AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ವಿಚಾರ ಇಷ್ಟೆಲ್ಲಾ ನಡೆಯುತ್ತಿರುವಾಗ ಗುಪ್ತಚರ ಇಲಾಖೆ ಏನು ಮಾಡ್ತಿತ್ತು; ಕಾಂಗ್ರೆಸ್ ಶಾಸಕ‌ ರಮೇಶ್ ಕುಮಾರ್

ಗುಪ್ತಚರ ಇಲಾಖೆಯವರು ಮುಖ್ಯಮಂತ್ರಿಗಳಿಗೆ ಸಲಹೆ ಕೊಟ್ಟು ಕೊಟ್ಟು ಸಿಎಂಗಳು ಸೋತು ಮನೆಗೆ ವಾಪಸ್ ಬಂದಿದ್ದು. ಸಮಾಜದ ಶಾಂತಿ ಭಂಗ ಮಾಡುವವರನ್ನು ಪತ್ತೆ ಹಚ್ಚಬೇಕು. ಹಾಗಾದಾಗ ಶಾಂತಿಯಿಂದ ಬದುಕಲು ಸಾಧ್ಯ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕ‌ ರಮೇಶ್ ಕುಮಾರ್ ತಿಳಿಸಿದ್ದಾರೆ.

ಹಿಜಾಬ್ ವಿಚಾರ ಇಷ್ಟೆಲ್ಲಾ ನಡೆಯುತ್ತಿರುವಾಗ ಗುಪ್ತಚರ ಇಲಾಖೆ ಏನು ಮಾಡ್ತಿತ್ತು; ಕಾಂಗ್ರೆಸ್ ಶಾಸಕ‌ ರಮೇಶ್ ಕುಮಾರ್
ಕಾಂಗ್ರೆಸ್ ಶಾಸಕ‌ ರಮೇಶ್ ಕುಮಾರ್
TV9 Web
| Updated By: preethi shettigar|

Updated on:Mar 23, 2022 | 7:05 PM

Share

ಬೆಂಗಳೂರು: ಹಿಜಾಬ್ ವಿಚಾರ ಇಷ್ಟೆಲ್ಲಾ ನಡೆಯುತ್ತಿರುವಾಗ ಗುಪ್ತಚರ ಇಲಾಖೆ ಏನು ಮಾಡುತ್ತಿತ್ತು? ಹಿಜಾಬ್ (Hijab) ವಿಚಾರದ ಬೆಳವಣಿಗೆಯಲ್ಲಿ ಗುಪ್ತಚರ ಇಲಾಖೆ ವಿಫಲವಾಗಿದೆ. ಮಕ್ಕಳ ಮೈಂಡ್ ವಾಶ್ ಮಾಡುವ ಇಂತಹ ಘಟನೆಗಳ ಬಗ್ಗೆ ಎಚ್ಚೆತ್ತುಕೊಂಡಿದ್ದರೆ ಇಂತಹ ಅನಾಹುತಗಳು ಆಗುತ್ತಿತ್ತಾ? ಗುಪ್ತಚರ ಇಲಾಖೆ ಸತ್ತು ಹೋಗಿತ್ತಾ?  ಗುಪ್ತಚರ ಇಲಾಖೆಯವರು ಮುಖ್ಯಮಂತ್ರಿಗಳಿಗೆ ಸಲಹೆ ಕೊಟ್ಟು ಕೊಟ್ಟು ಸಿಎಂಗಳು ಸೋತು ಮನೆಗೆ ವಾಪಸ್ ಬಂದಿದ್ದು. ಸಮಾಜದ ಶಾಂತಿ ಭಂಗ ಮಾಡುವವರನ್ನು ಪತ್ತೆ ಹಚ್ಚಬೇಕು. ಹಾಗಾದಾಗ ಶಾಂತಿಯಿಂದ ಬದುಕಲು ಸಾಧ್ಯ ಎಂದು ವಿಧಾನಸಭೆಯಲ್ಲಿ ಕಾಂಗ್ರೆಸ್(Congress) ಶಾಸಕ‌ ರಮೇಶ್ ಕುಮಾರ್(Ramesh kumar) ತಿಳಿಸಿದ್ದಾರೆ.

ಬಳಿಕ ಮಾತನಾಡಿದ ಅವರು, ಗುಪ್ತಚರ ಇಲಾಖೆಯ ಡಿಜಿ ಪ್ರತಿನಿತ್ಯ ಸಿಎಂಗೆ ಮಾಹಿತಿ ನೀಡುತ್ತಾರೆ. ಅವರಿಗೆ ಮಾಹಿತಿ ಕೊಡುವುದು ಅವರ ಕೆಳಗಿನ ಅಧಿಕಾರಿಗಳು. ನಮ್ಮೂರಲ್ಲಿ ಒಬ್ಬ ಇಂಟಲಿಜೆನ್ಸ್ ಇದ್ದಾರೆ. ಅವರು ನಿತ್ಯ ನನ್ನ ಕಾರ್ ಚಾಲಕನಿಗೆ ಕರೆ ಮಾಡಿ ಸಾಹೇಬ್ರು ಎಲ್ಲಿ ಹೋಗ್ತಾರೆ ಎಂದು ವಿಚಾರಿಸುತ್ತಾರೆ. ನಾನು ಬೆಂಗಳೂರು ಬಿಟ್ಟರೆ ಮನೆಗೆ ಮನೆ ಬಿಟ್ಟರೆ ತೋಟಕ್ಕೆ ಹೋಗುತ್ತೇನೆ. ಅವನು ಕೊಡೋದೇ ಇಂಟಲಿಜೆನ್ಸ್. ಇವರನ್ನು ಅವಲಂಬಿಸಿಕೊಂಡು ರಾಜ್ಯ ನಡೆಸಲು ನಾವು ನಿಂತಿದ್ದೇವೆ. ಆದರೆ ಅವರು ಜವಾಬ್ದಾರಿಯಿಂದ ವಿಮುಖರಾದಾಗ ಕಷ್ಟಗಳನ್ನು ಎದುರಿಸಬೇಕಾಗುತ್ತದೆ ಎಂದು ಹೇಳಿದ್ದಾರೆ.

ಗುಪ್ತಚರ ಇಲಾಖೆ ಇಲ್ಲದಿರುತ್ತಿದ್ದರೆ ನಾವೆಲ್ಲಾ ಬದುಕಿರುತ್ತಿರಲಿಲ್ಲ: ಸಚಿವ ಈಶ್ವರಪ್ಪ

ರಮೇಶ್​ ಕುಮಾರ್​ ಮಾತಿಗೆ ಸಚಿವ ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಗುಪ್ತಚರ ಇಲಾಖೆ ತನ್ನ ಕೆಲಸ ತಾನು ಮಾಡುತ್ತಿದೆ. ಗುಪ್ತಚರ ಇಲಾಖೆ ಇಲ್ಲದಿರುತ್ತಿದ್ದರೆ ನಾವೆಲ್ಲಾ ಬದುಕಿರುತ್ತಿರಲಿಲ್ಲ. ಅಂದು ಶಿವಮೊಗ್ಗದಲ್ಲಿ ಯುವಕನ ಹತ್ಯೆ ಆದಾಗ ಗುಪ್ತಚರ ಇಲಾಖೆ ಕೆಲಸ ಮಾಡದೇ ಇದ್ದರೆ ಎಷ್ಟೋ ಹೆಣಗಳು ಬೀಳ್ತಾ ಇದ್ದವು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಯುಗಾದಿಯನ್ನ ಧಾರ್ಮಿಕ ದಿನವನ್ನಾಗಿ ಆಚರಿಸಲು ಮುಜರಾಯಿ‌ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಸೂಚನೆ

ಎಂಪಿ ರೇಣುಕಾಚಾರ್ಯ ಪುತ್ರಿಯ ಜಾತಿ ಪ್ರಮಾಣ ಪತ್ರದ ಬಗ್ಗೆ ವಿಧಾನಸಭೆಯಲ್ಲಿ ಜಟಾಪಟಿ; ಏನಿದು ವಿಚಾರ?

Published On - 6:59 pm, Wed, 23 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ