
ಬೆಂಗಳೂರು, ಜೂನ್ 04: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ (DK Shivakumar) ರಾಜೀನಾಮೆ ಬೆನ್ನಲ್ಲೇ ಪಕ್ಷದ ನೂತನ ಸಾರಥಿಯಾಗಿ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಎಐಸಿಸಿ ಘೋಷಣೆ ಮಾಡಿದೆ. ಅಷ್ಟಕ್ಕೂ ಹರಿಪ್ರಸಾದ್ ಹೆಸರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ರೇಸ್ಗೆ ಆದ ಸರ್ಪ್ರೈಸ್ ಎಂಟ್ರಿಯಾಗಿತ್ತು. ಅಲ್ಲಿಯವರೆಗೂ ಸತೀಶ್ ಜಾರಕಿಹೊಳಿ ಹೆಸರೇ ಮುಂಚೂಣಿಯಲ್ಲಿತ್ತು, ಅವರಿಗೇ ಪಟ್ಟ ಎಂಬದೂ ಬಹುತೇಕ ಫೈನಲ್ ಆಗಿತ್ತು. ಆದರೆ ಕೊನೇ ಕ್ಷಣದಲ್ಲಿ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿದ್ದು ಒಬಿಸಿಯ ನಾಯಕನಿಗೆ ಮಹತ್ವದ ಹುದ್ದೆ ಲಭಿಸಿದೆ.
ಇದನ್ನೂ ಓದಿ: ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕ; ಬಿಕೆ ಹರಿಪ್ರಾಸದ್ ಒಂದೇ ದಿನ ಡಬಲ್ ಧಮಾಕ
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಿಂತ ಸಚಿವ ಸ್ಥಾನವೇ ಬೆಸ್ಟ್ ಎಂಬ ನಿರ್ಧಾರಕ್ಕೆ ಸತೀಶ್ ಜಾರಕಿಹೊಳಿ ಕೂಡ ಬಂದಿದ್ದರು ಎನ್ನಲಾಗಿದೆ. ಸಚಿವ ಸ್ಥಾನ ಇಲ್ಲದಿದ್ದರೆ ಸರ್ಕಾರದ ಮೇಲೆ ಹಿಡಿತ ಕೈತಪ್ಪುವ ಆತಂಕದ ಜೊತೆಗೆ ಬೆಳಗಾವಿ ರಾಜಕಾರಣದ ಮೇಲೆ ಹಿಡಿತ ಕೈತಪ್ಪುವ ಭೀತಿಯೂ ಅವರಿಗಿತ್ತು. ಕೆಪಿಸಿಸಿ ಮಾತ್ರ ಸಿಕ್ಕಿದರೆ ಸಂಘಟನೆಗೆ ಮಾತ್ರ ಸೀಮಿತವಾಗಬೇಕಾಗುತ್ತದೆ. ಅಲ್ಲದೆ ಸಚಿವಗಿರಿ ಇಲ್ಲದಿದ್ದರೆ ಸಂಘಟನೆಗೆ ಧನ ಬೆಂಬಲ ಸಿಗುವ ಅವಕಾಶವೂ ಕಡಿಮೆ. ಈ ಕಾರಣಕ್ಕೆ ಸಚಿವ ಸ್ಥಾನವೆ ಒಳಿತೆಂದು ಸತೀಶ್ ಕೂಡ ಸುಮ್ಮನಾಗಿದ್ದಾರೆ ಎನ್ನಲಾಗಿದೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.