತ್ತಿವೆ. ಇಂತಹ ಕಷ್ಟಕರ ಸನ್ನಿವೇಶದಲ್ಲಿ ರಾಜ್ಯ ಸರ್ಕಾರವು ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು, ನಾದ ಬಲೆಯಲ್ಲಿ ಸಿಲುಕಿಕೊಂಡಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಉಲ್ಲೇಖ ಎರಡರನ್ವಯ ಜಾರಿಯಾಗುತ್ತಿರುವ ಸದಲ ಕಾನೂನುಗಳನ್ನು ತಕ್ಷಣಕ್ಕೆ ರದ್ದುಪಡಿಸಿ ಜನಸಾಮಾನ್ಯರ ತೆರಿಗೆ ಹಣವನ್ನು ಸದ್ವಿನಿಯೋಗವಾಗುವಂತೆ ಜನಸಾಮಾನ್ಯರ ವೈದ್ಯಕೀಯ ಚಿಕಿತ್ಸೆಗೆ ಅಥವಾ ದಿನಮರ್ಬಲರ ಅಭಿವೃದ್ಧಿಗೆ ಬಳಸಿಕೊಳ್ಳುವಂತೆ ನಾನು ಈ ಮೂಲಕ ತಮ್ಮಲ್ಲಿ ವಿನಮ್ರವಾಗಿ ಪ್ರಾರ್ಥಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

Published On - 2:53 pm, Sun, 17 July 22

ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ