AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ? ಜಾರಕಿಹೊಳಿ ಲೆಕ್ಕಾಚಾರ ತಪ್ಪಿದ್ದೇಗೆ?: ಇಲ್ಲಿದೆ ಮಾಹಿತಿ

ಕೆಪಿಸಿಸಿಯ ನೂತನ ಅಧ್ಯಕ್ಷರನ್ನಾಗಿ ವಿಧಾನ ಪರಿಷತ್​​ ಸದಸ್ಯ ಮತ್ತು ಕಾಂಗ್ರೆಸ್​​ನ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್​​ ಅವರನ್ನು ಎಐಸಿಸಿ ನೇಮಕ ಮಾಡಿದೆ. ಅಷ್ಟಕ್ಕೂ ಅಧ್ಯಕ್ಷ ಸ್ಥಾನದ ರೇಸ್‌ನಲ್ಲಿದ್ದ ಸತೀಶ್ ಜಾರಕಿಹೊಳಿ ಅವರಿಗೆ ಕೊನೆಕ್ಷಣದಲ್ಲಿ ಹಿನ್ನಡೆಯಾಗಲು ಕಾರಣಗಳೇನು? ಹೈಕಮಾಂಡ್ ಲೆಕ್ಕಾಚಾರ ಏನಾಗಿತ್ತು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ? ಜಾರಕಿಹೊಳಿ ಲೆಕ್ಕಾಚಾರ ತಪ್ಪಿದ್ದೇಗೆ?: ಇಲ್ಲಿದೆ ಮಾಹಿತಿ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸತೀಶ್​​ ಕೈತಪ್ಪಿದ್ಯಾಕೆ?Image Credit source: Tv9 Kannada
ಪ್ರಸನ್ನ ಗಾಂವ್ಕರ್​
| Edited By: |

Updated on: Jun 04, 2026 | 12:52 PM

Share

ಬೆಂಗಳೂರು, ಜೂನ್​​ 04: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ (DK Shivakumar)​​ ರಾಜೀನಾಮೆ ಬೆನ್ನಲ್ಲೇ ಪಕ್ಷದ ನೂತನ ಸಾರಥಿಯಾಗಿ ಪರಿಷತ್​​ ಸದಸ್ಯ ಬಿ.ಕೆ. ಹರಿಪ್ರಸಾದ್​ ಅವರನ್ನು ಎಐಸಿಸಿ ಘೋಷಣೆ ಮಾಡಿದೆ. ಅಷ್ಟಕ್ಕೂ ಹರಿಪ್ರಸಾದ್​​ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್​​ಗೆ ಆದ ಸರ್ಪ್ರೈಸ್​​ ಎಂಟ್ರಿಯಾಗಿತ್ತು. ಅಲ್ಲಿಯವರೆಗೂ ಸತೀಶ್​​ ಜಾರಕಿಹೊಳಿ ಹೆಸರೇ ಮುಂಚೂಣಿಯಲ್ಲಿತ್ತು, ಅವರಿಗೇ ಪಟ್ಟ ಎಂಬದೂ ಬಹುತೇಕ ಫೈನಲ್​​ ಆಗಿತ್ತು. ಆದರೆ ಕೊನೇ ಕ್ಷಣದಲ್ಲಿ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿದ್ದು ಒಬಿಸಿಯ ನಾಯಕನಿಗೆ ಮಹತ್ವದ ಹುದ್ದೆ ಲಭಿಸಿದೆ.

ಸತೀಶ್​​ ಲೆಕ್ಕಾಚಾರ ತಪ್ಪಿದ್ದೇಗೆ?

  • ಕೆಪಿಸಿಸಿ ಹಾಗೂ ಮಿನಿಸ್ಟರ್ ಎರಡೂ ಹುದ್ದೆ ನೀಡಲು ಹೈಕಮಾಂಡ್ ನಿರಾಕರಣೆ
  • ಸಿಎಂ ಸ್ಥಾನಕ್ಕೆ ಯಾವುದೇ ಸಂದರ್ಭದಲ್ಲಿ ಸತೀಶ್ ಕಾಂಪಿಟೇಟರ್​ ಎಂಬ ಆತಂಕ
  • ಡಿಕೆ ಶಿವಕುಮಾರ್​​ಗೆ ಸಮನಾಗಿ ಪವರ್ ಸೆಂಟರ್ ಆಗುತ್ತಾರೆ ಎಂಬ ಭೀತಿ
  • ಶಾಸಕರ ಬೆಂಬಲ ಸತೀಶ್​​ಗೆ ಇದೆ ಎಂಬುದು ದೊಡ್ಡ ಥ್ರೆಟ್
  • ಸಿದ್ದರಾಮಯ್ಯರಿಂದಲೂ ಸತೀಶ್​​ಗೆ ಕೆಪಿಸಿಸಿ ಹೊಣೆ ನೀಡಲು ವಿರೋಧ
  • ತಮ್ಮ ಬೆನ್ನಿಗೆ ನಿಂತಿಲ್ಲ ಎಂಬಂತೆ ಭಾವಿಸಿರುವ ಸಿದ್ದರಾಮಯ್ಯ
  • ಸತೀಶ್ ಅಹಿಂದ ಉತ್ತರಾಧಿಕಾರಿಯಾದರೆ ತಮ್ಮ ಅಸ್ತಿತ್ವ ಅಲುಗಾಡುತ್ತದೆ ಎಂದು ಯೋಚಿಸಿದ ಹಲವರು
  • ಸಂಘಟನೆಯಲ್ಲಿ ಸತೀಶ್ ಕೆಪ್ಯಾಸಿಟಿಯೇ ದೌರ್ಬಲ್ಯವಾಗಿದ್ದು
  • 2028ಕ್ಕೆ ಸತೀಶ್ ಸಿಎಂ ಸ್ಥಾನ ಕ್ಲೇಮ್ ಮಾಡ್ತಾರೆ ಎಂಬ ಭಯ
  • ಶಾಸಕರ ಬೆಂಬಲದ ವಿಚಾರ ಬಂದರೆ ಮತ್ತೆ ಸತೀಶ್ vs ಡಿಕೆಶಿ ಫೈಟ್ ನಡೆಯಬಹುದು
  • ಶಾಸಕರನ್ನು ಸತೀಶ್ ತಮ್ಮ ವೈಯಕ್ತಿಕ ಹಿಡಿತಕ್ಕೆ ತೆಗೆದುಕೊಳ್ಳುತ್ತಾರೆ ಎಂಬ ಆತಂಕ
  • ಜನರನ್ನು ಹಿಡಿದು ಕೂರಿಸಬಲ್ಲ ಪ್ರಭಾವಿ ಮಾತುಗಾರ ಅಲ್ಲ ಎಂಬ ಅಂಶ
  • ಇದೆಲ್ಲಕ್ಕೂ ಪುಷ್ಟಿ ನೀಡುವಂತೆ ಒಬ್ಬನಿಗೆ ಒಂದೇ ಹುದ್ದೆ ಎಂಬ ಹೈಕಮಾಂಡ್ ನಿರ್ಧಾರ

ಇದನ್ನೂ ಓದಿ: ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ; ಬಿಕೆ ಹರಿಪ್ರಾಸದ್​​​ ಒಂದೇ ದಿನ ಡಬಲ್ ಧಮಾಕ

ಸಚಿವ ಸ್ಥಾನವನ್ನೇ ಸತೀಶ್​​ ಆಯ್ದುಕೊಂಡಿದ್ದೇಕೆ?

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಿಂತ ಸಚಿವ ಸ್ಥಾನವೇ ಬೆಸ್ಟ್ ಎಂಬ ನಿರ್ಧಾರಕ್ಕೆ ಸತೀಶ್​​ ಜಾರಕಿಹೊಳಿ ಕೂಡ ಬಂದಿದ್ದರು ಎನ್ನಲಾಗಿದೆ. ಸಚಿವ ಸ್ಥಾನ ಇಲ್ಲದಿದ್ದರೆ ಸರ್ಕಾರದ ಮೇಲೆ ಹಿಡಿತ ಕೈತಪ್ಪುವ ಆತಂಕದ ಜೊತೆಗೆ ಬೆಳಗಾವಿ ರಾಜಕಾರಣದ ಮೇಲೆ ಹಿಡಿತ ಕೈತಪ್ಪುವ ಭೀತಿಯೂ ಅವರಿಗಿತ್ತು. ಕೆಪಿಸಿಸಿ ಮಾತ್ರ ಸಿಕ್ಕಿದರೆ ಸಂಘಟನೆಗೆ ಮಾತ್ರ ಸೀಮಿತವಾಗಬೇಕಾಗುತ್ತದೆ. ಅಲ್ಲದೆ ಸಚಿವಗಿರಿ ಇಲ್ಲದಿದ್ದರೆ ಸಂಘಟನೆಗೆ ಧನ ಬೆಂಬಲ ಸಿಗುವ ಅವಕಾಶವೂ ಕಡಿಮೆ. ಈ ಕಾರಣಕ್ಕೆ ಸಚಿವ ಸ್ಥಾನವೆ ಒಳಿತೆಂದು ಸತೀಶ್​​ ಕೂಡ ಸುಮ್ಮನಾಗಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್