AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Rains: ಬೆಂಗಳೂರಿನಲ್ಲಿ ಸೋಮವಾರ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಇಲ್ಲಿದೆ ವಿವರ

Bengaluru Rain: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ(ಅಕ್ಟೋಬರ್ 09) ಸಂಜೆ ಶುರುವಾದ ಮಳೆ ಇಡೀ ರಾತ್ರಿ ಧಾರಾಕಾರವಾಗಿ ಸುರಿದಿದೆ. ಈ ರಣ ಮಳೆಯೊಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಹಾಗಾದ್ರೆ, ಬೆಂಗಳೂರು ನಗರದಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಎನ್ನುವ ವಿವರ ಇಲ್ಲಿದೆ ನೋಡಿ.

Bengaluru Rains: ಬೆಂಗಳೂರಿನಲ್ಲಿ ಸೋಮವಾರ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಇಲ್ಲಿದೆ ವಿವರ
ಬೆಂಗಳೂರು ಮಳೆ
Follow us
Kiran Surya
| Updated By: ರಮೇಶ್ ಬಿ. ಜವಳಗೇರಾ

Updated on: Oct 10, 2023 | 8:03 AM

ಬೆಂಗಳೂರು, (ಅಕ್ಟೋಬರ್ 10): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  (Bengaluru) ನಿನ್ನೆ(ಅಕ್ಟೋಬರ್ 09) ಸಂಜೆ ಶುರುವಾದ ಮಳೆ (Rain) ಇಡೀ ರಾತ್ರಿ ಧಾರಾಕಾರವಾಗಿ ಸುರಿದಿದೆ. ಈ ರಣ ಮಳೆಯೊಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಅಲ್ಲದೇ ಸಿಲಿಕಾನ್ ಸಿಟಿಯ ರಸ್ತೆಗಳು ಕೆರೆಯಂತಾಗಿದ್ದವು. ಇನ್ನು ಅಂಡರ್ ಪಾಸ್ ಗಳು ಜಲಾವೃತವಾಗಿವೆ. ಟ್ರಾಫಿಕ್​ ಕಥೆ ಅಂತೂ ಕೇಳಲೇ ಬಾರದು. ಮಳೆರಾಯನ ಅಬ್ಬರಕ್ಕೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರ ಪರದಾಡಿದ್ದರು. ಇನ್ನು ಕೆಂಗೇರಿ ಭಾಗದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. ಇನ್ನುಳಿದ ಕಡೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮೆಳೆಯಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಎಲ್ಲೆಲ್ಲಿ ಎಷ್ಟು ಮಳೆ

  • ಕೆಂಗೇರಿ 8.3 ಸೆಂ.ಮೀ
  • ಅಂಜನಾಪುರ 7.6 ಸೆಂ.ಮೀ
  • ಆರ್.ಆರ್.ನಗರ 6.8 ಸೆಂ.ಮೀ
  • ಹೆಚ್.ಎ.ಎಲ್ ವಿಮಾನ ನಿಲ್ದಾಣ 6.4
  • ನಾಯಂಡಹಳ್ಳಿ 6.3
  • ಕೊಟ್ಟಿಗೆಪಾಳ್ಯ 6.2
  • ಬಿಳೇಕಹಳ್ಳಿ 5.9
  • ಪೀಣ್ಯ 5.8
  • ನಾಗಪುರ 5.5
  • ಅರೆಕೆರೆ 5.4
  • ಮಾರತಹಳ್ಳಿ 5.3
  • ಬಾಗಲಕುಂಟೆ 5.3
  • ಕೋರಮಂಗಲ 4.9
  • ದಯಾನಂದ ನಗರ 4.9
  • ವಿದ್ಯಾಪೀಠ 4.8
  • ಬಿಟಿಎಂ ಲೇಔಟ್ 4.4
  • ಸಿಂಗಸಂದ್ರ 4.3
  • ಹೊರಮಾವು 4.2ಇದನ್ನೂ ಓದಿ: ಮಳೆಗೆ ಬೆಂಗಳೂರು ತತ್ತರ; ಕರಿಯಮ್ಮ ಅಗ್ರಹಾರ ಬಳಿ ರಸ್ತೆ ಜಲಾವೃತ, ವಾಹನಗಳಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಜನರ ರಕ್ಷಣೆ

    ಧಾರಾಕಾರ ಮಳೆಗೆ ತತ್ತರಿಸಿದ ಜನ

    ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಮಳೆಗೆ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಸದಾಶಿವನಗರ, ಶಾಂತಿನಗರ, ರಿಚ್​ಮಂಡ್ ಟೌನ್, BTM ಲೇಔಟ್, ವಿಜಯನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ನಾಯಂಡಹಳ್ಳಿ, ಹೊಸಕೆರೆಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಳೆಯಿಂದ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು, ರಸ್ತೆ ಬದಿ ವ್ಯಾಪಾರಿಗಳ ಪರದಾಟ ನಡೆಸಿದ್ರು. ಮಳೆಯಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್​ ಉಂಟಾಗಿತ್ತು.

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಹೊಸೂರು ರಸ್ತೆಯ ರೂಪೇನಾ ಅಗ್ರಹಾರ, ಹರಳೂರು ಜಂಕ್ಷನ್, ನಾಯಂಡಹಳ್ಳಿ, ಶೇಷಾದ್ರಿಪುರಂ, ರೈಲ್ವೆ ಅಂಡರ್​ಪಾಸ್, ವಿಜಯನಗರದ ಧನಂಜಯ ಪ್ಯಾಲೇಸ್ ಬಳಿ ಜಲಾವೃತಗೊಂಡಿದ್ವು. ಬನ್ನೇರುಘಟ್ಟ ರಸ್ತೆ, ನಾಗಾರ್ಜುನ ಜಂಕ್ಷನ್, ಅನಿಲ್ ಕುಂಬ್ಳೆ ವೃತ್ತ, ಕಲ್ಯಾಣನಗರ ಬ್ರಿಡ್ಜ್, ಹೆಸರಘಟ್ಟದಲ್ಲಿ ರಸ್ತೆ ಜಲಮಯವಾಗಿದ್ವು. ರಸ್ತೆಯಲ್ಲಿ ಹೊಳೆಯಂತೆ ಹರಿಯುತ್ತಿರುವ ನೀರು ಹರಿಯುತ್ತಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಹಿಂದೊಮ್ಮೆ ಪಾಕಿಸ್ತಾನ ಫೈರ್ ಮಾಡಿದ ಮಿಸೈಲ್ 5 ವರ್ಷದ ನಂತರ ಸಿಡಿದಿತ್ತು!
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಆಡಿದ ಮಾತಿಗೆ ಕ್ಷಮೆ ಯಾಚಿಸಿದ ಮಧ್ಯಪ್ರದೇಶದ ಮಂತ್ರಿ ವಿಜಯ್ ಶಾ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!
ಮಳೆಗಾಲವನ್ನು ನೆನಪಿಸಿಕೊಳ್ಳಲೂ ಸಾಯಿ ಲೇಔಟ್ ಜನ ತಯಾರಿಲ್ಲ!