Bengaluru Rains: ಬೆಂಗಳೂರಿನಲ್ಲಿ ಸೋಮವಾರ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಇಲ್ಲಿದೆ ವಿವರ

Bengaluru Rain: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ(ಅಕ್ಟೋಬರ್ 09) ಸಂಜೆ ಶುರುವಾದ ಮಳೆ ಇಡೀ ರಾತ್ರಿ ಧಾರಾಕಾರವಾಗಿ ಸುರಿದಿದೆ. ಈ ರಣ ಮಳೆಯೊಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಹಾಗಾದ್ರೆ, ಬೆಂಗಳೂರು ನಗರದಲ್ಲಿ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ ಎನ್ನುವ ವಿವರ ಇಲ್ಲಿದೆ ನೋಡಿ.

Bengaluru Rains: ಬೆಂಗಳೂರಿನಲ್ಲಿ ಸೋಮವಾರ ಎಲ್ಲೆಲ್ಲಿ ಎಷ್ಟು ಮಳೆಯಾಗಿದೆ? ಇಲ್ಲಿದೆ ವಿವರ
ಬೆಂಗಳೂರು ಮಳೆ
Edited By:

Updated on: Oct 10, 2023 | 8:03 AM

ಬೆಂಗಳೂರು, (ಅಕ್ಟೋಬರ್ 10): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  (Bengaluru) ನಿನ್ನೆ(ಅಕ್ಟೋಬರ್ 09) ಸಂಜೆ ಶುರುವಾದ ಮಳೆ (Rain) ಇಡೀ ರಾತ್ರಿ ಧಾರಾಕಾರವಾಗಿ ಸುರಿದಿದೆ. ಈ ರಣ ಮಳೆಯೊಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಅಲ್ಲದೇ ಸಿಲಿಕಾನ್ ಸಿಟಿಯ ರಸ್ತೆಗಳು ಕೆರೆಯಂತಾಗಿದ್ದವು. ಇನ್ನು ಅಂಡರ್ ಪಾಸ್ ಗಳು ಜಲಾವೃತವಾಗಿವೆ. ಟ್ರಾಫಿಕ್​ ಕಥೆ ಅಂತೂ ಕೇಳಲೇ ಬಾರದು. ಮಳೆರಾಯನ ಅಬ್ಬರಕ್ಕೆ ರಸ್ತೆಗಳು ಜಲಾವೃತಗೊಂಡು ವಾಹನ ಸವಾರರ ಪರದಾಡಿದ್ದರು. ಇನ್ನು ಕೆಂಗೇರಿ ಭಾಗದಲ್ಲಿ ಅತಿ ಹೆಚ್ಚು ಮಳೆ ಸುರಿದಿದೆ. ಇನ್ನುಳಿದ ಕಡೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಮೆಳೆಯಾಗಿದೆ ಎನ್ನುವ ವಿವರ ಈ ಕೆಳಗಿನಂತಿದೆ.

ಎಲ್ಲೆಲ್ಲಿ ಎಷ್ಟು ಮಳೆ

  • ಕೆಂಗೇರಿ 8.3 ಸೆಂ.ಮೀ
  • ಅಂಜನಾಪುರ 7.6 ಸೆಂ.ಮೀ
  • ಆರ್.ಆರ್.ನಗರ 6.8 ಸೆಂ.ಮೀ
  • ಹೆಚ್.ಎ.ಎಲ್ ವಿಮಾನ ನಿಲ್ದಾಣ 6.4
  • ನಾಯಂಡಹಳ್ಳಿ 6.3
  • ಕೊಟ್ಟಿಗೆಪಾಳ್ಯ 6.2
  • ಬಿಳೇಕಹಳ್ಳಿ 5.9
  • ಪೀಣ್ಯ 5.8
  • ನಾಗಪುರ 5.5
  • ಅರೆಕೆರೆ 5.4
  • ಮಾರತಹಳ್ಳಿ 5.3
  • ಬಾಗಲಕುಂಟೆ 5.3
  • ಕೋರಮಂಗಲ 4.9
  • ದಯಾನಂದ ನಗರ 4.9
  • ವಿದ್ಯಾಪೀಠ 4.8
  • ಬಿಟಿಎಂ ಲೇಔಟ್ 4.4
  • ಸಿಂಗಸಂದ್ರ 4.3
  • ಹೊರಮಾವು 4.2ಇದನ್ನೂ ಓದಿ: ಮಳೆಗೆ ಬೆಂಗಳೂರು ತತ್ತರ; ಕರಿಯಮ್ಮ ಅಗ್ರಹಾರ ಬಳಿ ರಸ್ತೆ ಜಲಾವೃತ, ವಾಹನಗಳಲ್ಲಿ ಸಿಲುಕಿದ್ದ 50ಕ್ಕೂ ಹೆಚ್ಚು ಜನರ ರಕ್ಷಣೆ

    ಧಾರಾಕಾರ ಮಳೆಗೆ ತತ್ತರಿಸಿದ ಜನ

    ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಮಳೆಗೆ ಮೆಜೆಸ್ಟಿಕ್, ಕೆ.ಆರ್.ಮಾರ್ಕೆಟ್, ಸದಾಶಿವನಗರ, ಶಾಂತಿನಗರ, ರಿಚ್​ಮಂಡ್ ಟೌನ್, BTM ಲೇಔಟ್, ವಿಜಯನಗರ, ರಾಜರಾಜೇಶ್ವರಿ ನಗರ, ಕೆಂಗೇರಿ, ನಾಯಂಡಹಳ್ಳಿ, ಹೊಸಕೆರೆಹಳ್ಳಿ ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಳೆಯಿಂದ ರಸ್ತೆಯಲ್ಲಿ ನೀರು ನಿಂತು ವಾಹನ ಸವಾರರು, ರಸ್ತೆ ಬದಿ ವ್ಯಾಪಾರಿಗಳ ಪರದಾಟ ನಡೆಸಿದ್ರು. ಮಳೆಯಿಂದ ನಗರದ ಹಲವೆಡೆ ಟ್ರಾಫಿಕ್ ಜಾಮ್​ ಉಂಟಾಗಿತ್ತು.

ಬೆಂಗಳೂರಿನಲ್ಲಿ ಧಾರಾಕಾರ ಮಳೆಗೆ ಜನ ತತ್ತರಿಸಿ ಹೋಗಿದ್ದಾರೆ. ಹೊಸೂರು ರಸ್ತೆಯ ರೂಪೇನಾ ಅಗ್ರಹಾರ, ಹರಳೂರು ಜಂಕ್ಷನ್, ನಾಯಂಡಹಳ್ಳಿ, ಶೇಷಾದ್ರಿಪುರಂ, ರೈಲ್ವೆ ಅಂಡರ್​ಪಾಸ್, ವಿಜಯನಗರದ ಧನಂಜಯ ಪ್ಯಾಲೇಸ್ ಬಳಿ ಜಲಾವೃತಗೊಂಡಿದ್ವು. ಬನ್ನೇರುಘಟ್ಟ ರಸ್ತೆ, ನಾಗಾರ್ಜುನ ಜಂಕ್ಷನ್, ಅನಿಲ್ ಕುಂಬ್ಳೆ ವೃತ್ತ, ಕಲ್ಯಾಣನಗರ ಬ್ರಿಡ್ಜ್, ಹೆಸರಘಟ್ಟದಲ್ಲಿ ರಸ್ತೆ ಜಲಮಯವಾಗಿದ್ವು. ರಸ್ತೆಯಲ್ಲಿ ಹೊಳೆಯಂತೆ ಹರಿಯುತ್ತಿರುವ ನೀರು ಹರಿಯುತ್ತಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us