AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆ ಬೆಂಗಳೂರಿಗೆ ಮೋದಿ: ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ ಇಲ್ಲಿದೆ

ನರೇಂದ್ರ ಮೋದಿ ಅವರು ನಾಳೆ (ಶನಿವಾರ) ವೈಟ್ ಫೀಲ್ಡ್ ಮೆಟ್ರೋ ಉದ್ಘಾಟನೆಗೆ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿವೈಟ್ ಫೀಲ್ಡ್ ಸುತ್ತಮುತ್ತ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಲಾಗಿದೆ. ಯಾವ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ? ಪರ್ಯಾಯ ಮಾರ್ಗ ವಿವರ ಇಲ್ಲಿದೆ.

ನಾಳೆ ಬೆಂಗಳೂರಿಗೆ ಮೋದಿ: ಕೆಲ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ, ಪರ್ಯಾಯ ಮಾರ್ಗ ವಿವರ ಇಲ್ಲಿದೆ
ನರೇಂದ್ರ ಮೋದಿ
TV9 Web
| Updated By: ಅಕ್ಷಯ್​ ಪಲ್ಲಮಜಲು​​|

Updated on:Mar 24, 2023 | 4:03 PM

Share

ಬೆಂಗಳೂರು (ಮಾ.24): ಪ್ರಧಾನಿ ನರೇಂದ್ರ ಮೋದಿ(Narendra modi) ಅವರು ನಾಳೆ (ಮಾರ್ಚ್ 24) ವೈಟ್ ಫಿಲ್ಡ್ – ಕೆ. ಆರ್​ ಪುರ ನಡುವಿನ ಮೆಟ್ರೋಗೆ ಹಸಿರು ನಿಶಾನೆ ತೋರಲಿದ್ದಾರೆ(Whitefield Metro Inauguration). ಮೆಟ್ರೋ ಲೋಕಾರ್ಪಣೆ ಹಿನ್ನೆಲೆಯಲ್ಲಿ ನವ ವಧುವಿನಂತೆ ವೈಟ್ ಫಿಲ್ಡ್ ಮೆಟ್ರೋ ನಿಲ್ದಾಣವನ್ನು (Namma Metro) ಸಿಂಗಾರ ಮಾಡಲಾಗಿದೆ. ವೈಟ್ ಫೀಲ್ಡ್ ಮೆಟ್ರೋ ಹೊಸ ಮಾರ್ಗ ಉದ್ಘಾಟನೆಯ ನಂತರ ಪ್ರಧಾನಿ ಮೋದಿ ಅವರು ವೈಟ್ ಫೀಲ್ಡ್ ನಲ್ಲಿ ಸಮೀಪ ಮಹದೇವಪುರ ಕ್ಷೇತ್ರದ ಸತ್ಯ ಸಾಯಿ ಆಶ್ರಮದಿಂದ ವೈಟ್ ಫೀಲ್ಡ್ ಮೆಟ್ರೋ ಸ್ಟೇಷನ್ ವರೆಗೂ ಸುಮಾರು 1 ಕಿ.ಮೀ. ರೋಡ್ ಶೋ ನಡೆಸಲಿದ್ದಾರೆ. ಇನ್ನು ಮೆಟ್ರೋ ಸುತ್ತಮುತ್ತ 5 ರಸ್ತೆಗಳಲ್ಲಿ ಸಂಚಾರ ನಿರ್ಬಂಧಗೊಳಿಸಲಾಗಿದೆ. ಮಾ.24ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.

ಪೊಲೀಸ್ ಸಿಬ್ಬಂದಿಯಿಂದ ಪ್ರತಿ ಹಂತದಲ್ಲೂ ತಪಾಸಣೆ ನಡೆಸಲಾಗುತ್ತಿದೆ. ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಗಳಿಂದ ತಪಾಸಣೆ ಮಾಡಲಾಗುತ್ತಿದೆ. ಪ್ರಧಾನಿಗಳಿಂದ ರೋಡ್ ಶೋ ಸಾಧ್ಯತೆ ಹಿನ್ನೆಲೆ ರಸ್ತೆಯುದ್ಧಕ್ಕೂ ಬ್ಯಾರಿಕೇಡ್ ಹಾಕಿ ತಯಾರಿ ನಡೆದಿದೆ. ದಿಣ್ಣೂರ್ ಕ್ರಾಸ್ ನಿಂದ ವೈಟ್ ಫೀಲ್ಡ್ ಮೆಟ್ರೋ ನಿಲ್ದಾಣದವರೆಗೂ ರಸ್ತೆಯ ಎರಡು ಬದಿ ಬ್ಯಾರಿಕೇಡ್ ಹಾಕಿ ಸಾರ್ವಜನಿಕರಿಗೆ ಮೋದಿ ಸ್ವಾಗತಕ್ಕೆ ಅವಕಾಶ ನೀಡಲಾಗಿದೆ. ರಸ್ತೆಯುದ್ದಕ್ಕೂ ಬಿಜೆಪಿ ಬಾವುಟ ಬ್ಯಾನರ್ ಗಳು ರಾರಾಜಿಸುತ್ತಿವೆ.

ಸಂಚಾರಕ್ಕೆ ತಡೆ, ಪರ್ಯಾಯ ಮಾರ್ಗ

ನಾಳೆ ಪ್ರಧಾನಮಂತ್ರಿ ಮೋದಿ ಬೆಂಗಳೂರು ಪ್ರವಾಸ ಜೊತೆಗೆ ವೈಟ್ ಫೀಲ್ಡ್ – ಕೆ ಆರ್ ಪುರ ನಡುವಿನ ಮೆಟ್ರೋ ರೈಲಿಗೆ ಚಾಲನೆ ನೀಡಲಿರುವ ಹಿನ್ನಲೆಯಲ್ಲಿ ವೈಟ್ ಫೀಲ್ಡ್ ಸುತ್ತಮುತ್ತ ಹಲವು ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೇರಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ತಡೆಹಿಡಿಯಲಾಗಿದೆ. ಹಾಗೂ ಕೆಲವು ಮಾರ್ಗಗಳ ಸಂಚಾರವನ್ನು ಪೊಲೀಸರು ಬದಲಾವಣೆ ಮಾಡಿದ್ದಾರೆ.

ಯಾವ ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧ?

  • ವರ್ತೂರು ಕೋಡಿಯಿಂದ ಹೋಫ್ ಫಾರಂ ಜಂಕ್ಷನ್ ಮೂಲಕ ಕನ್ನಮಂಗಲ ಗೇಟ್ ವರೆಗೆ
  • ಚನ್ನಸಂದ್ರದಿಂದ ಹೋಫ್ ಫಾರಂ ಮೂಲಕ ಹೂಡಿ ಸರ್ಕಲ್ ವರೆಗೆ
  • ಕುಂದಲಹಳ್ಳಿ ರಸ್ತೆಯಿಂದ ವೈದೇಹಿ ಅಸ್ಪತ್ರೆ ಮೂಲಕ ಹೋಫ್ ಫಾರಂ ಜಂಕ್ಷನ್ ವರೆಗೆ ಸಂಚಾರ ನಿರ್ಬಂಧ

ಸಂಚಾರ ಮಾರ್ಪಾಡು ಮಾಡಿದ ರಸ್ತೆಗಳು:

  • ವರ್ತೂರುಕೋಡಿಯಿಂದ ಕುಂದಲಹಳ್ಳಿ ಬ್ರಿಡ್ಜ್ ಮೂಲಕ ಹಳೇ ಏರ್ಪೋರ್ಟ್ ರಸ್ತೆ ತಲುಪುವುದು
  • ಚನ್ನಸಂದ್ರ ಸರ್ಕಲ್ ನಿಂದ ನಾಗೊಂಡನಹಳ್ಳಿ, ಇಮ್ಮಡಿಹಳ್ಳಿ ಹಗದೂರು ಮೂಲಕ ವರ್ತೂರು ಕೋಡಿ ತಲುಪುವುದು
  • ಕಾಟಂನಲ್ಲೂರು ಕ್ರಾಸ್ ನಿಂದ ಶೀಗೆಹಳ್ಳಿ ಗೇಟ್, ಕಾಡುಗೋಡಿ ನಾಲಾರಸ್ತೆ ಮೂಲಕ ಚನ್ನಸಂದ್ರ
  • ಹೂಡಿ ಸರ್ಕಲ್ ನಿಂದ ಗ್ರಾಫೈಟ್ ರಸ್ತೆ ಮೂಲಕ ಕುಂದಲಹಳ್ಳಿ ತಲುಪುವುದು
  • ಹೂಡಿ ಸರ್ಕಲ್ ನಿಂದ ಅಯ್ಯಪ್ಪನಗರ, ಭಟ್ಟರಹಳ್ಳಿ-ಮೇಡಹಳ್ಳಿ ಮೂಲಕ ಕಾಟಂನಲ್ಲೂರು ಕ್ರಾಸ್ ತಲುಪುವುದು.

ಐದು ರಸ್ತೆಗಳಲ್ಲಿ ಭಾರಿ ವಾಹನಗಳ ಸಂಚಾರ ಕೂಡ ನಿರ್ಬಂಧ

  • ಕಾಟಂನಲ್ಲೂರು ಕ್ರಾಸ್ ನಿಂದ ಕಾಡುಗೋಡಿ, ಹೋಫ್ ಫಾರಂ ಜಂಕ್ಷನ್- ವರ್ತೂರು ಕೋಡಿವರೆಗೆ
  • ಗುಂಜೂರುನಿಂದ ವರ್ತೂರು, ವೈಟ್ ಫೀಲ್ಡ್, ಕಾಡುಗೋಡಿ, ಕಾಟಂನಲ್ಲೂರು ಕ್ರಾಸ್ ವರೆಗೆ.
  • ತಿರುಮಲಶೆಟ್ಟಿಹಳ್ಳಿ ಕ್ರಾಸ್ ನಿಂದ ಚನ್ನಸಂದ್ರ, ಹೋಫ್ ಫಾರಂ ಜಂಕ್ಷನ್ ವರೆಗೆ
  • ಟಿನ್ ಪ್ಯಾಕ್ಟರಿಯಿಂದ ಹೂಡಿ, ಐಟಿಪಿಎಲ್, ಹೋಫ್ ಫಾರಂ ಜಂಕ್ಷನ್ ವರೆಗೆ.
  • ಮಾರತ್ತಹಳ್ಳಿ ಬ್ರಿಡ್ಜ್ ನಿಂದ ಕುಂದಲಹಳ್ಳಿ, ವರ್ತೂರು ಕೋಡಿ, ವೈಟ್ ಫೀಲ್ಡ್ ವರೆಗೆ ಭಾರಿ ವಾಹನಗಳ ಸಂಚಾರ ನಿರ್ಬಂಧ.

ಭಾರಿ ವಾಹನಗಳ ಸಂಚಾರ ಮಾರ್ಪಾಡು

  • ಹೊಸಕೋಟೆಯಿಂದ ದೊಡ್ಡಗಟ್ಟಿಗನಬ್ಬೆ, ತಿರುಮಲಶೆಟ್ಟಿಹಳ್ಳಿ, ಚಿಕ್ಕತಿರುಪತಿ ಮೂಲಕ ಸರ್ಜಾಪುರ ತಲುಪುವುದು
  • ಸರ್ಜಾಪುರದಿಂದ ಗುಂಜೂರು, ನೆರಿಗೆರಸ್ತೆ, ತಿರುಮಲಶೆಟ್ಟಿಹಳ್ಳಿ ಮೂಲಕ ಹೊಸಕೋಟೆ
  • ಟಿನ್ ಫ್ಯಾಕ್ಟರಿಯಿಂದ ಕೆ ಆರ್ ಪುರ, ಭಟ್ಟರಹಳ್ಳಿ ಮೂಲಕ ಹೊಸಕೋಟೆ.
  • ಮಾರತ್ತಹಳ್ಳಿಯಿಂದ ದೊಡ್ಡನೆಕ್ಕುಂದಿ ಮಹದೇವಪುರ ಟಿನ್ ಫ್ಯಾಕ್ಟರಿ ಮೂಲಕ ಭಟ್ಟರಹಳ್ಳಿ

Published On - 3:09 pm, Fri, 24 March 23

ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಶಾಸಕರ ಆಹ್ವಾನ ಬೇಕಿಲ್ಲ, ಮಂಡ್ಯ ಜನ ಜವಾಬ್ದಾರಿ ನೀಡಿದ್ದಾರೆ: ಹೆಚ್​ಡಿಕೆ
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಡಿಕೆಶಿ ಪರವೋ, ಸಿದ್ದರಾಮಯ್ಯ ಪರವೋ? ಲಕ್ಷ್ಮೀ ಹೆಬ್ಬಾಳ್ಕರ್ ಏನಂದರು ನೋಡಿ!
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು