AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ ಮೇಲಿನ ದ್ವೇಷಕ್ಕೆ ಮಗು ಬಲಿ; ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ!

ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ತಾಯಿಯ ಮೇಲಿನ ದ್ವೇಷಕ್ಕೆ ಆರೋಪಿ 6 ವರ್ಷದ ಮಗುವನ್ನು ಕೊಲೆ ಮಾಡಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಮೃತದೇಹ ಚರಂಡಿಯಲ್ಲಿ ಪತ್ತೆಯಾದ ಬಳಿಕ ಕೇಸ್ ಪಕ್ಕದಮನೆಯವನೇ ಈ ಕೃತ್ಯವೆಸಗಿರುವ ಅನುಮಾನ ಮೂಡಿತ್ತು. ಆ ಅನುಮಾನ ತನಿಖೆ ವೇಳೆ ದೃಢಪಟ್ಟಿತ್ತು. ಮಗುವನ್ನು ಅಪಹರಿಸಿದ್ದ ಆರೋಪಿ ಅತ್ಯಾಚಾರವೆಸಗಿ, ಕೊಲೆ ಮಾಡಿದ್ದಾನೆಂಬ ಸ್ಫೋಟಕ ಮಾಹಿತಿ ತನಿಖೆ ವೇಳೆ ಬಹಿರಂಗವಾಗಿದೆ.

ತಾಯಿ ಮೇಲಿನ ದ್ವೇಷಕ್ಕೆ ಮಗು ಬಲಿ; ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ!
ಕೊಲೆಗೂ ಮುನ್ನ 6 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರವೆಸಗಿದ್ದ ಪಾಪಿ ಯುಸೂಫ್ ಮೀರ್
ಪ್ರಜ್ವಲ್​ ಕುಮಾರ್ ಎನ್​ ವೈ
| Edited By: |

Updated on: Jan 11, 2026 | 12:33 PM

Share

ಬೆಂಗಳೂರು, ಜನವರಿ 11: ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ಆರು ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಲ್ಲಲಾಗಿತ್ತು. ತಾಯಿಯ ಮೇಲಿನ ದ್ವೇಷಕ್ಕೆ ಮಗುವನ್ನು ಕೊಂದ ಪಾಪಿ ಚರಂಡಿಗೆ ಬಿಸಾಕಿದ್ದ. ಈ ಕೊಲೆ ಪ್ರಕರಣದ ತನಿಖೆಯ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದ್ದು, ಕೊಲೆಗೂ ಮುನ್ನ ಪುಟ್ಟ ಬಾಲಕಿಯ ಮೇಲೆ ಆರೋಪಿ ಅತ್ಯಾಚಾರವೆಸಗಿರುವುದು ಗೊತ್ತಾಗಿದೆ. ಆರೋಪಿಯು ಈ ಹಿಂದೆಯೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದನೆಂಬುದು ವಿಚಾರಣೆ ವೇಳೆ ತಿಳಿದುಬಂದಿದ್ದು, ಪೋಕ್ಸೋ ಕೇಸ್ ದಾಖಲಾಗಿದೆ.

ಶವವನ್ನು ರಸ್ತೆ ಬದಿಯ ಚರಂಡಿಗೆ ಎಸೆದಿದ್ದ

ಬಾಲಕಿಯ ಕೊಲೆ ಪ್ರಕರಣದಲ್ಲಿ ಯುಸೂಫ್ ಮೀರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ತಾಯಿಯೊಂದಿಗೆ ಜಗಳ ಮಾಡಿಕೊಂಡಿದ್ದ ಆರೋಪಿಯು ಮಗುವನ್ನು ಕಿಡ್ನಾಪ್ ಮಾಡಿದ್ದ. 6 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದ ಪಾಪಿ, ನಂತರ ಪ್ಲಾಸ್ಟಿಕ್ ವೈರ್ ಬಳಸಿ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದ.  ಕೊಲೆ ಬಳಿಕ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ರಸ್ತೆ ಬದಿಯ ಚರಂಡಿಗೆ ಎಸೆದಿದ್ದಾನೆ ಎಂದು ತನಿಖೆಯಲ್ಲಿ ದೃಢಪಟ್ಟಿದೆ.

ಬಾಲಕಿ ನಾಪತ್ತೆಯಾದ ಒಂದು ದಿನದ ಬಳಿಕ ಪೋಷಕರು ದೂರು ನೀಡಿದ್ದು, ದೂರು ದಾಖಲಾದ ಹನ್ನೆರಡು ಗಂಟೆಗಳೊಳಗೆ ರಸ್ತೆ ಬದಿಯ ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹ ಪತ್ತೆಯಾಗಿತ್ತು. ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಆರಂಭದಲ್ಲಿ ಕೊಲೆ ಮಾತ್ರ ನಡೆದಿರುವ ಅನುಮಾನ ಇತ್ತು. ಆದರೆ ತನಿಖೆಯಲ್ಲಿ ಅತ್ಯಾಚಾರ ಬಳಿಕ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ ತಾಯಿ ಮೇಲಿನ ದ್ವೇಷಕ್ಕೆ ಮುಗ್ಧ ಮಗುವಿನ ಕತ್ತು ಹಿಸುಕಿ ಕೊಲೆ!

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಆರೋಪಿ

ಪೊಲೀಸ್ ತನಿಖೆಯಲ್ಲಿ ಯುಸೂಫ್ ಮೀರ್ ವಿರುದ್ಧ ಈಗಾಗಲೇ ಎರಡು ಗಂಭೀರ ಪ್ರಕರಣಗಳು ದಾಖಲಾಗಿರುವುದು ಗೊತ್ತಾಗಿದೆ. ಪಶ್ಚಿಮ ಬಂಗಾಳದಲ್ಲಿ ಒಂದು ಪೋಕ್ಸೋ ಹಾಗೂ ಮತ್ತೊಂದು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಾಖಲಾಗಿದ್ದವು. ಸದ್ಯ ಆರೋಪಿಯನ್ನು ಪಶ್ಚಿಮ ಬಂಗಾಳದಿಂದ ಬಂಧಿಸಿ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ. ಯುಸೂಫ್ ಮಕ್ಕಳ ಮೇಲೆ ಲೈಂಗಿಕ ದೌರ್ಜ್ಯನ್ಯ ನಡೆಸುವ ಮನಸ್ಥಿತಿಯ ವ್ಯಕ್ತಿ ಎಂಬುದು ತನಿಖೆಯಲ್ಲಿ ತಿಳಿದುಬಂದಿದ್ದು, ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ
ಬಿಜೆಪಿ ನಾಯಕರು ಹೇಡಿಗಳು; ಬಂಧನದ ಬಳಿಕ ಪ್ರಿಯಾಂಕಾ ಗಾಂಧಿ ಆಕ್ರೋಶ