AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shama Parveen: ಯಾರು ಶಮಾ ಪರ್ವೀನ್ ಅನ್ಸಾರಿ? ಬೆಂಗಳೂರಿನಿಂದ ಜಿಹಾದಿ ಕೃತ್ಯ ಎಸಗುತ್ತಿದ್ದಾಕೆಯ ಹಿನ್ನೆಲೆ ಇಲ್ಲಿದೆ

ಅಲ್ ಕೈದಾ ಇಂಡಿಯನ್ ಸಬ್ ಕಂಟಿನೆಂಟ್ ಪರ ಬೆಂಗಳೂರಿನಲ್ಲಿದ್ದುಕೊಂಡು ಆನ್​ಲೈನ್ ಮೂಲಕ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್ ಅನ್ಸಾರಿಯನ್ನು ಗುಜರಾತ್ ಎಟಿಎಸ್ ಬಂಧಿಸಿದೆ. ಈ ಶಮಾ ಪರ್ವೀನ್ ಮೂಲತಃ ಎಲ್ಲಿಯವಳು, ಬೆಂಗಳೂರಿನಲ್ಲಿದ್ದುಕೊಂಡು ಏನೇನು ಕೃತ್ಯ ಎಸಗಿದ್ದಳು, ಈಕೆಗೆ ಪಾಕಿಸ್ತಾನದ ಯಾವೆಲ್ಲ ಸಂಸ್ಥೆಗಳ ಜತೆ ನಂಟಿತ್ತು ಎಂಬಿತ್ಯಾದಿ ಎಲ್ಲ ರಹಸ್ಯಗಳನ್ನು ಗುಜರಾತ್ ಎಟಿಎಸ್ ಭೇದಿಸಿದೆ. ವಿವರ ತಿಳಿಯಲು ಮುಂದೆ ಓದಿ.

Shama Parveen: ಯಾರು ಶಮಾ ಪರ್ವೀನ್ ಅನ್ಸಾರಿ? ಬೆಂಗಳೂರಿನಿಂದ ಜಿಹಾದಿ ಕೃತ್ಯ ಎಸಗುತ್ತಿದ್ದಾಕೆಯ ಹಿನ್ನೆಲೆ ಇಲ್ಲಿದೆ
ಶಮಾ ಪರ್ವೀನ್ ಅನ್ಸಾರಿ
Ganapathi Sharma
|

Updated on: Jul 31, 2025 | 9:32 AM

Share

ಬೆಂಗಳೂರು, ಜುಲೈ 31: ಅಲ್ ಕೈದಾ (Al-Qaeda) ಉಗ್ರ ಸಂಘಟನೆ ಪರ ಬೆಂಗಳೂರಿನಿಂದ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದ ಶಮಾ ಪರ್ವೀನ್ ಅನ್ಸಾರಿಯನ್ನು (Shama Parveen Ansari) ಗುಜರಾತ್ ಭಯೋತ್ಪಾದನೆ ನಿಗ್ರಹ ದಳದ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಗುಜರಾತ್ ಎಟಿಎಸ್ ಆಕೆಯನ್ನು ಬಂಧಿಸಿದ್ದಲ್ಲದೆ, ಆಕೆಯ ಉಗ್ರ ಚಟುವಟಿಕೆ ಕುರಿತಾದ ಅನೇಕ ರಹಸ್ಯ ಮಾಹಿತಿಗಳನ್ನು ಬಯಲಿಗೆಳೆದಿದೆ. ಶಮಾ ಪರ್ವೀನ್ ಅನ್ಸಾರಿ ಜಾರ್ಖಂಡ್ ಮೂಲದವಳಾಗಿದ್ದು, ಪ್ರಸ್ತುತ ಬೆಂಗಳೂರಿನ ಆರ್‌ಟಿ ನಗರದಲ್ಲಿ ತಾಯಿ, ಸಹೋದರ ಜೊತೆ ವಾಸವಿದ್ದಳು. ಇಲ್ಲಿದ್ದುಕೊಂಡೇ ಆನ್​ಲೈನ್ ಮೂಲಕ ಜಿಹಾದಿ ಚಟುವಟಿಕೆಗಳನ್ನು ನಡೆಸುತ್ತಿದ್ದಳು. ಪ್ರಚೋದನಾಕಾರಿ ಸಂದೇಶಗಳನ್ನು ಹಂಚುತ್ತಿದ್ದಳು.

ಭಾರತದ ವಿರುದ್ಧ ಸಶ್ತ್ರ ಕ್ರಾಂತಿಗೆ ಕರೆ!

ಎಟಿಎಸ್ ಅಧಿಕಾರಿಗಳು ನೀಡಿರುವ ಮಾಹಿತಿ ಪ್ರಕಾರ, ಶಮಾ ಪರ್ವೀನ್ ಅನ್ಸಾರಿ ಭಾರತ ಸರ್ಕಾರದ ವಿರುದ್ಧ ‘ಸಶಸ್ತ್ರ ಕ್ರಾಂತಿ ಅಥವಾ ಜಿಹಾದ್’ಗೆ ಕರೆ ನೀಡುವ ವಿಷಯವನ್ನು ಪ್ರಸಾರ ಮಾಡಲು ಡಿಜಿಟಲ್ ವೇದಿಕೆಗಳನ್ನು ಬಳಸುತ್ತಿದ್ದಳು. ಆಕೆಯ ಚಟುವಟಿಕೆಗಳು ಕೇವಲ ಸೈದ್ಧಾಂತಿಕ ಪ್ರಚಾರಕ್ಕಷ್ಟೇ ಸೀಮಿತವಾಗಿರಲಿಲ್ಲ. ಧಾರ್ಮಿಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಮತ್ತು ಹಿಂಸಾಚಾರವನ್ನು ಪ್ರಚೋದಿಸಲು ಪ್ರಚೋದನಕಾರಿ ಸಂದೇಶಗಳನ್ನು ಹರಡಲು ಆಕೆ ಸಾಮಾಜಿಕ ಮಾಧ್ಯಮವನ್ನು ಸಕ್ರಿಯವಾಗಿ ಬಳಸುತ್ತಿದ್ದಳು ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಯೋತ್ಪಾದಕಿಗೆ 10 ಸಾವಿರಕ್ಕೂ ಹೆಚ್ಚು ಫಾಲೋವರ್ಸ್

ಶಮಾ ಪರ್ವೀನ್ ಅನ್ಸಾರಿ ಎರಡು ಫೇಸ್‌ಬುಕ್ ಪುಟಗಳು ಮತ್ತು ಒಂದು ಇನ್‌ಸ್ಟಾಗ್ರಾಮ್ ಖಾತೆಯನ್ನು ನಿರ್ವಹಿಸುತ್ತಿದ್ದಳು. ಒಟ್ಟಾರೆಯಾಗಿ 10,000 ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಳು. ಈ ವೇದಿಕೆಗಳ ಮೂಲಕ, ಅಲ್ ಕೈದಾ ಮತ್ತು ಇತರ ಮೂಲಭೂತವಾದಿ ಪ್ರಚಾರಕರಿಗೆ ಸಂಬಂಧಿಸಿದ ವಿಷಯವನ್ನು ಹಂಚಿಕೊಂಡಿದ್ದಳು ಎಂದು ಎಟಿಎಸ್‌ನ ಅಧಿಕೃತ ಪ್ರಕಟಣೆ ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.

ಉಗ್ರರ ಭಾಷಣಗಳನ್ನು ಶೇರ್ ಮಾಡುತ್ತಿದ್ದ ಪರ್ವೀನ್

ಎಕ್ಯೂಐಎಸ್ (ಅಲ್ ಕೈದಾ ಇಂಡಿಯನ್ ಸಬ್ ಕಂಟಿನೆಂಟ್) ನಾಯಕಿ ಮೌಲಾನಾ ಅಸಿಮ್ ಉಮರ್, ಹತ್ಯೆಗೀಡಾದ ಅಲ್-ಕೈದಾ ಉಗ್ರ ಅನ್ವರ್ ಅಲ್-ಅವ್ಲಾಕಿ ಮತ್ತು ಲಾಹೋರ್‌ನ ಲಾಲ್ ಮಸೀದಿಯ ಮೌಲಾನಾ ಅಬ್ದುಲ್ ಅಜೀಜ್ ಭಾಷಣಗಳು ಮತ್ತು ವೀಡಿಯೊಗಳನ್ನು ಪರ್ವೀನ್ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಳು. ಘಜ್ವಾ-ಎ-ಹಿಂದ್‌ನಂತಹ ವಿಷಯಗಳನ್ನು ಪ್ರಚಾರ ಮಾಡಿದ್ದಳು.

ಕಾಫಿರ್​ಗಳ ಮೇಲೆ ದಾಳಿಗೆ, ಸರ್ಕಾರ ಉರುಳಿಸಲು ಕರೆ

ಕಾಫಿರ್‌ಗಳ ಮೇಲೆ ದಾಳಿಗೆ ಕರೆ ನೀಡಿ ಮತ್ತು ಭಾರತ ಸರ್ಕಾರವನ್ನು ಉರುಳಿಸಲು ಪ್ರತಿಪಾದಿಸಿದ ಸಂದೇಶಗಳನ್ನೂ ಹಂಚಿಕೊಂಡಿದ್ದಳು.

ಪಾಕಿಸ್ತಾನ ಸಂಸ್ಥೆಗಳೊಂದಿಗೆ ನಿರಂತರ ಸಂಪರ್ಕ

ಶಮಾ ಪರ್ವೀನ್ ಅನ್ಸಾರಿ ಪಾಕಿಸ್ತಾನಿ ಸಂಸ್ಥೆಗಳೊಂದಿಗೆ ಫೋನ್ ಮತ್ತು ಇಮೇಲ್ ಮೂಲಕ ನಿರಂತರ ಸಂಪರ್ಕದಲ್ಲಿರುವುದು ತನಿಯಿಂದ ಗೊತ್ತಾಗಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಜುಲೈ ಆರಂಭದಲ್ಲಿ ಎಟಿಎಸ್ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯ ಸಂದರ್ಭದಲ್ಲಿ ಈಕೆಯ ಸಂಚುಗಳ ಬಗ್ಗೆ ತಿಳಿದುಬಂದಿತ್ತು.

ಇದನ್ನೂ ಓದಿ: ಬೆಂಗಳೂರಿನಿಂದ ಕಾರ್ಯಾಚರಿಸುತ್ತಿದ್ದ ಶಂಕಿತ ಅಲ್ ಕೈದಾ ಭಯೋತ್ಪಾದಕಿ ಶಮಾ ಪರ್ವೀನ್ ಬಂಧಿಸಿದ ಗುಜರಾತ್ ಎಟಿಎಸ್

ಗುಜರಾತ್ ಎಟಿಎಸ್ ಜುಲೈ 23 ರಂದು ದೆಹಲಿ, ನೋಯ್ಡಾ, ಅಹಮದಾಬಾದ್ ಮತ್ತು ಮೋಡಸಾದ ನಾಲ್ವರನ್ನು ಎಕ್ಯೂಐಎಸ್‌ ಪರ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಮೂಲಭೂತವಾದಿ ಮತ್ತು ಜಿಹಾದಿ ಪ್ರಚಾರದ ವೀಡಿಯೊಗಳನ್ನು ಹಂಚಿಕೊಂಡ ಆರೋಪದ ಮೇಲೆ ಬಂಧಿಸಿತ್ತು. ಈ ವೀಡಿಯೊಗಳು ಭಾರತೀಯ ಮುಸ್ಲಿಂ ಯುವಕರನ್ನು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ತಿರಸ್ಕರಿಸಲು ಮತ್ತು ಸಶಸ್ತ್ರ ದಂಗೆಯ ಮೂಲಕ ಷರಿಯಾ (ಇಸ್ಲಾಮಿಕ್ ಕಾನೂನು) ಹೇರಲು ಪ್ರಚೋದಿಸುವ ಗುರಿಯನ್ನು ಹೊಂದಿವೆ ಎಂದು ಎಟಿಎಸ್ ಹೇಳಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ