AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಕೆಲಸದ ಆಸೆ ತೋರಿಸಿ ಸಾವಿರಾರು ಜನರಿಂದ 20 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿ ಅರೆಸ್ಟ್

ಬೆಂಗಳೂರಲ್ಲಿ ಕೆಲಸ ಅರಸೋ ಯುವಕ ಯುವತಿಯರೇ ಎಚ್ಚರ. ಏಕೆಂದರೆ ತಲೆ ಎತ್ತಿದೆ ಕೆಲಸ ಕೊಡ್ತೀವಿ ಅಂತಾ ವಂಚಿಸೊ ಜಾಲ. ಈ ವಂಚಕ ಜಾಲ ವಂಚಿಸಿರೋದು ಬರೋಬ್ಬರಿ ಒಂದೂ ಸಾವಿರಕ್ಕೂ ಹೆಚ್ಚು ಯುವಕ ಯುವತಿಯರನ್ನ. ಹಾಗಾಗಿ ಕೆಲಸ ಸಿಕ್ತು ಎಂದು ಹಣ ಸುರಿದು ಮೋಸ ಹೋಗದಿರಿ.

ಬೆಂಗಳೂರು: ಕೆಲಸದ ಆಸೆ ತೋರಿಸಿ ಸಾವಿರಾರು ಜನರಿಂದ 20 ಕೋಟಿಗೂ ಅಧಿಕ ಹಣ ಪಡೆದು ವಂಚಿಸಿದ್ದ ಆರೋಪಿ ಅರೆಸ್ಟ್
ಬಂಧನ
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on: Nov 29, 2023 | 9:12 AM

ಬೆಂಗಳೂರು, ನ.29: ಮಾಹಾಮಾರಿ ಕೊರೊನಾ (Coronavirus) ಬಳಿಕ ಬೆಂಗಳೂರಿನಲ್ಲಿ ಕೆಲಸ ಸಿಗುವುದೇ ಕಷ್ಟದ ಸಂಗತಿಯಾಗಿದೆ. ಇದರ ನಡುವೆ ಕೆಲ ಕಿಲಾಡಿ ಖದೀಮರು ಕೆಲಸ ಹುಡುಕುವ ಯುವಕ-ಯುವತಿಯರನ್ನು ಟಾರ್ಗೆಟ್ ಮಾಡಿ ಕೆಲಸದ ಆಮೀಷವೊಡ್ಡಿ ಹಣ ಪೀಕಿ ಮೋಸ ಮಾಡುತ್ತಿದ್ದಾರೆ (Job Fraud). ಪ್ರಕರಣ ಸಂಬಂಧ ವೈಟ್ ಫೀಲ್ಡ್ ಪೊಲೀಸರು ಪವನ್ ಕುಮಾರ್ ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಈ ಆರೋಪಿ ಒಂದಲ್ಲಾ ಎರಡಲ್ಲಾ ಬರೋಬ್ಬರಿ ಒಂದೂ ಸಾವಿರಕ್ಕೂ ಹೆಚ್ಚು ಯುವಕ ಯುವತಿಯರಿಗೆ ಮೋಸ ಮಾಡಿ ಲಕ್ಷ ಲಕ್ಷ ಹಣ ಪೀಕಿದ್ದಾನೆ. ಸದ್ಯ ಈಗ ಕಂಬಿ ಹಿಂದೆ ಬಿದ್ದಿದ್ದಾನೆ.

ಐಟಿ ಕಂಪನಿ ಹೆಸರಲ್ಲಿ ಮಹಾ ಮೋಸ

ಬೆಂಗಳೂರಿನಲ್ಲಿ ಕೆಲಸ ಹುಡುಕುವವರು ತುಂಬಾ ಎಚ್ಚರಿಕೆಯಿಂದಿರಬೇಕು. ಖದೀಮರು ಸ್ಮಾರ್ಟ್ ಆಗಿ ವಂಚನೆಯ ಜಾಲ ಬೀಸಿ ಸಮಸ್ಯೆಯ ಸುಳಿಗೆ ಬೀಳಿಸಿಬಿಡುತ್ತಾರೆ. ಬಂಧಿತ ಆರೋಪಿ ಪವನ್ ಕುಮಾರ್ ಆ್ಯಂಡ್ ಗ್ಯಾಂಗ್ SIMAKH TECHNOLOGY ಮತ್ತು MONTY CORPS ಎಂಬ ಕಂಪನಿ ತೆರೆದಿದ್ದರು. ಈ ಖದೀಮರು ಹೈಫೈ ಟೆಕ್ ಪಾರ್ಕ್ ನಲ್ಲಿ ಕಚೇರಿ‌ ಮಾಡ್ತಿದ್ದರು. ನಮ್ಮ ಕಂಪನಿಯಲ್ಲಿ ಕೆಲಸ ಕೊಡ್ತೀನಿ ಎಂದು ಪರಿಚಯಸ್ಥರ ಮೂಲಕ ನಿರುದ್ಯೋಗಿ ಯುವಕ,ಯುವತಿಯರಿಗೆ ಗಾಳ ಹಾಕುತ್ತಿದ್ದರು. ಕೆಲಸ ಸಿಗುತ್ತೆ ಎಂಬ ಆಸೆ ಬಿದ್ದ ಜನ ಹಣ ನೀಡಿ ವಂಚನೆಗೆ ಒಳಗಾಗಿದ್ದಾರೆ. ಇನ್ನು ಪವನ್ ಆ್ಯಂಡ್ ಟೀಂ ಆಂಧ್ರ ಮೂಲದ ವಿದ್ಯಾವಂತರನ್ನೇ ಹೆಚ್ಚಾಗಿ ಟಾರ್ಗೆಟ್ ಮಾಡುತ್ತಿದ್ದರು. ಇದುವರೆಗೂ ಒಂದೂ ಸಾವಿರಕ್ಕೂ ಹೆಚ್ಚು ಯುವಕ ಯುವತಿಯರಿಗೆ ಮೋಸ ಮಾಡಿ 20 ಕೋಟಿಗೂ ಅಧಿಕ ಹಣ ಪೀಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಇದನ್ನೂ ಓದಿ: ಸಿಎಂಗೆ ಪತ್ರ ಬರೆದಿದ್ದೇನೆ, ತನಿಖೆ ಆಗುವವರೆಗೂ ಸದನಕ್ಕೆ ಹೋಗಲ್ಲ; ಕೃಷ್ಣಭೈರೇಗೌಡ ವಿರುದ್ಧ ತೊಡೆ ತಟ್ಟಿದ ಬಿ.ಆರ್.ಪಾಟೀಲ್

ಒಬ್ಬರಿಂದ ಒಂದು ಲಕ್ಷ ಪಕ್ಕ

ಪವನ್ ಗ್ಯಾಂಗ್, ವರ್ಷಕ್ಕೆ ಐದು ಲಕ್ಷ ಪ್ಯಾಕೇಜ್ ಕೊಡ್ತೀವಿ ಎಂದು ಆಮಿಷವೊಡ್ಡುತ್ತಿದ್ದರು. ಅಷ್ಟೇ ಅಲ್ಲ ಬೇರೆ ಕಂಪನಿಯಲ್ಲಿಯೂ ಕೆಲಸ ಕೊಡಿಸುವುದಾಗಿ ಡ್ರಾಮ ಮಾಡಿ ನಂಬಿಸುತ್ತಿದ್ದರು. ಬಳಿಕ ಒಬ್ಬೊಬ್ಬರಿಂದ ಒಂದರಿಂದ ಎರಡು ಲಕ್ಷದವರೆಗೆ ಸುಲಿಗೆ ಮಾಡುತ್ತಿದ್ದರು. ಸೆಕೆಂಡ್ ಹ್ಯಾಂಡ್ ಲ್ಯಾಪ್ ಟಾಪ್ ಕೊಟ್ಟು ಕೆಲಸಕ್ಕೆ ಸೇರಿಸಿಕೊಳ್ಳುತ್ತಿದ್ದರು. ಒಂದು ತಿಂಗಳ ಸಂಬಳ ಕೂಡ ನೀಡ್ತಿದ್ದರು. ಆ ಬಳಿಕ ಕಂಪನಿ ಕ್ಲೋಸ್ ಮಾಡಿ ಎಸ್ಕೇಪ್ ಆಗುತ್ತಿದ್ದರು. ಹೀಗೆ ನಗರದ ಬೇರೆ ಬೇರೆ ಭಾಗಗಳಲ್ಲಿ ವಂಚನೆ ಮಾಡಿದ್ದಾರೆ. ಹಣ ಕಳೆದುಕೊಂಡ ಯುವಕ, ಯುವತಿಯರು ಕಂಗಾಲಾಗಿದ್ದಾರೆ. ಇಷ್ಟೆಲ್ಲಾ ಆದ ಬಳಿಕ ವೈಟ್ ಫೀಲ್ಡ್ ಪೊಲೀಸ್ ಠಾಣೆಗೆ ಸಂತ್ರಸ್ತರು ದೂರು ನೀಡಿದ್ದು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಹಿಡಿದಿದ್ದೇ ರೋಚಕ

ಇನ್ನು ಸಾವಿರಕ್ಕೂ ಅಧಿಕ ಜನರನ್ನು ವಂಚಿಸಿ ದೆಹಲಿಯಲ್ಲಿ ಕುಳಿತಿದ್ದ ಆರೋಪಿ ಪವನ್​ನನ್ನು ಪೊಲೀಸರು ಹಿಡಿದದ್ದೇ ರೋಚಕ. ಆರೋಪಿಯನ್ನು ಬೆಂಗಳೂರಿಗೆ ಕರೆಸಿಕೊಳ್ಳಲು ಪೊಲೀಸರು ಸಂತ್ರಸ್ತರ ಜೊತೆ ಸೇರಿ ಸ್ಕೆಚ್ ಹಾಕಿದ್ದಾರೆ. ಮೂವತ್ತು ಜನರು ಕಂಪನಿ‌ ಸೇರಿಕೊಳ್ಳಲು ಬಂದಿದ್ದಾರೆ. ಹಣದ ಜೊತೆಗೆ ರೆಡಿ ಇದ್ದಾರೆ ಎಂದು ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಎದ್ನೋ ಬಿದ್ನೋ ಅಂತಾ ಓಡೋಡಿ ಬೆಂಗಳೂರಿಗೆ ವಿಮಾನದ ಮೂಲಕ ಬಂದ ಪವನ್​ನನ್ನು ಬೆಂಗಳೂರಿನ ಖಾಸಗಿ‌ ಹೋಟೆಲ್​ಗೆ ಕರೆಸಿಕೊಂಡು ಲಾಕ್ ಮಾಡಿದ್ದಾರೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ