AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೆಲಸದ ಆಸೆ ತೋರಿಸಿ ಸಾವಿರಾರು ಜನರಿಂದ 20 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರಲ್ಲಿ ಕೆಲಸ ಅರಸೋ ಯುವಕ ಯುವತಿಯರೇ ಎಚ್ಚರ. ಏಕೆಂದರೆ ತಲೆ ಎತ್ತಿದೆ ಕೆಲಸ ಕೊಡ್ತೀವಿ ಅಂತಾ ವಂಚಿಸೊ ಜಾಲ. ಈ ವಂಚಕ ಜಾಲ ವಂಚಿಸಿರೋದು ಬರೋಬ್ಬರಿ ಒಂದೂ ಸಾವಿರಕ್ಕೂ ಹೆಚ್ಚು ಯುವಕ ಯುವತಿಯರನ್ನ. ಹಾಗಾಗಿ ಕೆಲಸ ಸಿಕ್ತು ಎಂದು ಹಣ ಸುರಿದು ಮೋಸ ಹೋಗದಿರಿ.

ಬೆಂಗಳೂರು: ಕೆಲಸದ ಆಸೆ ತೋರಿಸಿ ಸಾವಿರಾರು ಜನರಿಂದ 20 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿ ಅರೆಸ್ಟ್
ಬಂಧನ
ರಾಚಪ್ಪಾಜಿ ನಾಯ್ಕ್
| Edited By: ಆಯೇಷಾ ಬಾನು|

Updated on: Nov 29, 2023 | 9:12 AM

Share

ಬೆಂಗಳೂರು, ನ.29: ಮಾಹಾಮಾರಿ ಕೊರೊನಾ (Coronavirus) ಬಳಿಕ ಬೆಂಗಳೂರಿನಲ್ಲಿ ಕೆಲಸ ಸಿಗುವುದೇ ಕಷ್ಟದ ಸಂಗತಿಯಾಗಿದೆ. ಇದರ ನಡುವೆ ಕೆಲ ಕಿಲಾಡಿ ಖದೀಮರು ಕೆಲಸ ಹುಡುಕುವ ಯುವಕ-ಯುವತಿಯರನ್ನು ಟಾರ್ಗೆಟ್ ಮಾಡಿ ಕೆಲಸದ ಆಮೀಷವೊಡ್ಡಿ ಹಣ ಪೀಕಿ ಮೋಸ ಮಾಡುತ್ತಿದ್ದಾರೆ (Job Fraud). ಪ್ರಕರಣ ಸಂಬಂಧ ವೈಟ್ ಫೀಲ್ಡ್ ಪೊಲೀಸರು ಪವನ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಆರೋಪಿ ಒಂದಲ್ಲಾ ಎರಡಲ್ಲಾ ಬರೋಬ್ಬರಿ ಒಂದೂ ಸಾವಿರಕ್ಕೂ ಹೆಚ್ಚು ಯುವಕ ಯುವತಿಯರಿಗೆ ಮೋಸ ಮಾಡಿ ಲಕ್ಷ ಲಕ್ಷ ಹಣ ಪೀಕಿದ್ದಾನೆ. ಸದ್ಯ ಈಗ ಕಂಬಿ ಹಿಂದೆ ಬಿದ್ದಿದ್ದಾನೆ.

ಐಟಿ ಕಂಪನಿ ಹೆಸರಲ್ಲಿ ಮಹಾ ಮೋಸ

ಬೆಂಗಳೂರಿನಲ್ಲಿ ಕೆಲಸ ಹುಡುಕುವವರು ತುಂಬಾ ಎಚ್ಚರಿಕೆಯಿಂದಿರಬೇಕು. ಖದೀಮರು ಸ್ಮಾರ್ಟ್ ಆಗಿ ವಂಚನೆಯ ಜಾಲ ಬೀಸಿ ಸಮಸ್ಯೆಯ ಸುಳಿಗೆ ಬೀಳಿಸಿಬಿಡುತ್ತಾರೆ. ಬಂಧಿತ ಆರೋಪಿ ಪವನ್ ಕುಮಾರ್ ಆ್ಯಂಡ್ ಗ್ಯಾಂಗ್ SIMAKH TECHNOLOGY ಮತ್ತು MONTY CORPS ಎಂಬ ಕಂಪನಿ ತೆರೆದಿದ್ದರು. ಈ ಖದೀಮರು ಹೈಫೈ ಟೆಕ್ ಪಾರ್ಕ್ ನಲ್ಲಿ ಕಚೇರಿ‌ ಮಾಡ್ತಿದ್ದರು. ನಮ್ಮ ಕಂಪನಿಯಲ್ಲಿ ಕೆಲಸ ಕೊಡ್ತೀನಿ ಎಂದು ಪರಿಚಯಸ್ಥರ ಮೂಲಕ ನಿರುದ್ಯೋಗಿ ಯುವಕ,ಯುವತಿಯರಿಗೆ ಗಾಳ ಹಾಕುತ್ತಿದ್ದರು. ಕೆಲಸ ಸಿಗುತ್ತೆ ಎಂಬ ಆಸೆ ಬಿದ್ದ ಜನ ಹಣ ನೀಡಿ ವಂಚನೆಗೆ ಒಳಗಾಗಿದ್ದಾರೆ. ಇನ್ನು ಪವನ್ ಆ್ಯಂಡ್ ಟೀಂ ಆಂಧ್ರ ಮೂಲದ ವಿದ್ಯಾವಂತರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದರು. ಇದುವರೆಗೂ ಒಂದೂ ಸಾವಿರಕ್ಕೂ ಹೆಚ್ಚು ಯುವಕ ಯುವತಿಯರಿಗೆ ಮೋಸ ಮಾಡಿ 20 ಕೋಟಿಗೂ ಅಧಿಕ ಹಣ ಪೀಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಸಿಎಂಗೆ ಪತ್ರ ಬರೆದಿದ್ದೇನೆ, ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ಕೃಷ್ಣಭೈರೇಗೌಡ ವಿರುದ್ಧ ತೊಡೆ ತಟ್ಟಿದ ಬಿ.ಆರ್.ಪಾಟೀಲ್

ಒಬ್ಬರಿಂದ ಒಂದು ಲಕ್ಷ ಪಕ್ಕ

ಪವನ್ ಗ್ಯಾಂಗ್, ವರ್ಷಕ್ಕೆ ಐದು ಲಕ್ಷ ಪ್ಯಾಕೇಜ್ ಕೊಡ್ತೀವಿ ಎಂದು ಆಮಿಷವೊಡ್ಡುತ್ತಿದ್ದರು. ಅಷ್ಟೇ ಅಲ್ಲ ಬೇರೆ ಕಂಪನಿಯಲ್ಲಿಯೂ ಕೆಲಸ ಕೊಡಿಸುವುದಾಗಿ ಡ್ರಾಮ ಮಾಡಿ ನಂಬಿಸುತ್ತಿದ್ದರು. ಬಳಿಕ ಒಬ್ಬೊಬ್ಬರಿಂದ ಒಂದರಿಂದ ಎರಡು ಲಕ್ಷದವರೆಗೆ ಸುಲಿಗೆ ಮಾಡುತ್ತಿದ್ದರು. ಸೆಕೆಂಡ್ ಹ್ಯಾಂಡ್ ಲ್ಯಾಪ್ ಟಾಪ್ ಕೊಟ್ಟು ಕೆಲಸಕ್ಕೆ ಸೇರಿಸಿಕೊಳ್ಳುತ್ತಿದ್ದರು. ಒಂದು ತಿಂಗಳ ಸಂಬಳ ಕೂಡ ನೀಡ್ತಿದ್ದರು. ಆ ಬಳಿಕ ಕಂಪನಿ ಕ್ಲೋಸ್ ಮಾಡಿ ಎಸ್ಕೇಪ್ ಆಗುತ್ತಿದ್ದರು. ಹೀಗೆ ನಗರದ ಬೇರೆ ಬೇರೆ ಭಾಗಗಳಲ್ಲಿ ವಂಚನೆ ಮಾಡಿದ್ದಾರೆ. ಹಣ ಕಳೆದುಕೊಂಡ ಯುವಕ, ಯುವತಿಯರು ಕಂಗಾಲಾಗಿದ್ದಾರೆ. ಇಷ್ಟೆಲ್ಲಾ ಆದ ಬಳಿಕ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ಸಂತ್ರಸ್ತರು ದೂರು ನೀಡಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಹಿಡಿದಿದ್ದೇ ರೋಚಕ

ಇನ್ನು ಸಾವಿರಕ್ಕೂ ಅಧಿಕ ಜನರನ್ನು ವಂಚಿಸಿ ದೆಹಲಿಯಲ್ಲಿ ಕುಳಿತಿದ್ದ ಆರೋಪಿ ಪವನ್​ನನ್ನು ಪೊಲೀಸರು ಹಿಡಿದದ್ದೇ ರೋಚಕ. ಆರೋಪಿಯನ್ನು ಬೆಂಗಳೂರಿಗೆ ಕರೆಸಿಕೊಳ್ಳಲು ಪೊಲೀಸರು ಸಂತ್ರಸ್ತರ ಜೊತೆ ಸೇರಿ ಸ್ಕೆಚ್ ಹಾಕಿದ್ದಾರೆ. ಮೂವತ್ತು ಜನರು ಕಂಪನಿ‌ ಸೇರಿಕೊಳ್ಳಲು ಬಂದಿದ್ದಾರೆ. ಹಣದ ಜೊತೆಗೆ ರೆಡಿ ಇದ್ದಾರೆ ಎಂದು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಎದ್ನೋ ಬಿದ್ನೋ ಅಂತಾ ಓಡೋಡಿ ಬೆಂಗಳೂರಿಗೆ ವಿಮಾನದ ಮೂಲಕ ಬಂದ ಪವನ್​ನನ್ನು ಬೆಂಗಳೂರಿನ ಖಾಸಗಿ‌ ಹೋಟೆಲ್​ಗೆ ಕರೆಸಿಕೊಂಡು ಲಾಕ್ ಮಾಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ